July 12, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ವೈಯಕ್ತಿಕ ದ್ವೇಷ ಹಿನ್ನೆಲೆ ವ್ಯಕ್ತಿಯ ಮೇಲೆ ಹಲ್ಲೆ – ಪ್ರಕರಣ ದಾಖಲು

ಬೆಳ್ತಂಗಡಿ: ವೈಯಕ್ತಿಕ ದ್ವೇಷ ಹಿನ್ನೆಲೆಯಲ್ಲಿ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಎಸ್ಸಿ/ಎಸ್ಟಿ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ತಾಲೂಕಿನ ಪಟ್ರಮೆಯಲ್ಲಿ ಜು.10 ರಂದು ಸಂಜೆ ಸುಮಾರು 7:30 ಗಂಟೆಗೆ ಪಟ್ರಮೆ ನಿವಾಸಿ ಬಾಲಕೃಷ್ಣ ಎಂಬವರು ಪರಿಚಯದ ದಿನೇಶ್ ಅವರ ಆಟೋ ರಿಕ್ಷಾದಲ್ಲಿ ಕೊಕ್ಕಡ ಕಡೆಗೆ ತೆರಳುತ್ತಿದ್ದ ಸಮಯದಲ್ಲಿ ದಿನೇಶ್ ಅವರು ರಾಘವ ಎಂಬವರ ಅಂಗಡಿಯ ಬಳಿ ಆಟೋ ನಿಲ್ಲಿಸಿ ಅಂಗಡಿಗೆ ತೆರಳಿದ್ದರು. ಆ ಸಂದರ್ಭದಲ್ಲಿ ರಾಘವ ಮತ್ತು ದಿನೇಶ್ ಅವರ ನಡುವೆ ಮಾತುಕತೆ ನಡೆಯುತ್ತಿರುವಾಗ ಆಟೋದಲ್ಲಿದ್ದ ಬಾಲಕೃಷ್ಣ ಅವರು ಆ ಕಡೆಗೆ ನೋಡಿದ ವಿಚಾರಕ್ಕೆ, ವೈಯಕ್ತಿಕ ಕಾರಣದಿಂದ ಅಂಗಡಿಯ ಮಾಲೀಕ ರಾಘವರ ಮಗ ಜಗದೀಶ ಎಂಬಾತನು ಬಾಲಕೃಷ್ಣ ರವರ ಬಳಿಗೆ ಬಂದು, “ನೀನು ಯಾಕೆ ಇಲ್ಲಿಗೆ ಬಂದಿದ್ದು?” ಎಂದು ಪ್ರಶ್ನಿಸಿ ಹಲ್ಲೆ ನಡೆಸಿದರೆಂದು ಆರೋಪಿಸಲಾಗಿದೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜು.11 ರಂದು ಹಲ್ಲೆಗೊಳಗಾದ ಬಾಲಕೃಷ್ಣ ರವರು ನೀಡಿದ ದೂರಿನ ಮೇರೆಗೆ ಕಲಂ 115(2), BNS-2023 -3(2)(va) SC&ST -2015 ರ ಅಡಿಯಲ್ಲಿ ಆರೋಪಿ ಜಗದೀಶ್ ವಿರುದ್ಧ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

Related posts

ಕೆ. ಹರೀಶ್ ಕುಮಾರ್ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ಸರಕಾರ ಆದೇಶ

Suddi Udaya

‘ಪ್ರಾಚೀನ ಕನ್ನಡ ಸಾಹಿತ್ಯ ಅಧ್ಯಯನ: ಪ್ರಾರಂಭಿಕ ಪ್ರಯತ್ನಗಳು’ ಪ್ರಚಾರೋಪನ್ಯಾಸ ಕಾರ್ಯಕ್ರಮ

Suddi Udaya

ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ. ಬಿ.ಎಸ್.ಇ) ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಎನ್ ಎಸ್ ಎಸ್ ಘಟಕ ಮತ್ತು ಯುವ ರೆಡ್ ಕ್ರಾಸ್ ಘಟಕದ ಅಂಗವಾಗಿ ರಕ್ತದಾನ ಶಿಬಿರ

Suddi Udaya

ಹಫ್ಸಾ ಬಾನು ಅವರಿಗೆ ಬ್ಯಾರಿವಾರ್ತೆ ಪ್ರಶಸ್ತಿ

Suddi Udaya
error: Content is protected !!