26.2 C
ಪುತ್ತೂರು, ಬೆಳ್ತಂಗಡಿ
August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುಂಡೂರಿ ದ.ಕ.ಜಿ.ಪಂ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಶೈಕ್ಷಣಿಕ ಕಿಟ್ ವಿತರಣೆ

ವೇಣೂರು: ದಾನಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಕಾರದಿಂದ ದ.ಕ. ಜಿ.ಪಂ.ಕಿ.ಪ್ರಾ. ಶಾಲೆ ಗುಂಡೂರಿ ಇಲ್ಲಿಯ ವಿದ್ಯಾರ್ಥಿಗಳಿಗೆ ಉಚಿತ ಶೈಕ್ಷಣಿಕ ಕಿಟ್ ವಿತರಣಾ ಕಾರ್ಯಕ್ರಮ ಜು.11ರಂದು ಶಾಲೆಯಲ್ಲಿ ನಡೆಯಿತು.

ಶಾಲೆಯ ಹಳೆ ವಿದ್ಯಾರ್ಥಿ, ವೇಣೂರು ಲಯನ್ಸ್ ಕ್ಲಬ್ ನಿಕಟಪೂರ್ವಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ ಮಾತನಾಡಿ, ಮುಂದಿನ ದಿನಗಳಲ್ಲಿ ನಮ್ಮ ಶಾಲೆಗೆ 1ನೇ ತರಗತಿಗೆ ದಾಖಲಾಗುವ ಪ್ರತಿಯೊಬ್ಬ ವಿದ್ಯಾರ್ಥಿಗೆ ವೈಯಕ್ತಿಕವಾಗಿ ರೂ.5,000 ನೀಡುವ ಭರವಸೆಯನ್ನು ವ್ಯಕ್ತಪಡಿಸಿದರು.

ಯಂಗ್ ಬಾಯ್ಸ್ ಕ್ರಿಕೆಟ್ ಟೀಮ್ ಗುಂಡೂರಿ ಇವರಿಂದ ಟಿ ಶರ್ಟ್, ಐಡಿ-ಬೆಲ್ಟ್, ಕೆ.ಎಫ್.ಸಿ. ಕ್ರಿಕೆಟರ್ಸ್ ಕೊಂಚಾಡಿ ಇವರಿಂದ ತಟ್ಟೆ, ಲೋಟ, ಹಾಗೂ ಹರೀಶ್ ಕುಮಾರ್ ಪೊಕ್ಕಿ ಇವರಿಂದ ಟಿ ಶರ್ಟ್ ಮತ್ತು ಪ್ಯಾಂಟ್ ನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ವೇಣೂರು ಲಯನ್ಸ್ ಕ್ಲಬ್ ಅಧ್ಯಕ್ಷ ಲುಕಾಸ್ ಕೊರಯಾ, ಕಾರ್ಯದರ್ಶಿ ಜಯರಾಮ್ ಹೆಗ್ಡೆ, ಆರಂಬೋಡಿ ಗ್ರಾ.ಪಂ. ಉಪಾಧ್ಯಕ್ಷೆ ತೇಜಸ್ವಿನಿ, ಶ್ರೀ. ಕ್ಷೆ.ಧ. ಗ್ರಾ. ಯೋಜನೆ ಗುಂಡೂರಿ ಒಕ್ಕೂಟದ ಅಧ್ಯಕ್ಷ ಸದಾನಂದ ಪೂಜಾರಿ, ಪ್ರಕಾಶ್ ಪೂಜಾರಿ ಯಂಗ್ ಬಾಯ್ಸ್ ಕ್ರಿಕೇಟ್ ಟೀಮ್ ಗುಂಡೂರಿ, ಕೆ.ಎಫ್.ಸಿ. ಕ್ರಿಕೆಟರ್ಸ್ ಯತೀಶ್ ಕೊಂಚಾಡಿ, ಎಸ್.ಡಿ.ಎಂ.ಸಿ. ಅಧ್ಯಕ್ಷ ಪ್ರವೀಣ್ ಆಚಾರ್ಯ, ಶಿಕ್ಷಕವೃಂದ ಮತ್ತು ಶಾಲಾಭಿವೃದ್ಧಿ ಸಮಿತಿಯವರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಶೈಲಜಾ ಸ್ವಾಗತಿಸಿ ವಂದಿಸಿದರು. ಶಿಕ್ಷಕಿ ದಿಶಾಂತ ನಿರೂಪಿಸಿದರು.

Related posts

ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಕೋಟೆಬಾಗಿಲು ಅಧ್ಯಕ್ಷರಾಗಿ ಪ್ರಭಾಕರ ಹೆಗ್ಡೆ ಹಟ್ಟಾಜೆ, ಪ್ರ‌.ಕಾರ್ಯದರ್ಶಿಯಾಗಿ ಶುಭರಾಜ್ ಹೆಗ್ಡೆ ಮರೋಡಿ

Suddi Udaya

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ, ಶಿಲಾನ್ಯಾಸ

Suddi Udaya

ಕೊಕ್ಕಡ ನಿವಾಸಿ ರೇಖಾ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ: ಮುಂಡಾಜೆ ಪ್ರಾ.ಶಾಲೆಯ ಮುಖ್ಯ ಶಿಕ್ಷಕಿ ಮಂಜುಳಾ ಹಾಗೂ ಸಹಶಿಕ್ಷಕ ಮೋಹನ ಕೆ. ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಕುಕ್ಕೇಡಿ:ಕೋಟಿ ಚೆನ್ನಯ ಸೇವಾ ಸಂಘದಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಜ.7 : ಧರ್ಮಸ್ಥಳದಲ್ಲಿ ನೂತನ ಸಂಕೀರ್ಣ ಶ್ರೀ ಸಾನ್ನಿಧ್ಯ ಉದ್ಘಾಟನೆ ಹಾಗೂ ಜ್ಞಾನ ದೀಪ ಕಾರ್ಯಕ್ರಮ

Suddi Udaya
error: Content is protected !!