August 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್ ಡಿ ಎಂ ಪ. ಪೂ. ಕಾಲೇಜು : ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಕಾಲೇಜಿನ ರತ್ನತ್ರಯ ಸಭಾಂಗಣದಲ್ಲಿ ನಡೆಯಿತು.

ಕಾರ್ಯ ಚಟುವಟಿಕೆಗಳನ್ನು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ಪ್ರಾಧ್ಯಾಪಕ ಹಾಗೂ ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿ ಪ್ರಶಾಂತ್ ಬಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು “ಎನ್ ಎಸ್ ಎಸ್ ಸದೃಢ ದೇಶ ನಿರ್ಮಾಣ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ವಿದ್ಯಾರ್ಥಿಗಳು ಎನ್ ಎಸ್ ಎಸ್ ಚಟುವಟಿಕೆಗಳಲ್ಲಿ ಕ್ರೀಯಾಶೀಲರಾಗಿ ಪಾಲ್ಗೊಂಡಾಗ ಉತ್ತಮ ವ್ಯಕ್ತಿತ್ವ ರೂಢಿಸಿಕೊಳ್ಳಲು ಸಾಧ್ಯ. ಸಮಾಜದೊಂದಿಗೆ ಬೆರೆತು ಭವಿಷ್ಯದ ಜೀವನವನ್ನು ರೂಪಿಸಿಕೊಳ್ಳಬಹುದು “ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಚಾರ್ಯರಾದ ಪ್ರಮೋದ್ ಕುಮಾರ್ ರವರು ” ರಾಷ್ಟ್ರೀಯ ಸೇವಾ ಯೋಜನೆ ಸದೃಢ ಯುವ ಜನತೆಯಯನ್ನು ಸೃಷ್ಟಿಸುತ್ತದೆ. ಅರೋಗ್ಯವಂತ ರಾಷ್ಟ ನಿರ್ಮಾಣ ಮಾಡುವಲ್ಲಿ ಎನ್ ಎಸ್ ಎಸ್ ಅತ್ಯವಶ್ಯಕ. ರಾಷ್ಟ್ರೀಯ ಸೇವಾ ಯೋಜನೆ ಮೂಲಕ ಸ್ವಯಂ ಸೇವಕರು ಪಡೆವ ಅನುಭವ ಮುಂದಿನ ಜೀವನಕ್ಕೆ ಉತ್ತಮ ಅಡಿಪಾಯ “ಎಂದು ಹೇಳಿದರು.

ಇದೇ ಸಂದರ್ಭ ಬೆಂಗಳೂರಿನಲ್ಲಿ ನಡೆದ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸಿದ್ದ ಹಿರಿಯ ಸ್ವಯಂ ಸೇವಕ ಸುದರ್ಶನ್ ನಾಯಕ್ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 586 ಅಂಕಗಳನ್ನು ಪಡೆದ ಸ್ವಯಂ ಸೇವಕಿ ಗ್ರಂಥ ಇವರನ್ನು ಸನ್ಮಾನಿಸಲಾಯಿತು.


ವೇದಿಕೆಯಲ್ಲಿ ಯೋಜನಾಧಿಕಾರಿ ವಿಶ್ವನಾಥ್ ಎಸ್, ಸಹ ಯೋಜನಾಧಿಕಾರಿ ಶೋಭಾ ಪಿ. ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಲಹಾ ಸಮಿತಿ ಸದಸ್ಯರಾದ ನಾಗರಾಜ್ ಭಂಡಾರಿ, ಪ್ರಸನ್ನ ಕುಮಾರ್ ಐತಾಳ್, ಕನ್ನಡ ಉಪನ್ಯಾಸಕ ಸುಭಾಸ್ ರಾವ್ ಬೋಳೂರು ಉಪಸ್ಥಿತರಿದ್ದರು.


ಸ್ವಯಂ ಸೇವಕಿ ಅನ್ವಿತಾ ನಿರೂಪಿಸಿ ಘಟಕ ನಾಯಕಿ ನವನೀತು ಸ್ವಾಗತಿಸಿ ನಾಯಕ ವಿಶ್ವಾಸ್ ಧನ್ಯವಾದವಿತ್ತರು.

Related posts

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಎನ್‌ಡಿಎ ದಿಗ್ದರ್ಶನ ಕಾರ್ಯಕ್ರಮ: ಜವಾಬ್ದಾರಿಯುತ ಪ್ರಜೆಯಾಗಿ ದೇಶಸೇವೆ ಮಾಡಲು ಲೆ.ಕ. ರೋಹಿತ್ ಪ್ರಕಾಶ್ ರೈ ಕರೆ

Suddi Udaya

ಮೊಗ್ರು: ಸರಕಾರಿ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಎಸ್.ಡಿ.ಎಮ್.ಪದವಿ ಪೂರ್ವ ಕಾಲೇಜಿನಲ್ಲಿ ಹಸಿರು ಹೊನ್ನು ಕಾರ್ಯಕ್ರಮ

Suddi Udaya

ಗೇರುಕಟ್ಟೆ ಪರಪ್ಪು ಎಸ್.ವೈ.ಎಸ್ ಸಮಿತಿ ರಚನೆ: ಅಧ್ಯಕ್ಷರಾಗಿ ಹನೀಫ್, ಉಪಾಧ್ಯಕ್ಷರಾಗಿ ಹನೀಫ್. ಜಿ ಆಯ್ಕೆ

Suddi Udaya

ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

Suddi Udaya

ಡಿಕೆಶಿ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಶ್ರಮಿಸಿದ ನಾಯಕ: ಕೆ.ಸತೀಶ್ ಕಾಶಿಪಟ್ಣ

Suddi Udaya
error: Content is protected !!