July 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯಾವುದೇ ನೋಟೀಸು ನೀಡದೆ, ಕಾರಣವಿಲ್ಲದೆ ಏಕಾಏಕಿ ಗೃಹರಕ್ಷಕದಳದ ಘಟಕಾಧಿಕಾರಿಯನ್ನು ಬದಲಾವಣೆ ಮಾಡಿರುವುದು ಯಾವ ನ್ಯಾಯ: ನಾನು ಯಾವುದೇ ತಪ್ಪನ್ನು ಮಾಡಿಲ್ಲ, ಜಿಲ್ಲೆಯ ಆದೇಶವನ್ನು ದುರುಪಯೋಗ ಮಾಡಿಲ್ಲ 36 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ನನಗೆ ನ್ಯಾಯ ಕೊಡಿ : ಜಯಾನಂದ ಲಾಯಿಲ

ಬೆಳ್ತಂಗಡಿ: ಯಾವುದೇ ಮಾಹಿತಿ ನೀಡದೆ, ನೋಟೀಸು ನೀಡದೆ, ಯಾವುದೇ ಕಾರಣವಿಲ್ಲದೆ ಏಕಾಏಕಿ ಬೆಳ್ತಂಗಡಿ ತಾಲೂಕು ಗೃಹರಕ್ಷಕದಳದ ಘಟಕಾಧಿಕಾರಿಯನ್ನು ಬದಲಾವಣೆ ಮಾಡಿ ಬೇರೆಯವರನ್ನು ನೇಮಿಸಿರುವುದು ಸರಿಯಲ್ಲ, ನಾನು ಯಾವುದೇ ತಪ್ಪನ್ನು ಮಾಡಿಲ್ಲ, ಜಿಲ್ಲೆಯ ಆದೇಶವನ್ನು ದುರುಪಯೋಗ ಮಾಡಿಲ್ಲ ಆದ್ದರಿಂದ ನಮ್ಮ ಘಟಕಕ್ಕೆ ಭೇಟಿ ನೀಡಿ, ನಮ್ಮ ಎಲ್ಲಾ ಸದಸ್ಯರ ಸಮ್ಮುಖದಲ್ಲಿ ಪರಿಶೀಲನೆ ನಡೆಸಿ, ಸೂಕ್ತ ಕ್ರಮ ಕೈಗೊಂಡು ಪ್ರಾಮಾಣಿಕವಾಗಿ ಸತತ 36 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ನನಗೆ ನ್ಯಾಯ ಒದಗಿಸಬೇಕು ಎಂದು ಜಯಾನಂದ ಲಾಯಿಲ ಅವರು ಗೃಹರಕ್ಷಕ ದಳದ ಜಿಲ್ಲಾ ಸಮಾದೇಷ್ಟರಿಗೆ ಮನವಿ ಸಲ್ಲಿಸಿದ್ದಾರೆ.

1989ರಿಂದ ನಾನು ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸುತಾ ಘಟಕವನ್ನು ಮುನ್ನಡೆಸುತ್ತಾ ಬರುತ್ತಿದ್ದೇನೆ. ಜಿಲ್ಲಾ ಕಚೇರಿಯ ಎಲ್ಲಾ ಆದೇಶಗಳನ್ನು ಚಾಚುತಪ್ಪದೇ ಪಾಲಿಸುತ್ತಾ ಬಂದಿದ್ದೇನೆ. ತಾಲೂಕು, ಜಿಲ್ಲೆ, ಹೊರಜಿಲ್ಲೆ, ಹೊರ ರಾಜ್ಯಗಳಲ್ಲಿ ನಡೆದ ಚುನಾವಣಾ ಕರ್ತವ್ಯಕ್ಕೆ ಜಿಲ್ಲಾ ಕಚೇರಿಯ ಆದೇಶದಂತೆ ಸಿಬಂದಿಗಳನ್ನು ನಿಯೋಜಿಸುತ್ತಾ ಬಂದಿರುವ ನನ್ನನ್ನು ಯಾವುದೇ ಕಾರಣ ನೀಡದೆ, ನೋಟೀಸು ನೀಡದೆ, ನಮ್ಮ ಘಟಕದ ಯಾವ ಸಿಬ್ಬಂದಿಗಳಿಗೂ ಗೊತ್ತಿಲ್ಲದೆ, ಇಲ್ಲಿಯವರೆಗೆ ಯಾವುದೇ ಚುನಾವಣಾ ಕರ್ತವ್ಯಕ್ಕೆ ಅಥವಾ ಬಂದೋಬಸ್ತ್ ಕರ್ತವ್ಯಕ್ಕೆ ಬಾರದ ಓರ್ವ ಸಿಬಂದಿಗೆ ತಾವುಗಳು ಪ್ರಭಾರ ಘಟಕಾಧಿಕಾರಿಯನ್ನಾಗಿ ನೇಮಿಸಿರುವುದು ಯಾವ ನ್ಯಾಯ ಎಂದು ಮನವಿಯಲ್ಲಿ ಪ್ರಶ್ನಿಸಿದ್ದಾರೆ.

ಅವರಿಗಿಂತ ನಮ್ಮ ಘಟಕದಲ್ಲಿ ಬಹಳಷ್ಟು ಸಿನಿಯರ್ ಅಫೀಸರ‍್ಸ್ ತರಬೇತಿ ಆದ ಸಿಬ್ಬಂದಿಗಳು ಇದ್ದಾರೆ. ಘಟಕ್ಕೆ ಬಾರದೆ ಯಾವ ಆಧಾರದಲ್ಲಿ ಅವರನ್ನು ಆಯ್ಕೆ ಮಾಡಿದ್ದೀರಿ ಎಂಬುದರ ಬಗ್ಗೆ ನನಗೆ ಸ್ವಷ್ಟವಾದ ಮಾಹಿತಿಯನ್ನು ನೀಡುವಂತೆ ವಿನಂತಿಸಿಕೊಳ್ಳುತ್ತಿದ್ದೇನೆ. ಅಲ್ಲದೆ ಆಸಕ್ತಿ ಇದ್ದವರು 7 ದಿವಸದ ಒಳಗೆ ಅರ್ಜಿ ಹಾಕಲು ಅವಕಾಶ ನೀಡಿ ಆದೇಶ ಮಾಡಿ, ತಾವು ೭ ದಿವಸಗಳ ಮುಂಚಿತವಾಗಿ ಅವರೊಬ್ಬರಿಂದ ಅರ್ಜಿಯನ್ನು ತರಿಸಿ ಅವರಿಗೆ ಆದೇಶವನ್ನು ಮಾಡಿದ್ದೀರಿ ಇದು ಕಾನೂನು ಬಾಹಿರವಲ್ಲವೇ, ಜು.7ರಂದು ವಾರದ ಕವಾಯಿತಿಗೆ ಬಂದು ಅವರ ಬ್ಯಾಗ್‌ನಿಂದ ಆದೇಶವನ್ನು ಭೋದಕರು ತೆಗೆದುಕೊಂಡು ನನಗೆ ಹೇಳುತ್ತಾರೆ ಅದು ಯಾವ ನ್ಯಾಯ, ನಮ್ಮ ಘಟಕದ 25 ಮಂದಿ ಸಿಬಂದಿಗಳು ಬದಲಾವಣೆ ಮಾಡದಂತೆ ಮನವಿ ನೀಡಿದ್ದರೂ, ಅದರನ್ನು ಪರಿಗಣನೆಗೆ ತೆಗೆದುಕೊಳ್ಳಲಿಲ್ಲ, ಆದ್ದರಿಂದ ಮತ್ತೊಮ್ಮೆ ಇದನ್ನು ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಂಡು ನನಗೆ ನ್ಯಾಯ ಒದಗಿಸಬೇಕು ಎಂದು ಜಯಾನಂದ ಲಾಯಿಲ ಮನವಿಯಲ್ಲಿ ಒತ್ತಾಯಿಸಿದ್ದಾರೆ.

Related posts

ಬoಗೇರಕಟ್ಟ ಸಾಲುಮರ, ಕುಕ್ಕಳಬೆಟ್ಟು, ಪಾರೆoಕಿ ಅoಗನವಾಡಿ ಮಕ್ಕಳಿಗೆ ಒಕ್ಕೂಟದ ವತಿಯಿಂದ ಡಾ| ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಸಿಹಿ ತಿಂಡಿ ವಿತರಣೆ

Suddi Udaya

ನಾಳೆ ವಿದ್ಯುತ್‌ ನಿಲುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಸಿದ್ಧಿಶ್ರೀ ಸಭಾಭವನಕ್ಕೆ ಸಹಾಯಧನ ಚೆಕ್ ಹಸ್ತಾಂತರ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಹಕಾರದೊಂದಿಗೆ ಮುಂಗಾರು ಮತ್ತು ಹಿಂಗಾರಿನಲ್ಲಿ ತಾಲೂಕಿನಲ್ಲಿ 500 ಎಕ್ರೆಯಲ್ಲಿ ಯಾಂತ್ರಿಕೃತ ಭತ್ತದ ನಾಟಿ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಶ್ರೀ ಶಾರದಾ ಪೂಜೆ

Suddi Udaya

ಮಾಜಿ ಶಾಸಕ ದಿ. ಕೆ. ವಸಂತ ಬಂಗೇರ ಅವರಿಗೆ ವಿಧಾನಸಭೆಯಲ್ಲಿ ಸಂತಾಪ ಸೂಚಿಸಿದ ಶಾಸಕ ಹರೀಶ್‌ ಪೂಂಜ

Suddi Udaya
error: Content is protected !!