August 26, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ವೈಯಕ್ತಿಕ ದ್ವೇಷ ಹಿನ್ನೆಲೆ ವ್ಯಕ್ತಿಯ ಮೇಲೆ ಹಲ್ಲೆ – ಪ್ರಕರಣ ದಾಖಲು

ಬೆಳ್ತಂಗಡಿ: ವೈಯಕ್ತಿಕ ದ್ವೇಷ ಹಿನ್ನೆಲೆಯಲ್ಲಿ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಎಸ್ಸಿ/ಎಸ್ಟಿ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ತಾಲೂಕಿನ ಪಟ್ರಮೆಯಲ್ಲಿ ಜು.10 ರಂದು ಸಂಜೆ ಸುಮಾರು 7:30 ಗಂಟೆಗೆ ಪಟ್ರಮೆ ನಿವಾಸಿ ಬಾಲಕೃಷ್ಣ ಎಂಬವರು ಪರಿಚಯದ ದಿನೇಶ್ ಅವರ ಆಟೋ ರಿಕ್ಷಾದಲ್ಲಿ ಕೊಕ್ಕಡ ಕಡೆಗೆ ತೆರಳುತ್ತಿದ್ದ ಸಮಯದಲ್ಲಿ ದಿನೇಶ್ ಅವರು ರಾಘವ ಎಂಬವರ ಅಂಗಡಿಯ ಬಳಿ ಆಟೋ ನಿಲ್ಲಿಸಿ ಅಂಗಡಿಗೆ ತೆರಳಿದ್ದರು. ಆ ಸಂದರ್ಭದಲ್ಲಿ ರಾಘವ ಮತ್ತು ದಿನೇಶ್ ಅವರ ನಡುವೆ ಮಾತುಕತೆ ನಡೆಯುತ್ತಿರುವಾಗ ಆಟೋದಲ್ಲಿದ್ದ ಬಾಲಕೃಷ್ಣ ಅವರು ಆ ಕಡೆಗೆ ನೋಡಿದ ವಿಚಾರಕ್ಕೆ, ವೈಯಕ್ತಿಕ ಕಾರಣದಿಂದ ಅಂಗಡಿಯ ಮಾಲೀಕ ರಾಘವರ ಮಗ ಜಗದೀಶ ಎಂಬಾತನು ಬಾಲಕೃಷ್ಣ ರವರ ಬಳಿಗೆ ಬಂದು, “ನೀನು ಯಾಕೆ ಇಲ್ಲಿಗೆ ಬಂದಿದ್ದು?” ಎಂದು ಪ್ರಶ್ನಿಸಿ ಹಲ್ಲೆ ನಡೆಸಿದರೆಂದು ಆರೋಪಿಸಲಾಗಿದೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜು.11 ರಂದು ಹಲ್ಲೆಗೊಳಗಾದ ಬಾಲಕೃಷ್ಣ ರವರು ನೀಡಿದ ದೂರಿನ ಮೇರೆಗೆ ಕಲಂ 115(2), BNS-2023 -3(2)(va) SC&ST -2015 ರ ಅಡಿಯಲ್ಲಿ ಆರೋಪಿ ಜಗದೀಶ್ ವಿರುದ್ಧ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

Related posts

ರೂ. 1.10 ಕೋಟಿ ವೆಚ್ಚದ ಕೂಕ್ರಬೆಟ್ಟು ಪ್ರಾಥಮಿಕ ಶಾಲಾ ನೂತನ ಕಟ್ಟಡದ ಲೋಕಾರ್ಪಣೆ: ಸರ್ಕಾರಿ ಶಾಲೆಗಳಿಗೆ ಕೊಠಡಿಗಳನ್ನು ನಿರ್ಮಿಸುವ ವಿವೇಕ ಯೋಜನೆಯನ್ನು ಜಾರಿಗೆ ತನ್ನಿ ರಾಜ್ಯ ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಸಿರಿ ಕೇಂದ್ರ ಕಚೇರಿಯಲ್ಲಿ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ವನಮಹೋತ್ಸವ

Suddi Udaya

ಮದ್ದಡ್ಕ ಪಡ್ಡೆಲು ನಿವಾಸಿ ಶೀಲಾವತಿ ನಿಧನ

Suddi Udaya

ಬಿಜೆಪಿ ದ.ಕ. ಜಿಲ್ಲಾ ಪ್ರಕೋಷ್ಠದ ಸಹಸಂಚಾಲಕರಾಗಿ ರಕ್ಷಿತ್ ಶೆಟ್ಟಿ ಪಣಿಕ್ಕರ ಆಯ್ಕೆ

Suddi Udaya

ಕವನವಾಚನ ಸ್ಪರ್ಧೆಯಲ್ಲಿ ಕರಾಯ ಸ.ಪ್ರೌ. ಶಾಲೆಯ ವಿದ್ಯಾರ್ಥಿನಿ ಆಯಿಷತ್ ರಿಶ್ಬಾ ಪ್ರಥಮ ಸ್ಥಾನ

Suddi Udaya

ಇಂದಬೆಟ್ಟು : ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya
error: Content is protected !!