August 26, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ವೈಯಕ್ತಿಕ ದ್ವೇಷ ಹಿನ್ನೆಲೆ ವ್ಯಕ್ತಿಯ ಮೇಲೆ ಹಲ್ಲೆ – ಪ್ರಕರಣ ದಾಖಲು

ಬೆಳ್ತಂಗಡಿ: ವೈಯಕ್ತಿಕ ದ್ವೇಷ ಹಿನ್ನೆಲೆಯಲ್ಲಿ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಎಸ್ಸಿ/ಎಸ್ಟಿ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ತಾಲೂಕಿನ ಪಟ್ರಮೆಯಲ್ಲಿ ಜು.10 ರಂದು ಸಂಜೆ ಸುಮಾರು 7:30 ಗಂಟೆಗೆ ಪಟ್ರಮೆ ನಿವಾಸಿ ಬಾಲಕೃಷ್ಣ ಎಂಬವರು ಪರಿಚಯದ ದಿನೇಶ್ ಅವರ ಆಟೋ ರಿಕ್ಷಾದಲ್ಲಿ ಕೊಕ್ಕಡ ಕಡೆಗೆ ತೆರಳುತ್ತಿದ್ದ ಸಮಯದಲ್ಲಿ ದಿನೇಶ್ ಅವರು ರಾಘವ ಎಂಬವರ ಅಂಗಡಿಯ ಬಳಿ ಆಟೋ ನಿಲ್ಲಿಸಿ ಅಂಗಡಿಗೆ ತೆರಳಿದ್ದರು. ಆ ಸಂದರ್ಭದಲ್ಲಿ ರಾಘವ ಮತ್ತು ದಿನೇಶ್ ಅವರ ನಡುವೆ ಮಾತುಕತೆ ನಡೆಯುತ್ತಿರುವಾಗ ಆಟೋದಲ್ಲಿದ್ದ ಬಾಲಕೃಷ್ಣ ಅವರು ಆ ಕಡೆಗೆ ನೋಡಿದ ವಿಚಾರಕ್ಕೆ, ವೈಯಕ್ತಿಕ ಕಾರಣದಿಂದ ಅಂಗಡಿಯ ಮಾಲೀಕ ರಾಘವರ ಮಗ ಜಗದೀಶ ಎಂಬಾತನು ಬಾಲಕೃಷ್ಣ ರವರ ಬಳಿಗೆ ಬಂದು, “ನೀನು ಯಾಕೆ ಇಲ್ಲಿಗೆ ಬಂದಿದ್ದು?” ಎಂದು ಪ್ರಶ್ನಿಸಿ ಹಲ್ಲೆ ನಡೆಸಿದರೆಂದು ಆರೋಪಿಸಲಾಗಿದೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜು.11 ರಂದು ಹಲ್ಲೆಗೊಳಗಾದ ಬಾಲಕೃಷ್ಣ ರವರು ನೀಡಿದ ದೂರಿನ ಮೇರೆಗೆ ಕಲಂ 115(2), BNS-2023 -3(2)(va) SC&ST -2015 ರ ಅಡಿಯಲ್ಲಿ ಆರೋಪಿ ಜಗದೀಶ್ ವಿರುದ್ಧ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

Related posts

ನಗರ ಪಂಚಾಯತದ ಒಳಚರಂಡಿಗೆ ಬಿದ್ದ ದನ: ಅಗ್ನಿಶಾಮಕದವರ ಸಹಕಾರದಿಂದ ಮೇಲಕ್ಕೆ

Suddi Udaya

ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಉಡುಪಿಯಲ್ಲಿ ಪತ್ತೆ

Suddi Udaya

ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್ ಬೆಳ್ತಂಗಡಿ ಸೇವಾ ಸಾಧನ ವತಿಯಿಂದ ಮಾದಕ ವಸ್ತು ಜಾಗೃತಿ ಹಾಗೂ ಡ್ರ್ಯಾಗನ್ ಫ್ರೂಟ್ಸ್ ವಿತರಣೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಸರ್ವರಿಗೂ ಹೊಸ ವರ್ಷದ ಶುಭಾಶಯಗಳು: ಪರಸ್ಪರ ಪ್ರೀತಿ-ವಿಶ್ವಾಸ, ಗೌರವದೊಂದಿಗೆ, ಶಾಂತಿ ಸಾಮರಸ್ಯ ಮೂಡಿಬರಲಿ, ಮಾನವೀಯತೆ ಮೆರೆಯಲಿ: ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya

ಕೊಕ್ಕಡ: ತೋಟದಲ್ಲಿ ಕಟ್ಟಿ ಹಾಕಿದ್ದ ದನ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!