August 27, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ಬೆಳ್ತಂಗಡಿ : ಹೆಬ್ರಿಯಿಂದ ನಾರಾವಿಯ ಮನೆಯೊಂದಕ್ಕೆ ಕೆಲಸಕ್ಕೆಂದು ಬಂದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಈದು ಗ್ರಾಮದ ತೋಟವೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮೃತ ವ್ಯಕ್ತಿ ಹೆಬ್ರಿ ಮಿಯಾರು ನಾಲ್ಕೂರು ನಿವಾಸಿ ಪ್ರಭಾಕರ ಶೆಟ್ಟಿ (45) ಎಂಬವರಾಗಿದ್ದಾರೆ.ಇವರು ಜು.7ರಂದು ಬೆಳ್ತಂಗಡಿ ತಾಲೂಕಿನ ನಾರಾವಿ ಅರಸಿಕಟ್ಟೆ ನಿವಾಸಿ ರವಿರಾಜ್ ಜೈನ್ ಎಂಬವರ ಮನೆಗೆ ರೊಟ್ಟಿ ಮಾಡಲು ಬಂದಿದ್ದರು. ಮದ್ಯಾಹ್ನದ ವರೆಗೆ ಕೆಲಸ ಮಾಡಿ ಬಳಿಕ ಅವರು ಅಲ್ಲಿಂದ‌ ಹಿಂತಿರುಗಿದ್ದರು ಆದರೆ ಅಂದು ಪ್ರಭಾಕರ ಶೆಟ್ಟಿ ಮರಳಿ ಮನೆ ಸೇರಿರಲಿಲ್ಲ. ಆತನಿಗಾಗಿ ಹುಡುಕಾಟ ನಡೆಸಿದರೂ ಯಾವುದೇ ಮಾಹಿತಿಗಳು ಸಿಗದ ಹಿನ್ನಲೆಯಲ್ಲಿ ಈ ಬಗ್ಗೆ ಹೆಬ್ರಿ ಪೊಲೀಸರಿಗೆ ದೂರು ನೀಡಲಾಗಿತ್ತು.ಉಮೇಶ್‌ ಎಂಬವರು ನೀಡಿದ ದೂರಿನಂತೆ ಪ್ರಕರಣ‌ದಾಖಲಿಸಿಕೊಂಡ ಪೊಲೀಸರು ಪ್ರಕರಣವನ್ನು ಬೆಳ್ತಂಗಡಿಯ ವೇಣೂರು ಠಾಣೆಗೆ ವರ್ಗಾಯಿಸಿದ್ದರು.

ಇದೀಗ ಜು.12 ರಂದು ಭಾನುವಾರ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಈದುವಿನ ನಿವಾಸಿ ವಿಘ್ನೇಶ್ ಭಟ್ ಎಂಬವರ ತೋಟದಲ್ಲಿ ಕೊಳೆತ ಸ್ಥಿತಿಯಲ್ಲಿ ಪ್ರಭಾಕರ ಶೆಟ್ಟಿಯ ಮೃತದೇಹ ಪತ್ತೆಯಾಗಿದೆ.ಸ್ಥಳಕ್ಕೆ ಪೊಲೀಸರು‌ ತೆರಳಿ ಪರಿಶೀಲನೆ ನಡೆಸಿದ್ದು ಈತ ಯಾವ ರೀತಿ ಮೃತಪಟ್ಟಿರಬಹುದು ಎಂಬ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.ಮೃತ ಪ್ರಭಾಕರ ಒಂದಿಷ್ಟು ಮಾನಸಿಕ ಸಮಸ್ಯೆಯಿಂದ‌ ಬಳಲುತ್ತಿದ್ದ ಎನ್ನಲಾಗಿದ್ದು ಪೊಲೀಸರ ತನಿಖೆಯಿಂದಷ್ಟೆ ಹೆಚ್ಚಿನ ಮಾಹಿತಿಗಳು ತಿಳಿದು ಬರಬೇಕಾಗಿದೆ

Related posts

ಗೇರುಕಟ್ಟೆಯಲ್ಲಿ ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ಶುಭಾರಂಭ

Suddi Udaya

ಕೊಕ್ಕಡ ಕೇಸರಿ ಗೆಳೆಯರ ಬಳಗದ ವತಿಯಿಂದ ಅಯೋಧ್ಯ ಟ್ರೋಫಿ: ಅಯೋಧ್ಯ ಕರಸೇವಕರಿಗೆ ಸನ್ಮಾನ

Suddi Udaya

ಉಜಿರೆ : ಶ್ರೀ  ಧ.ಮಂ. ಎಂಜಿನೀಯರಿಂಗ್ ಕಾಲೇಜಿನಲ್ಲಿ ಪ.ಪೂ. ವಿದ್ಯಾರ್ಥಿಗಳ ರಾಜ್ಯ ಮಟ್ಟದ ವಿಜ್ಞಾನ ಮೇಳ “ಎಕ್ಸ್ ಪೀರಿಯ-2023

Suddi Udaya

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಶೋಭ ನಾರಾಯಣ ಗೌಡ ನೇಮಕ.

Suddi Udaya

“ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ , ಬಿ.ವಿ.ಕೆ ಇರ್ವತ್ರಾಯ ಮೆಮೋರಿಯಲ್ ಚಾರಿಟೆಬಲ್ ಫೌಂಡೇಶನ್ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಥಮ ಚಿಕಿತ್ಸೆ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಶಿಬಿರ

Suddi Udaya

ರೂ. 3ಕೋಟಿ ವೆಚ್ಚದಲ್ಲಿ ನಡ ಗ್ರಾಮದ ಪಡ್ಪು- ಕನ್ಯಾಡಿ- ಭೀಮಂಡೆ ಕಾಂಕ್ರೀಟಿಕರಣಗೊಳಿಸಿದ ರಸ್ತೆಯ ಉದ್ಘಾಟನೆ

Suddi Udaya
error: Content is protected !!