July 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುಂಡೂರಿ ದ.ಕ.ಜಿ.ಪಂ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಶೈಕ್ಷಣಿಕ ಕಿಟ್ ವಿತರಣೆ

ವೇಣೂರು: ದಾನಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಕಾರದಿಂದ ದ.ಕ. ಜಿ.ಪಂ.ಕಿ.ಪ್ರಾ. ಶಾಲೆ ಗುಂಡೂರಿ ಇಲ್ಲಿಯ ವಿದ್ಯಾರ್ಥಿಗಳಿಗೆ ಉಚಿತ ಶೈಕ್ಷಣಿಕ ಕಿಟ್ ವಿತರಣಾ ಕಾರ್ಯಕ್ರಮ ಜು.11ರಂದು ಶಾಲೆಯಲ್ಲಿ ನಡೆಯಿತು.

ಶಾಲೆಯ ಹಳೆ ವಿದ್ಯಾರ್ಥಿ, ವೇಣೂರು ಲಯನ್ಸ್ ಕ್ಲಬ್ ನಿಕಟಪೂರ್ವಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ ಮಾತನಾಡಿ, ಮುಂದಿನ ದಿನಗಳಲ್ಲಿ ನಮ್ಮ ಶಾಲೆಗೆ 1ನೇ ತರಗತಿಗೆ ದಾಖಲಾಗುವ ಪ್ರತಿಯೊಬ್ಬ ವಿದ್ಯಾರ್ಥಿಗೆ ವೈಯಕ್ತಿಕವಾಗಿ ರೂ.5,000 ನೀಡುವ ಭರವಸೆಯನ್ನು ವ್ಯಕ್ತಪಡಿಸಿದರು.

ಯಂಗ್ ಬಾಯ್ಸ್ ಕ್ರಿಕೆಟ್ ಟೀಮ್ ಗುಂಡೂರಿ ಇವರಿಂದ ಟಿ ಶರ್ಟ್, ಐಡಿ-ಬೆಲ್ಟ್, ಕೆ.ಎಫ್.ಸಿ. ಕ್ರಿಕೆಟರ್ಸ್ ಕೊಂಚಾಡಿ ಇವರಿಂದ ತಟ್ಟೆ, ಲೋಟ, ಹಾಗೂ ಹರೀಶ್ ಕುಮಾರ್ ಪೊಕ್ಕಿ ಇವರಿಂದ ಟಿ ಶರ್ಟ್ ಮತ್ತು ಪ್ಯಾಂಟ್ ನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ವೇಣೂರು ಲಯನ್ಸ್ ಕ್ಲಬ್ ಅಧ್ಯಕ್ಷ ಲುಕಾಸ್ ಕೊರಯಾ, ಕಾರ್ಯದರ್ಶಿ ಜಯರಾಮ್ ಹೆಗ್ಡೆ, ಆರಂಬೋಡಿ ಗ್ರಾ.ಪಂ. ಉಪಾಧ್ಯಕ್ಷೆ ತೇಜಸ್ವಿನಿ, ಶ್ರೀ. ಕ್ಷೆ.ಧ. ಗ್ರಾ. ಯೋಜನೆ ಗುಂಡೂರಿ ಒಕ್ಕೂಟದ ಅಧ್ಯಕ್ಷ ಸದಾನಂದ ಪೂಜಾರಿ, ಪ್ರಕಾಶ್ ಪೂಜಾರಿ ಯಂಗ್ ಬಾಯ್ಸ್ ಕ್ರಿಕೇಟ್ ಟೀಮ್ ಗುಂಡೂರಿ, ಕೆ.ಎಫ್.ಸಿ. ಕ್ರಿಕೆಟರ್ಸ್ ಯತೀಶ್ ಕೊಂಚಾಡಿ, ಎಸ್.ಡಿ.ಎಂ.ಸಿ. ಅಧ್ಯಕ್ಷ ಪ್ರವೀಣ್ ಆಚಾರ್ಯ, ಶಿಕ್ಷಕವೃಂದ ಮತ್ತು ಶಾಲಾಭಿವೃದ್ಧಿ ಸಮಿತಿಯವರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಶೈಲಜಾ ಸ್ವಾಗತಿಸಿ ವಂದಿಸಿದರು. ಶಿಕ್ಷಕಿ ದಿಶಾಂತ ನಿರೂಪಿಸಿದರು.

Related posts

ಕಣಿಯೂರು ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಧರ್ಮಸ್ಥಳ ಗ್ರಾ.ಪಂ. ಅಧ್ಯಕ್ಷರಾಗಿ ವಿಮಲ, ಉಪಾಧ್ಯಕ್ಷರಾಗಿ ಶ್ರೀನಿವಾಸ್ ರಾವ್ ಆಯ್ಕೆ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಅಳದಂಗಡಿ ಸಹಕಾರಿ ಸಂಘಕ್ಕೆ ಉತ್ತಮ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ನಾವೂರು ಗ್ರಾಮ ಪಂಚಾಯತ್ ನ ವಿಶೇಷ ಗ್ರಾಮ ಸಭೆ

Suddi Udaya

ರಾಜಕೇಸರಿ ಸೇವಾ ಟ್ರಸ್ಟ್ ನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಜಗದೀಶ್ ಲಾಯಿಲ, ಸಂಘಟನಾ ಪ್ರಮುಖರಾಗಿ ದೇವರಾಜ್ ಪೂಜಾರಿ

Suddi Udaya

ಕಳೆಂಜ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ: ಸರಕಾರಕ್ಕೆ ಮನವಿ

Suddi Udaya
error: Content is protected !!