ಧರ್ಮಸ್ಥಳ ಗ್ರಾಮ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಮಹಿಳಾ ಸ್ನೇಹಿ ಗ್ರಾಮ ಪಂಚಾಯತ್ -ಮಹಿಳಾ ಸಬಲೀಕರಣ ಕಾರ್ಯಕ್ರಮದಡಿಯಲ್ಲಿ ಮಹಿಳೆಯರಿಗೆ ಮುಟ್ಟಿನ ನೈರ್ಮಲ್ಯ ನಿರ್ವಹಣೆ ಹಾಗೂ ಮುಟ್ಟಿನ ಕಪ್ ಬಳಕೆ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು.
ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ ಇವರು ಮುಟ್ಟಿನ ಸಮಯದಲ್ಲಿ ನೈರ್ಮಲ್ಯವನ್ನು ಕಾಪಾಡಿಕೊಳ್ಳುವ ಬಗ್ಗೆ, ಮುಟ್ಟಿನ ಕಪ್ ಬಳಕೆಯ ಪ್ರಯೋಜನಗಳ ಬಗ್ಗೆ ಮಾಹಿತಿ ನೀಡಿದರು. ಸ್ತ್ರೀ ಶಕ್ತಿ ಗೊಂಚಲಿನ ಕಾರ್ಯದರ್ಶಿ ವಸಂತಿ, ಕೋಶಾಧಿಕಾರಿ ಶ್ರೀಜಾ ಉಪಸ್ಥಿತರಿದ್ದರು. ಮಾನ್ವಿಶ್ರೀ ಸಂಜೀವಿನಿ ಒಕ್ಕೂಟದ ಎಲ್ ಸಿ ಆರ್ ಪಿ ಪುಷ್ಪಾವತಿ ಅಧ್ಯಕ್ಷತೆ ವಹಿಸಿದ್ದರು. ಸ್ತ್ರೀ ಶಕ್ತಿ ಗೊಂಚಲಿನ ಸದಸ್ಯರು, ಅಂಗನವಾಡಿ ಕಾರ್ಯಕರ್ತರು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.















