August 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೂ.1.00 ಕೋಟಿ ವೆಚ್ಚದಲ್ಲಿ ಬಳಂಜ- ಸುದೆಗುಂಡಿ ಸಂಪರ್ಕ ರಸ್ತೆ ಕಾಂಕ್ರೀಟಿಕರಣ: ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ:ಬೇಡಿಕೆಗೆ ಸ್ಪಂದಿಸಿದ ಶಾಸಕರಿಗೆ ಅಭಿನಂದಿಸಿದ ಗ್ರಾಮಸ್ಥರು

ಬಳಂಜ: ಕಳೆದ ಹಲವು ವರ್ಷಗಳಿಂದ ಬಳಂಜ- ಸುದೆಗುಂಡಿ- ತೆಂಕಕಾರಂದೂರು ಗ್ರಾಮದ ಜನರ ಬೇಡಿಕೆಯಾದ ಬಳಂಜ ಸುದೆಗುಂಡಿ ರಸ್ತೆಗೆ ಶಾಸಕ ಹರೀಶ್ ಪೂಂಜರವರು ಜುವ 12ರಂದು ಶಿಲಾನ್ಯಾಸ ನೇರವೇರಿಸಿದರು.

ರೂ.1.00 ಕೋಟಿ ವೆಚ್ಚದಲ್ಲಿ ರಸ್ತೆ ಕಾಂಕ್ರೀಟಿಕರಣಗೊಳ್ಳುತ್ತಿದ್ದು ಈ ಬಳಂಜ- ನಾಲ್ಕೂರು- ತೆಂಕಕಾರಂದೂರು ಗ್ರಾಮದ ಜನರ ಬೇಡಿಕೆಗೆ ಸ್ಪಂದಿಸುವುದಾಗಿ ಶಾಸಕ ಹರೀಶ್ ಪೂಂಜರವರು ತಿಳಿಸಿದರು. ಬಳಂಜ-ನಾಲ್ಕೂರು- ತೆಂಕಕಾರಂದೂರುವಿನ ಆಟೋ ಚಾಲಕ ಮಾಲಕ ಸಂಘದಿಂದ ಸುಸಜ್ಜಿತ ಆಟೋ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಿಕೊಡುವಂತೆ ಶಾಸಕರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ರಾಕೇಶ್ ಹೆಗ್ಡೆ, ಪ್ರಗತಿಪರ ಕೃಷಿಕರಾದ ಸಂತೋಷ್ ಕುಮಾರ್ ಕಾಪಿನಡ್ಕ, ಸತೀಶ್ ರೈ ಬಾರ್ದಡ್ಕ,ಹಿರಿಯರಾದ ಯುವರಾಜ್ ಜೈನ್,ಇಂಜೀನಿಯರ್ ದಶರಥ,ಗಣೇಶ್ ಸಂಭ್ರಮ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಅಗ್ನೀವೀರ್ ಯೋಜನೆಯಲ್ಲಿ ಭಾರತೀಯ ಸೇನೆಗೆ ನೇಮಕಗೊಂಡಿರುವ ಬಳಂಜದ ರಂಜಿತ ಸಹೋದರರ ಹೆತ್ತವರನ್ನು ಗೌರವಿಸಲಾಯಿತು. ಅನುದಾನ ನೀಡಿದ ಶಾಸಕರನ್ನು ಅಭಿನಂದಿಸಲಾಯಿತು.

Related posts

ನೆಟ್ ಬಾಲ್ ಸೀನಿಯರ್ ನ್ಯಾಷನಲ್ ಚಾಂಪಿಯನ್ ಶಿಪ್ ಪಂದ್ಯಾಟ: ಎಸ್ ಡಿ ಎಂ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ

Suddi Udaya

ನಾವೂರು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬೈಪಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಪಂಚಕಲ್ಯಾಣಪೂರ್ವಕ ಪ್ರತಿಷ್ಠಾ ಮಹೋತ್ಸವ

Suddi Udaya

ನೆರಿಯ: ಬೈಲಂಗಡಿ ಬಸದಿಯ ಪ್ರಧಾನ ಅರ್ಚಕ ಮಿತ್ರಸೇನಾ ಇಂದ್ರ ನಿಧನ

Suddi Udaya

ಉಜಿರೆಯಲ್ಲಿ ನ್ಯೂ ಚೆನೈ ಶಾಪಿಂಗ್ ದಿ ಫ್ಯಾಮಿಲಿ ಶಾಪ್ ಅದ್ದೂರಿ ಪ್ರಾರಂಭ: ಮಕ್ಕಳಿಂದ ದೊಡ್ಡವರವರೆಗೆ ಯಾವುದೇ ವಸ್ತು ತೆಗೆದುಕೊಂಡರು ರೂ.199

Suddi Udaya

ಗುರುವಾಯನಕೆರೆ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.54.80 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.10 ಡಿವಿಡೆಂಡ್

Suddi Udaya
error: Content is protected !!