26.2 C
ಪುತ್ತೂರು, ಬೆಳ್ತಂಗಡಿ
August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಂಗಳೂರಿನ ಕನ್ಸೇರೋ ಕಂಪೆನಿಯ ಉದ್ಯೋಗಿಗಳಿಂದ ಪರಶುರಾಮ ವನದಲ್ಲಿ ವನಮಹೋತ್ಸವ

ಹತ್ಯಡ್ಕ: ಬಹುರಾಷ್ಟ್ರೀಯ ಕಂಪೆನಿ ಕನ್ಸೇರೋ (CONSERO) ದ ಬೆಂಗಳೂರಿನ ಉದ್ಯೋಗಿಗಳು ಬೆಳ್ತಂಗಡಿ ಹತ್ಯಡ್ಕ ಗ್ರಾಮದ ಕಾಲಕಾಮ ಪರಶುರಾಮ ದೇವಸ್ಥಾನದ ಬಳಿ ಇರುವ ಪರಶುರಾಮ ವನದಲ್ಲಿ ವನಮಹೋತ್ಸವ ಆಚರಿಸಿದರು.

ಕಂಪೆನಿಯ ಉದ್ಯೋಗಿ ಸ್ಥಳೀಯರಾದ ನವೀನ ದಾಮ್ಲೆಯವರು ನೇತೃತ್ವ ವಹಿಸಿದ್ದರು. ಸುಮಾರು 20 ಉದ್ಯೋಗಿಗಳು ಸಕ್ರಿಯವಾಗಿ ಪಾಲ್ಗೊಂಡಿದ್ದರು. ಸುಮಾರು 150 ಕ್ಕೂ ಮಿಕ್ಕಿದ ವಿವಿಧ ಪ್ರಭೇದಗಳ ಸಸ್ಯಗಳನ್ನು ನೆಟ್ಟರು.

ಪರಶುರಾಮ ವನದ ರೂವಾರಿ ಗೋವಿಂದ ದಾಮ್ಲೆ ಸ್ವಾಗತಿಸಿ, ಮಾರ್ಗದರ್ಶನ ನೀಡಿದರು. ವನ ನಿರ್ಮಾಣದ ಉದ್ದೇಶ ಕಲ್ಪನೆಗಳನ್ನು ಪ್ರಸ್ತಾಪಿಸಿದರು. ಉದ್ಯೋಗಿ ಡಾ. ರವಿ ಮಕ್ಕಂ ಇವರು ಕಳೆದ ವರ್ಷದಿಂದಲೂ ಪರಶುರಾಮ ವನದಲ್ಲಿ ವಹಿಸಿದ ಶ್ರಮದಿಂದ ಗಿಡಗಳ ಬದುಕುವಿಕೆಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ರಾಶಿವನ, ನಕ್ಷತ್ರ ವನ, ನವಗ್ರಹ ವನಗಳ ಕಲ್ಪನೆಯನ್ನು ಸಾಕಾರಗೊಳಿಸಿದ ಬಗ್ಗೆಯೂ ಸಂತೋಷದ ಮಾತನ್ನಾಡಿದರು.

ಉದ್ಯೋಗಿ ವಿನಯ್ ಮಯ್ಯರವರು ಗೋವಿಂದ ದಾಮ್ಲೆಯವರ ಸ್ವಯಂ ಸ್ಫೂರ್ತಿಯ ಕಾರಣದಿಂದ ಒಂದು ಮಾದರಿ ವನ ರೂಪಿತವಾಗಿ ಮುಂದಿನ ಪೀಳಿಗೆಯವರಿಗೆ ಅನೇಕ ಗಿಡಗಳ ಪರಿಚಯ ಇಲ್ಲಿ ಸಿಗುವಂತೆ ಮಾಡಿದ್ದಾರೆ. ಅಭಿನಂದನೀಯ ಕಾರ್ಯ ನಡೆಸಿದ್ದಾರೆ ಎಂದರು. ನಂತರ ಶಿಶಿಲದ ನಾಗನಡ್ಕ ಅರ್ಬಿ ಗುಡ್ಡದಲ್ಲಿ ವಿವಿಧ ಜಾತಿಗಳ ಸಸ್ಯಗಳ ಬೀಜಗಳ ಬಿತ್ತನೆ ನಡೆಸಲಾಯಿತು.
ಇವರೊಂದಿಗೆ ಸ್ಥಳೀಯರಾದ ಆಸುಪಾಸಿನ ಹಿಮಾಂಶು ಕುಲಕರ್ಣಿ, ಅರವಿಂದ ತುಳುಪುಳೆ, ವೇಣುಗೋಪಾಲ ಗೋಖಲೆ, ಪ್ರಾಣೇಶ ಖರೆ, ಕಾರ್ತಿಕ ದಾಮ್ಲೆ ಪಾಲ್ಗೊಂಡಿದ್ದರು.

Related posts

ಆರೋಗ್ಯ ಇಲಾಖೆ ವತಿಯಿಂದ ನಡೆದ ಪಲ್ಸ್ ಪೊಲೀಯೋ ಅಭಿಯಾನಕ್ಕೆ ಮನ್ ಷ್ಯರ್ ಪ್ಯಾರ ಮೆಡಿಕಲ್ ವಿದ್ಯಾರ್ಥಿಗಳ ಸಾಥ್

Suddi Udaya

ಕೊಕ್ಕಡ: ಕೆಎಸ್ಆರ್‌ಟಿಸಿ ಬಸ್–ಕಾರು ಮುಖಾಮುಖಿ ಡಿಕ್ಕಿ: ಮಹಿಳೆಗೆ ಗಾಯ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಛತ್ರ ಗಣಪತಿ ದೇವಸ್ಥಾನದ ಮ್ಯಾನೇಜರ್ ಬಾಲಕೃಷ್ಣ ರಾವ್ ನಿಧನ

Suddi Udaya

ಬಳ್ಳಮಂಜದಲ್ಲಿ ನಡೆದ ಮನೆ ಕಳ್ಳತನ ಸೇರಿದಂತೆ ಹಲವು ಪ್ರಕರಣಗಳ ಆರೋಪಿಗಳ ಬಂಧನ: ರೂ.23.67 ಲಕ್ಷದ ಸೊತ್ತುಗಳು ವಶಕ್ಕೆ

Suddi Udaya

ಬೆಳ್ತಂಗಡಿ : ಕಾರು, ದ್ವಿಚಕ್ರ ವಾಹನ ಅಪಘಾತ

Suddi Udaya

ಪಡಂಗಡಿ : ಕುಂಡದಬೆಟ್ಟು ಹಿಂದೂ ಸಂಗಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!