July 12, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ಬೆಳ್ತಂಗಡಿ : ಹೆಬ್ರಿಯಿಂದ ನಾರಾವಿಯ ಮನೆಯೊಂದಕ್ಕೆ ಕೆಲಸಕ್ಕೆಂದು ಬಂದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಈದು ಗ್ರಾಮದ ತೋಟವೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮೃತ ವ್ಯಕ್ತಿ ಹೆಬ್ರಿ ಮಿಯಾರು ನಾಲ್ಕೂರು ನಿವಾಸಿ ಪ್ರಭಾಕರ ಶೆಟ್ಟಿ (45) ಎಂಬವರಾಗಿದ್ದಾರೆ.ಇವರು ಜು.7ರಂದು ಬೆಳ್ತಂಗಡಿ ತಾಲೂಕಿನ ನಾರಾವಿ ಅರಸಿಕಟ್ಟೆ ನಿವಾಸಿ ರವಿರಾಜ್ ಜೈನ್ ಎಂಬವರ ಮನೆಗೆ ರೊಟ್ಟಿ ಮಾಡಲು ಬಂದಿದ್ದರು. ಮದ್ಯಾಹ್ನದ ವರೆಗೆ ಕೆಲಸ ಮಾಡಿ ಬಳಿಕ ಅವರು ಅಲ್ಲಿಂದ‌ ಹಿಂತಿರುಗಿದ್ದರು ಆದರೆ ಅಂದು ಪ್ರಭಾಕರ ಶೆಟ್ಟಿ ಮರಳಿ ಮನೆ ಸೇರಿರಲಿಲ್ಲ. ಆತನಿಗಾಗಿ ಹುಡುಕಾಟ ನಡೆಸಿದರೂ ಯಾವುದೇ ಮಾಹಿತಿಗಳು ಸಿಗದ ಹಿನ್ನಲೆಯಲ್ಲಿ ಈ ಬಗ್ಗೆ ಹೆಬ್ರಿ ಪೊಲೀಸರಿಗೆ ದೂರು ನೀಡಲಾಗಿತ್ತು.ಉಮೇಶ್‌ ಎಂಬವರು ನೀಡಿದ ದೂರಿನಂತೆ ಪ್ರಕರಣ‌ದಾಖಲಿಸಿಕೊಂಡ ಪೊಲೀಸರು ಪ್ರಕರಣವನ್ನು ಬೆಳ್ತಂಗಡಿಯ ವೇಣೂರು ಠಾಣೆಗೆ ವರ್ಗಾಯಿಸಿದ್ದರು.

ಇದೀಗ ಜು.12 ರಂದು ಭಾನುವಾರ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಈದುವಿನ ನಿವಾಸಿ ವಿಘ್ನೇಶ್ ಭಟ್ ಎಂಬವರ ತೋಟದಲ್ಲಿ ಕೊಳೆತ ಸ್ಥಿತಿಯಲ್ಲಿ ಪ್ರಭಾಕರ ಶೆಟ್ಟಿಯ ಮೃತದೇಹ ಪತ್ತೆಯಾಗಿದೆ.ಸ್ಥಳಕ್ಕೆ ಪೊಲೀಸರು‌ ತೆರಳಿ ಪರಿಶೀಲನೆ ನಡೆಸಿದ್ದು ಈತ ಯಾವ ರೀತಿ ಮೃತಪಟ್ಟಿರಬಹುದು ಎಂಬ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.ಮೃತ ಪ್ರಭಾಕರ ಒಂದಿಷ್ಟು ಮಾನಸಿಕ ಸಮಸ್ಯೆಯಿಂದ‌ ಬಳಲುತ್ತಿದ್ದ ಎನ್ನಲಾಗಿದ್ದು ಪೊಲೀಸರ ತನಿಖೆಯಿಂದಷ್ಟೆ ಹೆಚ್ಚಿನ ಮಾಹಿತಿಗಳು ತಿಳಿದು ಬರಬೇಕಾಗಿದೆ

Related posts

ಸಂತ ತೆರೇಸಾ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ದ್ರವ್ಯ ಜಾಗೃತಿ ಕಾರ್ಯಾಗಾರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಭೇಟಿ: ದೇವರಿಗೆ ವಿಶೇಷ ಪೂಜೆ ಸಲ್ಲಿಕೆ

Suddi Udaya

ಮುಂಬೈ ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥೆ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಮಹಾರಾಷ್ಟ್ರ ಘಟಕ ದಿಂದ ಭಜಕ ವಿ ಹರೀಶ್ ನೆರಿಯ ರವರಿಗೆ ಗುರುವಂದನೆ

Suddi Udaya

ನಾಳ ಶ್ರೀ ದೇವಸ್ಥಾನದ ರಥಬೀದಿಯಲ್ಲಿ ಶನೀಶ್ವರ ಮಹಾತ್ಮೆ ಬಯಲಾಟ

Suddi Udaya

ಗೇರುಕಟ್ಟೆ ಆಟೋ-ಚಾಲಕರ ಸಂಘದ ವತಿಯಿಂದ ಸರ್ಪ ಸಂಸ್ಕಾರ ಪೂಜೆ

Suddi Udaya

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಮಂಜುನಾಥ್ ಗುಡಿಗಾರ್ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

Suddi Udaya
error: Content is protected !!