July 12, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ವೈಯಕ್ತಿಕ ದ್ವೇಷ ಹಿನ್ನೆಲೆ ವ್ಯಕ್ತಿಯ ಮೇಲೆ ಹಲ್ಲೆ – ಪ್ರಕರಣ ದಾಖಲು

ಬೆಳ್ತಂಗಡಿ: ವೈಯಕ್ತಿಕ ದ್ವೇಷ ಹಿನ್ನೆಲೆಯಲ್ಲಿ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಎಸ್ಸಿ/ಎಸ್ಟಿ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ತಾಲೂಕಿನ ಪಟ್ರಮೆಯಲ್ಲಿ ಜು.10 ರಂದು ಸಂಜೆ ಸುಮಾರು 7:30 ಗಂಟೆಗೆ ಪಟ್ರಮೆ ನಿವಾಸಿ ಬಾಲಕೃಷ್ಣ ಎಂಬವರು ಪರಿಚಯದ ದಿನೇಶ್ ಅವರ ಆಟೋ ರಿಕ್ಷಾದಲ್ಲಿ ಕೊಕ್ಕಡ ಕಡೆಗೆ ತೆರಳುತ್ತಿದ್ದ ಸಮಯದಲ್ಲಿ ದಿನೇಶ್ ಅವರು ರಾಘವ ಎಂಬವರ ಅಂಗಡಿಯ ಬಳಿ ಆಟೋ ನಿಲ್ಲಿಸಿ ಅಂಗಡಿಗೆ ತೆರಳಿದ್ದರು. ಆ ಸಂದರ್ಭದಲ್ಲಿ ರಾಘವ ಮತ್ತು ದಿನೇಶ್ ಅವರ ನಡುವೆ ಮಾತುಕತೆ ನಡೆಯುತ್ತಿರುವಾಗ ಆಟೋದಲ್ಲಿದ್ದ ಬಾಲಕೃಷ್ಣ ಅವರು ಆ ಕಡೆಗೆ ನೋಡಿದ ವಿಚಾರಕ್ಕೆ, ವೈಯಕ್ತಿಕ ಕಾರಣದಿಂದ ಅಂಗಡಿಯ ಮಾಲೀಕ ರಾಘವರ ಮಗ ಜಗದೀಶ ಎಂಬಾತನು ಬಾಲಕೃಷ್ಣ ರವರ ಬಳಿಗೆ ಬಂದು, “ನೀನು ಯಾಕೆ ಇಲ್ಲಿಗೆ ಬಂದಿದ್ದು?” ಎಂದು ಪ್ರಶ್ನಿಸಿ ಹಲ್ಲೆ ನಡೆಸಿದರೆಂದು ಆರೋಪಿಸಲಾಗಿದೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜು.11 ರಂದು ಹಲ್ಲೆಗೊಳಗಾದ ಬಾಲಕೃಷ್ಣ ರವರು ನೀಡಿದ ದೂರಿನ ಮೇರೆಗೆ ಕಲಂ 115(2), BNS-2023 -3(2)(va) SC&ST -2015 ರ ಅಡಿಯಲ್ಲಿ ಆರೋಪಿ ಜಗದೀಶ್ ವಿರುದ್ಧ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

Related posts

ಬೆಳ್ತಂಗಡಿ ಇತಿಹಾಸದಲ್ಲಿ ಪ್ರಥಮ ಹಬ್ಬ: ಬೆಳ್ತಂಗಡಿ ಸಂಭ್ರಮ ಸಂಪನ್ನ,

Suddi Udaya

ಬೆಳ್ತಂಗಡಿ:ಕಾಂಗ್ರೆಸ್ ನಿಂದ ಸಂವಿಧಾನ ,ಪ್ರಜಾಪ್ರಭುತ್ವ ,ಶಿಷ್ಟಾಚಾರ ವಿರೋಧಿ ನಡವಳಿಕೆ. ರಾಜ್ಯದ ಮಂತ್ರಿಗಳ ಸರ್ವಾಧಿಕಾರಿ ಧೋರಣೆ, ಹಿರಿಯಕ್ಕನ ಚಾಳಿ ಮನೆ ಮಂದಿಗೆಂಬಂತೆ ಇದು ತಳಮಟ್ಟಕ್ಕೂ ತಲುಪುತ್ತಿದೆ: ವಿಧಾನಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ಆರೋಪ

Suddi Udaya

ಅಪ್ರಾಪ್ತ ಬಾಲಕನಿಗೆ ಹಲ್ಲೆ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು- ಪ್ರಕರಣ ದಾಖಲು

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತೆ

Suddi Udaya

ಡಿ.1: ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ- 2024

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!