August 27, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ಬೆಳ್ತಂಗಡಿ : ಹೆಬ್ರಿಯಿಂದ ನಾರಾವಿಯ ಮನೆಯೊಂದಕ್ಕೆ ಕೆಲಸಕ್ಕೆಂದು ಬಂದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಈದು ಗ್ರಾಮದ ತೋಟವೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮೃತ ವ್ಯಕ್ತಿ ಹೆಬ್ರಿ ಮಿಯಾರು ನಾಲ್ಕೂರು ನಿವಾಸಿ ಪ್ರಭಾಕರ ಶೆಟ್ಟಿ (45) ಎಂಬವರಾಗಿದ್ದಾರೆ.ಇವರು ಜು.7ರಂದು ಬೆಳ್ತಂಗಡಿ ತಾಲೂಕಿನ ನಾರಾವಿ ಅರಸಿಕಟ್ಟೆ ನಿವಾಸಿ ರವಿರಾಜ್ ಜೈನ್ ಎಂಬವರ ಮನೆಗೆ ರೊಟ್ಟಿ ಮಾಡಲು ಬಂದಿದ್ದರು. ಮದ್ಯಾಹ್ನದ ವರೆಗೆ ಕೆಲಸ ಮಾಡಿ ಬಳಿಕ ಅವರು ಅಲ್ಲಿಂದ‌ ಹಿಂತಿರುಗಿದ್ದರು ಆದರೆ ಅಂದು ಪ್ರಭಾಕರ ಶೆಟ್ಟಿ ಮರಳಿ ಮನೆ ಸೇರಿರಲಿಲ್ಲ. ಆತನಿಗಾಗಿ ಹುಡುಕಾಟ ನಡೆಸಿದರೂ ಯಾವುದೇ ಮಾಹಿತಿಗಳು ಸಿಗದ ಹಿನ್ನಲೆಯಲ್ಲಿ ಈ ಬಗ್ಗೆ ಹೆಬ್ರಿ ಪೊಲೀಸರಿಗೆ ದೂರು ನೀಡಲಾಗಿತ್ತು.ಉಮೇಶ್‌ ಎಂಬವರು ನೀಡಿದ ದೂರಿನಂತೆ ಪ್ರಕರಣ‌ದಾಖಲಿಸಿಕೊಂಡ ಪೊಲೀಸರು ಪ್ರಕರಣವನ್ನು ಬೆಳ್ತಂಗಡಿಯ ವೇಣೂರು ಠಾಣೆಗೆ ವರ್ಗಾಯಿಸಿದ್ದರು.

ಇದೀಗ ಜು.12 ರಂದು ಭಾನುವಾರ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಈದುವಿನ ನಿವಾಸಿ ವಿಘ್ನೇಶ್ ಭಟ್ ಎಂಬವರ ತೋಟದಲ್ಲಿ ಕೊಳೆತ ಸ್ಥಿತಿಯಲ್ಲಿ ಪ್ರಭಾಕರ ಶೆಟ್ಟಿಯ ಮೃತದೇಹ ಪತ್ತೆಯಾಗಿದೆ.ಸ್ಥಳಕ್ಕೆ ಪೊಲೀಸರು‌ ತೆರಳಿ ಪರಿಶೀಲನೆ ನಡೆಸಿದ್ದು ಈತ ಯಾವ ರೀತಿ ಮೃತಪಟ್ಟಿರಬಹುದು ಎಂಬ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.ಮೃತ ಪ್ರಭಾಕರ ಒಂದಿಷ್ಟು ಮಾನಸಿಕ ಸಮಸ್ಯೆಯಿಂದ‌ ಬಳಲುತ್ತಿದ್ದ ಎನ್ನಲಾಗಿದ್ದು ಪೊಲೀಸರ ತನಿಖೆಯಿಂದಷ್ಟೆ ಹೆಚ್ಚಿನ ಮಾಹಿತಿಗಳು ತಿಳಿದು ಬರಬೇಕಾಗಿದೆ

Related posts

ನ.13: ದೀಪಾವಳಿ ಹಬ್ಬದ ಪ್ರಯುಕ್ತ ಕುಸಲ್ದ ಜವನೆರ್ ಬದ್ಯಾರು – ಶಿರ್ಲಾಲು ಇದರ ವತಿಯಿಂದ 5ನೇ ವರ್ಷದ ‘ಕೆಸರ್ ಡೊಂಜಿ ಕುಸಲ್ದ ಗೊಬ್ಬು’ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಗುಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಬೆಳ್ತಂಗಡಿ ತಾಲೂಕಿನ ಉತ್ತಮ ಸಂಘ ಪ್ರಶಸ್ತಿ

Suddi Udaya

ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಪ್ರಶಾಂತ್ ಪೂವಾಜೆ ಆಯ್ಕೆ

Suddi Udaya

ಧರ್ಮಸ್ಥಳ ಎಸ್.ಡಿ.ಎಂ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಬೆಳ್ತಂಗಡಿ: ಮನೋಜ್ ಕಟ್ಟೆಮಾರ್ ರವರ ಹುಟ್ಟುಹಬ್ಬದ ಪ್ರಯುಕ್ತ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ

Suddi Udaya
error: Content is protected !!