July 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

572 ಗ್ರಾಮ ಆಡಳಿತ ಅಧಿಕಾರಿ (VAO)ಹುದ್ದೆಗಳಿಗೆ ಅರ್ಜಿ ಆಹ್ವಾನ: ವಿದ್ಯಾಮಾತಾ ಅಕಾಡೆಮಿಯಿಂದ ತರಬೇತಿ ಪ್ರಾರಂಭ: ಪಿಯುಸಿ ಮುಗಿಸಿರುವಂತಹ ಅಭ್ಯರ್ಥಿಗಳಿಗೆ ಅತ್ಯುತ್ತಮ ಅವಕಾಶ

ಬೆಳ್ತಂಗಡಿ: ಪಿಯುಸಿ ಮುಗಿಸಿ ರಾಜ್ಯದಲ್ಲಿ ಸರಕಾರಿ ಉದ್ಯೋಗಕ್ಕೆ ಪ್ರಯತ್ನಿಸುವವರಿಗಾಗಿ KEA ಶುಭ ಸುದ್ದಿ ಒಂದನ್ನು ನೀಡಿದೆ. ಕಂದಾಯ ಇಲಾಖೆಯಲ್ಲಿ ಖಾಲಿಯಿರುವಂತಹ ಸುಮಾರು 572 ಗ್ರಾಮಾಡಳಿತ ಅಧಿಕಾರಿ(VAO) ಹುದ್ದೆಗಳ ಬೃಹತ್ ನೇಮಕಾತಿಗಳಿಗೆ ಅಧಿಕೃತ ಅಧಿಸೂಚನೆಯು ಪ್ರಕಟಗೊಂಡಿದ್ದು, ಉದ್ಯೋಗ ಆಕಾಂಕ್ಷಿಗಳಲ್ಲಿ ಇದು ಹೊಸ ಸಂಚಲವನ್ನು ಮೂಡಿಸಿದೆ.

ದ್ವಿತೀಯ ಪಿಯುಸಿ ಮುಗಿಸಿದ ಅಭ್ಯರ್ಥಿಗಳಿಗೆ ಇದು ಸರಕಾರಿ ಹುದ್ದೆಗೆ ಸೇರಲು ಅತ್ಯುತ್ತಮ ಸುವರ್ಣ ಅವಕಾಶವಾಗಿದ್ದು , ಪಿಯು ಅಥವಾ ತತ್ಸಮಾನ ವಿದ್ಯಾರ್ಹತೆ ಮುಗಿಸಿದವರಿಗೆ ಮಾತ್ರ ಅವಕಾಶವಿದೆ.


ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ತಮ್ಮ ವಯಸ್ಸು 18 ವರ್ಷ ತುಂಬಿರಬೇಕು. ಗರಿಷ್ಠ ವಯೋಮಿತಿಯು ಸಾಮಾನ್ಯ ವರ್ಗಕ್ಕೆ 40 ವರ್ಷಗಳಾಗಿದ್ದು , ಒಬಿಸಿ ಯವರಿಗೆ 43 ವರ್ಷ ,SC/ST ಯವರಿಗೆ 45 ವರ್ಷಗಳಾಗಿರುತ್ತದೆ.

ಮಾಜಿ ಸೈನಿಕರು ಇಲ್ಲವೇ ವಿಶೇಷ ಚೇತನರು ಅಥವಾ ವಿಧವೆಯರಿಗೆ ಇನ್ನೂ ಹೆಚ್ಚುವರಿ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಸಲ್ಲಿಕೆಯ ಪ್ರಾರಂಭ ಜುಲೈ 11 ಆಗಿದ್ದು , ಕೊನೆಯ ದಿನಾಂಕ ಜುಲೈ 30 ಆಗಿರುತ್ತದೆ.
ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾದ ವಿದ್ಯಾಮಾತ ಅಕಾಡೆಮಿ ನೇರ ಮತ್ತು ಆನ್ಲೈನ್ ತರಬೇತಿಯನ್ನು ಆ.5ರಿಂದ ಪ್ರಾರಂಭಿಸಲಿದ್ದು , ತಕ್ಷಣವೇ ಪ್ರವೇಶಾತಿಯನ್ನು ಪ್ರಾರಂಭಿಸಲಾಗಿದೆ.

ಉದ್ಯೋಗಸ್ಥರಿಗೆ , ಗೃಹಿಣಿಯರಿಗೆ ಮತ್ತು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ರಾತ್ರಿ 8 ರಿಂದ 10 ರ ವರೆಗೆ ಆನ್ಲೈನ್ ತರಬೇತಿಗಳನ್ನು ನೀಡಲಾಗುತ್ತದೆ .ನೇರ ತರಗತಿಗಳಿಗೆ ಹಾಜರಾಗುವಂತಹ ಅಭ್ಯರ್ಥಿಗಳು ಇಲ್ಲಿನ APMC ರಸ್ತೆಯಲ್ಲಿರುವ ವಿದ್ಯಾ ಮಾತಾ ಅಕಾಡೆಮಿಯಿಂದ ಬೆ. 9:30 ಯಿಂದ ಸಂಜೆ 4:00 ರವರೆಗೆ ಹೆಸರು ನೋಂದಾಯಿಸಲು ಅವಕಾಶವಿದೆ. ವಾರಾಂತ್ಯ ತರಬೇತಿಗಳು ಕೂಡ ಲಭ್ಯವಿದ್ದು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9620468869 ಅಥವಾ 9945182516 ಸಂಪರ್ಕಿಸಲು ಅಕಾಡೆಮಿ ಪ್ರಕಟಣೆ ತಿಳಿಸಿದೆ.

Related posts

ಖಂಡಿಗ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಮತ್ತು ವಿವಿಧ ಸ್ಪರ್ಧೆಗಳು

Suddi Udaya

ಓಡಿಲ್ನಾಳ: ವಲೇರಿಯನ್ ಪಾಯಸ್ ನಿಧನ

Suddi Udaya

ಧರ್ಮಸ್ಥಳದಲ್ಲಿ ವ್ಯಸನ ಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಕಾರ್ಯಕ್ರಮ: ಸಾಧಕ ನವಜೀವನ ಸದಸ್ಯರಿಗೆ ಜಾಗೃತಿ ಅಣ್ಣ ಮತ್ತು ಜಾಗೃತಿ ಮಿತ್ರ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಭಾ ಇದರ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧಕಿ ಶ್ರದ್ದಾ ಶೆಟ್ಟಿ ಎಣಿoಜೆ ರವರಿಗೆ ಕಿರಣ್ ಚಂದ್ರ ಡಿ ಪುಷ್ಪಗಿರಿ ಹಾಗೂ ಭಕ್ತಿ ಹೆಜ್ಜೆ ಬಳಗದಿಂದ ಸನ್ಮಾನ

Suddi Udaya

ಚಾರ್ಮಾಡಿ: ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ  ಕೃಷಿ ನಾಶ

Suddi Udaya
error: Content is protected !!