July 12, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪುತ್ತೂರುಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ : ತಲೆಮರೆಸಿಕೊಂಡಿದ್ದ ಪಡಂಗಡಿ ನೌಷದ್ ಹಾಗೂ ಮತ್ತೊರ್ವ ಆರೋಪಿ ಅಬ್ದುಲ್ ನಾಸಿರ್ ಬಂಧನ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಹಿಂದೂ ಸಂಘಟನೆ ಕಾರ್ಯಕರ್ತ ಹಾಗೂ ಕೋಳಿ ಅಂಗಡಿ ವ್ಯವಹಾರ ನಡೆಸುತ್ತಿದ್ದ ಪ್ರವೀಣ್ ನೆಟ್ಟಾರು(32) ಎಂಬವರನ್ನು 26-07-2022 ರಂದು ರಾತ್ರಿ ಸುಮಾರು 8:30 ಕ್ಕೆ ಕೋಳಿ ಅಂಗಡಿಯನ್ನು ಮುಚ್ಚಿ ಮನೆಗೆ ಹೋಗುವ ಸಮಯದಲ್ಲಿ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಪ್ರಕರಣ ಸಂಬಂಧ ಈವರೆಗೆ ರಾಷ್ಟ್ರೀಯ ತನಿಖಾ ದಳ(NIA) ಒಟ್ಟು 28 ಆರೋಪಿಗಳ ಪೈಕಿ 21 ಮಂದಿಯನ್ನು ಬಂಧಿಸಿದ್ದರು.

ಉಳಿದ ಆರೋಪಿಗಳ ಬಂಧನಕ್ಕೆ ಬಹುಮಾನ ಘೋಷಣೆ ಮಾಡಿ ಹುಡುಕಾಟ ನಡೆಸುತ್ತಿದ್ದರು.ಇದೀಗ 4 ವರ್ಷಗಳ ಬಳಿಕ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಬೆಂಗಳೂರು ಎನ್.ಐ.ಎ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಬೆಂಗಳೂರು ಎನ್.ಐ.ಎ ಅಧಿಕಾರಿಗಳು ಪ್ರವೀಣ್ ನೆಟ್ಟಾರು ಕೊಲೆ ಬಳಿಕ ಆರೋಪಿಗಳನ್ನು ಕಾರಿನಲ್ಲಿ ಪರಾರಿಯಾಗಲು ಕಾರು ಚಾಲಕನಾಗಿ ಸಹಾಯ ಮಾಡಿದ್ದ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ನಿವಾಸಿ ಹಮೀದ್ ಮಗ (ಆರೋಪಿ -23 ಆಗಿರುವ) ನೌಷದ್(32) ನನ್ನು ಬೆಂಗಳೂರು ಮತ್ತು ಕೊಡಗು ಜಿಲ್ಲೆಯ ಸೋಮವಾರಪೇಟೆ ಚೌವ್ಡ್ಲೀ ಕಾನ್ವೇಂಟ್ ರೋಡ್ ನಿವಾಸಿ ಇಬ್ರಾಹಿಂ ಮಗ (ಆರೋಪಿ 22 ಆಗಿರುವ) ಅಬ್ದುಲ್ ನಾಸೀರ್(41) ಎಂಬವನನ್ನು ಕೊಚ್ಚಿಯಿಂದ ಜು.11 ರಂದು ಬಂಧಿಸಿದ್ದಾರೆ.

ಇನ್ನೂ ಐದು ಮಂದಿಯ ಬಂಧನ ಬಾಕಿ ಇದ್ದು. ಬಂಧನಕ್ಕಾಗಿ ಎನ್.ಐ.ಎ ಹುಡುಕಾಟ ಮುಂದುವರಿಸಿದ್ದಾರೆ.ಆರೋಪಿಗಳಾದ ಬೆಳ್ತಂಗಡಿಯ ನೌಷದ್ ಮತ್ತು ಕೊಡಗಿನ ಅಬ್ದುಲ್ ನಾಸೀರ್ ತಲೆಮರೆಸಿಕೊಂಡಿದ್ದ ಬಗ್ಗೆ ರಾಷ್ಟ್ರೀಯ ತನಿಖಾ ದಳ (ಎನ್.ಐ.ಎ) ಪತ್ರಿಕಾ ಪ್ರಕಟಣೆ ಹೊರಡಿಸಿ ಪತ್ತೆಗೆ ಸಹಕರಿಸಿದ್ದಲ್ಲಿ ತಲಾ 2 ಲಕ್ಷ ಬಹುಮಾನ ನೀಡುವುದಾಗಿ ಘೋಷಣೆ ಮಾಡಿತ್ತು.

Related posts

ತೆಕ್ಕಾರು: ವಿದ್ಯುತ್ ತಂತಿಯ ಮೇಲೆ ಬಿದ್ದ ಮರ

Suddi Udaya

ಮೊಗ್ರು : ಕೃಷಿಕ ವಿಶ್ವನಾಥ ಗೌಡ ನಿಧನ

Suddi Udaya

ನಡ: ಅರಣ್ಯ ಇಲಾಖೆ, ಗ್ರಾ.ಪಂ. ನಡ ಮತ್ತು ವಿಪತ್ತು ತಂಡದ ವತಿಯಿಂದ ಗಿಡ ನೆಡುವ ಕಾರ್ಯಕ್ರಮ

Suddi Udaya

ರಾಷ್ಟ್ರಮಟ್ಟದ ನೃತ್ಯೋತ್ಸವ: ಧರಿತ್ರಿ ಭಿಡೆ ದ್ವಿತೀಯ

Suddi Udaya

ನಡ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರಿಗೆ ಮಾಹಿತಿ ಶಿಬಿರ

Suddi Udaya

ನಿಡ್ಲೆ ಅಗ್ರಿಲೀಫ್ ಸಂಸ್ಥೆಗೆ ಝೆಡ್ ಬೆಳ್ಳಿ ಪ್ರಮಾಣ ಪತ್ರ

Suddi Udaya
error: Content is protected !!