August 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ಕಾನೂನು ಸಾಕ್ಷರತಾ ಸಂಘದ ವತಿಯಿಂದ ವಿದ್ಯಾರ್ಥಿಗಳಲ್ಲಿ ಕಾನೂನು ಜಾಗೃತಿ ಹಾಗೂ ಕಾನೂನು ಅರಿವು ಮೂಡಿಸುವ ಉದ್ದೇಶದಿಂದ ಕಾನೂನು ಅರಿವು ಕಾರ್ಯಕ್ರಮ ವನ್ನು ಕಾಲೇಜಿನ ಸಭಾಂಗಣದಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ. ವಹಿಸಿ, ವಿದ್ಯಾರ್ಥಿಗಳು ತಮ್ಮ ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನು ತಿಳಿದು ಕಾನೂನು ಪಾಲಿಸುವ ಆದರ್ಶ ನಾಗರಿಕರಾಗಬೇಕು ಎಂದು ಕರೆ ನೀಡಿದರು.

ಸಂಪನ್ಮೂಲ ವ್ಯಕ್ತಿಯಾಗಿ ಕಾಲೇಜಿನ ಹಿರಿಯ ವಿದ್ಯಾರ್ಥಿ, ಉಚ್ಚ ನ್ಯಾಯಾಲಯದ ವಕೀಲರಾದ ಜಿತಿನ್ ಜಿಜೋ ಅವರು ಭಾಗವಹಿಸಿ, ಮಕ್ಕಳ ಲೈಂಗಿಕ ಕಿರುಕುಳ ತಡೆ ಕಾಯಿದೆ (ಪೋಕ್ಸೊ ), ಕೆಲಸದ ಸ್ಥಳಗಳಲ್ಲಿ ಹೆಣ್ಣು ಮಕ್ಕಳ ಕಿರುಕುಳ ವಿರುದ್ಧದ ಕಾನೂನು, ಮಾದಕ ವಸ್ತುಗಳ ದುರುಪಯೋಗ ಮತ್ತು ಅದರ ಪರಿಹಾರ ಕ್ರಮಗಳು, ಮಹಿಳಾ ಮತ್ತು ಮಕ್ಕಳ ರಕ್ಷಣಾ ಕಾನೂನುಗಳು ಸೇರಿದಂತೆ ಹಲವು ಮಹತ್ವದ ವಿಷಯಗಳ ಕುರಿತು ಉಪನ್ಯಾಸ ನೀಡಿದರು.

ಕಾನೂನು ಸಾಕ್ಷರತಾ ಸಂಘದ ಸಂಯೋಜಕರಾದ ಶ್ರೀಮತಿ ಮೀನಾಕ್ಷಿ ಎನ್. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾನೂನು ಸಾಕ್ಷರತಾ ಸಂಘ ಆಯೋಜಿಸಿದ್ದ ಪೋಸ್ಟರ್ ಡ್ರಾಯಿಂಗ್ ಮೇಕಿಂಗ್ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.

ಕಾರ್ಯಕ್ರಮದ ಆರಂಭದಲ್ಲಿ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಮೀನಾಕ್ಷಿ ಎನ್.ಅವರು ಅತಿಥಿಗಳನ್ನು ಸ್ವಾಗತಿಸಿದರು. ಪ್ರಥಮ ಕಲಾ ವಿಭಾಗದ ಕುಮಾರಿ ಜೊವಿಟಾ ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು. ಕಾನೂನು ಸಾಕ್ಷರತಾ ಸಂಘದ ವಿದ್ಯಾರ್ಥಿ ಪ್ರತಿನಿಧಿಯಾಗಿರುವ ಕುಮಾರಿ ಸುಮಶ್ರೀ ಅವರು ವಂದನಾರ್ಪಣೆ ಸಲ್ಲಿಸಿದರು..

Related posts

ಉಜಿರೆ: ಮಿತ್ರ ಮಹಿಳಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಮೂರನೇ ಬಾರಿ ಗಡಿಪಾರು ಆದೇಶ

Suddi Udaya

ಕರಾಯ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶತರುದ್ರಾಭಿಷೇಕ-ಅನುಜ್ಞಾ ಕಲಶ

Suddi Udaya

ಧರ್ಮಸ್ಥಳ ಕುಡುಮಶ್ರೀ ಟೈಗರ್ಸ್ ವತಿಯಿಂದ ಅದ್ದೂರಿ ಪಿಲಿಏಸ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಚೈತನ್ಯ ವಿಮಾ ಪರಿಹಾರ

Suddi Udaya

ಕುಕ್ಕೇಡಿ ಶ್ರೀ ಶಾರದಾಂಭ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!