July 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕಿನ 11 ಸರ್ಕಾರಿ ಶಾಲೆಗಳಗೆ ಕೆ.ಪಿ.ಎಸ್ ಸ್ಥಾನಮಾನ; ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಸರ್ಕಾರಿ ಶಾಲೆಗಳ ಶೈಕ್ಷಣಿಕ ಅಭಿವೃದ್ಧಿಗೆ ಮಹತ್ವದ ಮೈಲಿಗಲ್ಲು ನಿರ್ಮಾಣವಾಗಿದೆ. ತಾಲೂಕಿನ 10 ಹಿರಿಯ ಪ್ರಾಥಮಿಕ ಶಾಲೆಗಳು ಹಾಗೂ 1 ಸರ್ಕಾರಿ ಪ್ರೌಢಶಾಲೆಯನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಆಗಿ ಮೇಲ್ದರ್ಜೆಗೇರಿಸಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ, ಆಧುನಿಕ ಮೂಲಸೌಕರ್ಯ ಮತ್ತು ಉತ್ತಮ ಶೈಕ್ಷಣಿಕ ಅವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಈ ಕ್ರಮ ಮಹತ್ವದ್ದಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿದ್ದಾರೆ.

ಕೆಪಿಎಸ್ ಆಗಿ ಮೇಲ್ದರ್ಜೆಗೇರಿಸಲಾದ ಶಾಲೆಗಳು:

  • ನಿಟ್ಟಡೆ ಕ್ಲಸ್ಟರ್ – ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ನಿಟ್ಟಡೆ.
  • ಕರಾಯ ಕ್ಲಸ್ಟರ್ – ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಕರಾಯ.
  • ಬಂಗಾಡಿ ಕ್ಲಸ್ಟರ್ – ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಕನ್ಯಾಡಿ–1.
  • ಪುತ್ತಿಲ ಕ್ಲಸ್ಟರ್ – ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಬಾರ್ಯ.
  • ಬಂಗಾಡಿ– ಕ್ಲಸ್ಟರ್ – ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ನಾವೂರು.
  • ಅಣಿಯೂರು–ಕಕ್ಕಿಂಜೆ ಕ್ಲಸ್ಟರ್ – ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಬಯಲು.
  • ನಿಡ್ಲೆ ಕ್ಲಸ್ಟರ್ – ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಕನ್ಯಾಡಿ.
  • ಗುರುವಾಯನಕೆರೆ ಕ್ಲಸ್ಟರ್ – ದ.ಕ. ಜಿಲ್ಲಾ ಪಂಚಾಯತ್ ಸರ್ಕಾರಿ ಪ್ರೌಢಶಾಲೆ, ಗುರುವಾಯನಕೆರೆ.
  • ಆಂಡಿಂಜೆ ಕ್ಲಸ್ಟರ್ – ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಸಾವ್ಯ.
  • ಅಣಿಯೂರು–ಕಕ್ಕಿಂಜೆ ಕ್ಲಸ್ಟರ್ – ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ತೋಟತ್ತಾಡಿ.
  • ಮುಂಡಾಜೆ ಕ್ಲಸ್ಟರ್ – ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಕಿಲ್ಲೂರು.

ಕರ್ನಾಟಕ ಸರ್ಕಾರದ ಈ ನಿರ್ಧಾರದಿಂದ ಬೆಳ್ತಂಗಡಿ ತಾಲೂಕಿನ ಶಿಕ್ಷಣ ಕ್ಷೇತ್ರಕ್ಕೆ ಹೊಸ ಉತ್ತೇಜನ ದೊರೆಯಲಿದ್ದು, ಗ್ರಾಮೀಣ ವಿದ್ಯಾರ್ಥಿಗಳಿಗೆ ನಗರ ಮಟ್ಟದ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸುವಲ್ಲಿ ಕೆಪಿಎಸ್ ಯೋಜನೆ ಮಹತ್ವದ ಹೆಜ್ಜೆಯಾಗಲಿ ಮತ್ತು ಕೆಪಿಎಸ್ ಶಾಲೆಗಳು ಮೇಲ್ದರ್ಜೆಗೆರಿಸಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಅಭಿನಂದನೆ ತಿಳಿಸಿದ್ದಾರೆ.

Related posts

ಬಳಂಜ : ಬೋಂಟ್ರೊಟ್ಟುಗುತ್ತು ದೈವಸ್ಥಾನದಲ್ಲಿ ಮಹಾ ಚಂಡಿಕಾಯಾಗ: ವಿಧಾನಪರಿಷತ್ ಶಾಸಕ ಕೆ.ಹರೀಶ್ ಕುಮಾರ್ ಸಹಿತ ನೂರಾರು ಭಕ್ತರು ಭಾಗಿ

Suddi Udaya

ಇಂದಬೆಟ್ಟು ಕೋಯನಗರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಐಕ್ಯುಎಸಿ ವತಿಯಿಂದ ಹಳ್ಳಿ ಸಂತೆ ಕಾರ್ಯಕ್ರಮ

Suddi Udaya

ಪಡಂಗಡಿ: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆ ನೀರು

Suddi Udaya

ನಾರಾವಿ: ಬಸದಿಯಲ್ಲಿ ಧಾಮ ಸಂಪ್ರೋಕ್ಷಣಾಪೂರ್ವಕ ಪ್ರತಿಷ್ಠಾ ಮಹೋತ್ಸವ

Suddi Udaya

ಬೆಳ್ತಂಗಡಿ 9/11 ಸಮಸ್ಯೆಗಳ ಬಗ್ಗೆ ರಕ್ಷಿತ್ ಶಿವರಾಂ ದೂರಿನ ಮೇರೆಗೆ ಸಚಿವರು ಸಭೆ ನಡೆಸಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ಶೀಘ್ರ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ

Suddi Udaya
error: Content is protected !!