July 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

572 ಗ್ರಾಮ ಆಡಳಿತ ಅಧಿಕಾರಿ (VAO)ಹುದ್ದೆಗಳಿಗೆ ಅರ್ಜಿ ಆಹ್ವಾನ: ವಿದ್ಯಾಮಾತಾ ಅಕಾಡೆಮಿಯಿಂದ ತರಬೇತಿ ಪ್ರಾರಂಭ: ಪಿಯುಸಿ ಮುಗಿಸಿರುವಂತಹ ಅಭ್ಯರ್ಥಿಗಳಿಗೆ ಅತ್ಯುತ್ತಮ ಅವಕಾಶ

ಬೆಳ್ತಂಗಡಿ: ಪಿಯುಸಿ ಮುಗಿಸಿ ರಾಜ್ಯದಲ್ಲಿ ಸರಕಾರಿ ಉದ್ಯೋಗಕ್ಕೆ ಪ್ರಯತ್ನಿಸುವವರಿಗಾಗಿ KEA ಶುಭ ಸುದ್ದಿ ಒಂದನ್ನು ನೀಡಿದೆ. ಕಂದಾಯ ಇಲಾಖೆಯಲ್ಲಿ ಖಾಲಿಯಿರುವಂತಹ ಸುಮಾರು 572 ಗ್ರಾಮಾಡಳಿತ ಅಧಿಕಾರಿ(VAO) ಹುದ್ದೆಗಳ ಬೃಹತ್ ನೇಮಕಾತಿಗಳಿಗೆ ಅಧಿಕೃತ ಅಧಿಸೂಚನೆಯು ಪ್ರಕಟಗೊಂಡಿದ್ದು, ಉದ್ಯೋಗ ಆಕಾಂಕ್ಷಿಗಳಲ್ಲಿ ಇದು ಹೊಸ ಸಂಚಲವನ್ನು ಮೂಡಿಸಿದೆ.

ದ್ವಿತೀಯ ಪಿಯುಸಿ ಮುಗಿಸಿದ ಅಭ್ಯರ್ಥಿಗಳಿಗೆ ಇದು ಸರಕಾರಿ ಹುದ್ದೆಗೆ ಸೇರಲು ಅತ್ಯುತ್ತಮ ಸುವರ್ಣ ಅವಕಾಶವಾಗಿದ್ದು , ಪಿಯು ಅಥವಾ ತತ್ಸಮಾನ ವಿದ್ಯಾರ್ಹತೆ ಮುಗಿಸಿದವರಿಗೆ ಮಾತ್ರ ಅವಕಾಶವಿದೆ.


ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ತಮ್ಮ ವಯಸ್ಸು 18 ವರ್ಷ ತುಂಬಿರಬೇಕು. ಗರಿಷ್ಠ ವಯೋಮಿತಿಯು ಸಾಮಾನ್ಯ ವರ್ಗಕ್ಕೆ 40 ವರ್ಷಗಳಾಗಿದ್ದು , ಒಬಿಸಿ ಯವರಿಗೆ 43 ವರ್ಷ ,SC/ST ಯವರಿಗೆ 45 ವರ್ಷಗಳಾಗಿರುತ್ತದೆ.

ಮಾಜಿ ಸೈನಿಕರು ಇಲ್ಲವೇ ವಿಶೇಷ ಚೇತನರು ಅಥವಾ ವಿಧವೆಯರಿಗೆ ಇನ್ನೂ ಹೆಚ್ಚುವರಿ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಸಲ್ಲಿಕೆಯ ಪ್ರಾರಂಭ ಜುಲೈ 11 ಆಗಿದ್ದು , ಕೊನೆಯ ದಿನಾಂಕ ಜುಲೈ 30 ಆಗಿರುತ್ತದೆ.
ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾದ ವಿದ್ಯಾಮಾತ ಅಕಾಡೆಮಿ ನೇರ ಮತ್ತು ಆನ್ಲೈನ್ ತರಬೇತಿಯನ್ನು ಆ.5ರಿಂದ ಪ್ರಾರಂಭಿಸಲಿದ್ದು , ತಕ್ಷಣವೇ ಪ್ರವೇಶಾತಿಯನ್ನು ಪ್ರಾರಂಭಿಸಲಾಗಿದೆ.

ಉದ್ಯೋಗಸ್ಥರಿಗೆ , ಗೃಹಿಣಿಯರಿಗೆ ಮತ್ತು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ರಾತ್ರಿ 8 ರಿಂದ 10 ರ ವರೆಗೆ ಆನ್ಲೈನ್ ತರಬೇತಿಗಳನ್ನು ನೀಡಲಾಗುತ್ತದೆ .ನೇರ ತರಗತಿಗಳಿಗೆ ಹಾಜರಾಗುವಂತಹ ಅಭ್ಯರ್ಥಿಗಳು ಇಲ್ಲಿನ APMC ರಸ್ತೆಯಲ್ಲಿರುವ ವಿದ್ಯಾ ಮಾತಾ ಅಕಾಡೆಮಿಯಿಂದ ಬೆ. 9:30 ಯಿಂದ ಸಂಜೆ 4:00 ರವರೆಗೆ ಹೆಸರು ನೋಂದಾಯಿಸಲು ಅವಕಾಶವಿದೆ. ವಾರಾಂತ್ಯ ತರಬೇತಿಗಳು ಕೂಡ ಲಭ್ಯವಿದ್ದು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9620468869 ಅಥವಾ 9945182516 ಸಂಪರ್ಕಿಸಲು ಅಕಾಡೆಮಿ ಪ್ರಕಟಣೆ ತಿಳಿಸಿದೆ.

Related posts

ಗುರುವಾಯನಕೆರೆ ಗೆಳೆಯರ ಬಳಗದ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಅನುಗ್ರಹ ಶಾಲೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳನ್ನು ಕರೆ ತಂದು ಮಹಜರು

Suddi Udaya

ಕಡಿರುದ್ಯಾವರ ಕುಕ್ಕಾವು ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಮಡಂತ್ಯಾರು ಹೈಸ್ಕೂಲ್ ರೀಯೂನಿಯನ್ ವತಿಯಿಂದ ಇತ್ತೀಚೆಗೆ ನಿಧನರಾದ ಡೇವಿಡ್ ಡಿಸೋಜಾರಿಗೆ ಶ್ರದ್ಧಾಂಜಲಿ

Suddi Udaya

ಡಿ.2: ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವಿದ್ಯಾರ್ಥಿಗಳಿಗೆ ರೂ. 25.5 ಲಕ್ಷ ಸ್ಕಾಲರ್ ಶಿಫ್ ನೀಡಿ ರೋಟರಿ ಜಿಲ್ಲೆಯಲ್ಲಿ ಮುಂಚೂಣಿಯಲ್ಲಿದೆ: ಪತ್ರಿಕಾ ಗೋಷ್ಠಿಯಲ್ಲಿ ಜಿಲ್ಲಾ ಗವರ್ನರ್ ರೋ| ವಿಕ್ರಂ ದತ್ತಾ ಪ್ರಶಂಸೆ

Suddi Udaya
error: Content is protected !!