August 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕಿನ 11 ಸರ್ಕಾರಿ ಶಾಲೆಗಳಗೆ ಕೆ.ಪಿ.ಎಸ್ ಸ್ಥಾನಮಾನ; ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಸರ್ಕಾರಿ ಶಾಲೆಗಳ ಶೈಕ್ಷಣಿಕ ಅಭಿವೃದ್ಧಿಗೆ ಮಹತ್ವದ ಮೈಲಿಗಲ್ಲು ನಿರ್ಮಾಣವಾಗಿದೆ. ತಾಲೂಕಿನ 10 ಹಿರಿಯ ಪ್ರಾಥಮಿಕ ಶಾಲೆಗಳು ಹಾಗೂ 1 ಸರ್ಕಾರಿ ಪ್ರೌಢಶಾಲೆಯನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಆಗಿ ಮೇಲ್ದರ್ಜೆಗೇರಿಸಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ, ಆಧುನಿಕ ಮೂಲಸೌಕರ್ಯ ಮತ್ತು ಉತ್ತಮ ಶೈಕ್ಷಣಿಕ ಅವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಈ ಕ್ರಮ ಮಹತ್ವದ್ದಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿದ್ದಾರೆ.

ಕೆಪಿಎಸ್ ಆಗಿ ಮೇಲ್ದರ್ಜೆಗೇರಿಸಲಾದ ಶಾಲೆಗಳು:

  • ನಿಟ್ಟಡೆ ಕ್ಲಸ್ಟರ್ – ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ನಿಟ್ಟಡೆ.
  • ಕರಾಯ ಕ್ಲಸ್ಟರ್ – ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಕರಾಯ.
  • ಬಂಗಾಡಿ ಕ್ಲಸ್ಟರ್ – ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಕನ್ಯಾಡಿ–1.
  • ಪುತ್ತಿಲ ಕ್ಲಸ್ಟರ್ – ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಬಾರ್ಯ.
  • ಬಂಗಾಡಿ– ಕ್ಲಸ್ಟರ್ – ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ನಾವೂರು.
  • ಅಣಿಯೂರು–ಕಕ್ಕಿಂಜೆ ಕ್ಲಸ್ಟರ್ – ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಬಯಲು.
  • ನಿಡ್ಲೆ ಕ್ಲಸ್ಟರ್ – ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಕನ್ಯಾಡಿ.
  • ಗುರುವಾಯನಕೆರೆ ಕ್ಲಸ್ಟರ್ – ದ.ಕ. ಜಿಲ್ಲಾ ಪಂಚಾಯತ್ ಸರ್ಕಾರಿ ಪ್ರೌಢಶಾಲೆ, ಗುರುವಾಯನಕೆರೆ.
  • ಆಂಡಿಂಜೆ ಕ್ಲಸ್ಟರ್ – ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಸಾವ್ಯ.
  • ಅಣಿಯೂರು–ಕಕ್ಕಿಂಜೆ ಕ್ಲಸ್ಟರ್ – ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ತೋಟತ್ತಾಡಿ.
  • ಮುಂಡಾಜೆ ಕ್ಲಸ್ಟರ್ – ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಕಿಲ್ಲೂರು.

ಕರ್ನಾಟಕ ಸರ್ಕಾರದ ಈ ನಿರ್ಧಾರದಿಂದ ಬೆಳ್ತಂಗಡಿ ತಾಲೂಕಿನ ಶಿಕ್ಷಣ ಕ್ಷೇತ್ರಕ್ಕೆ ಹೊಸ ಉತ್ತೇಜನ ದೊರೆಯಲಿದ್ದು, ಗ್ರಾಮೀಣ ವಿದ್ಯಾರ್ಥಿಗಳಿಗೆ ನಗರ ಮಟ್ಟದ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸುವಲ್ಲಿ ಕೆಪಿಎಸ್ ಯೋಜನೆ ಮಹತ್ವದ ಹೆಜ್ಜೆಯಾಗಲಿ ಮತ್ತು ಕೆಪಿಎಸ್ ಶಾಲೆಗಳು ಮೇಲ್ದರ್ಜೆಗೆರಿಸಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಅಭಿನಂದನೆ ತಿಳಿಸಿದ್ದಾರೆ.

Related posts

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಸಹೋದರ, ಸಹೋದರಿಯರಿಗೆ ರಾಖಿಯನ್ನು ಕಟ್ಟುವ ಮುಖೇನ ರಕ್ಷಾ ಬಂಧನ ಹಬ್ಬ ಆಚರಣೆ

Suddi Udaya

ಭಾರೀ ಮಳೆಗೆ ತೆಕ್ಕಾರು ಜುಮ್ಮಾ ಮಸೀದಿಯ ಆವರಣದ ತಡೆಗೋಡೆ ಕುಸಿತ

Suddi Udaya

ಬಳಂಜ:ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಶರತ್ ಅಂಚನ್ ಆಯ್ಕೆ

Suddi Udaya

ಫೆ.4-5: ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ

Suddi Udaya

ಗೃಹಲಕ್ಷ್ಮಿ ಯೋಜನೆಯಲ್ಲಿ ತಾಂತ್ರಿಕ ತೊಡಕು, ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭ ಸಂಪೂರ್ಣವಾಗಿ ದೊರೆಯಲು ಕ್ರಮ ವಹಿಸುವಂತೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಪತ್ರ ಬರೆದು ಒತ್ತಾಯ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya
error: Content is protected !!