July 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇಂಬರ್ ವತಿಯಿಂದ ಪಣಕಜೆಯಲ್ಲಿ ವನಮಹೋತ್ಸವ

ಪಣಕಜೆ : ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇ0ಬರ್ ವತಿಯಿಂದ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯ, ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ನಿಯಮಿತ ಮತ್ತು ಸ್ವಸಹಾಯ ಸಂಘ ಇದರ ಸಹಯೋಗದಲ್ಲಿ ಜು. 11ರಂದು ಪಣಕಜೆಯ ವಿಲ್ಸನ್ ಗೋನ್ಸಾಲ್ವಿಸ್ ಇವರ ಜಿಯೋಲುಕ್ ಮನೆಯ ವಿಲ್ಸ್ ಗಾರ್ಡನ್ ಫಾರ್ಮ್ ನಲ್ಲಿ ವನಮಹೋತ್ಸವ ಆಚರಿಸಲಾಯಿತು.

ಹೊಸ ಮಾದರಿಯ ಮೆಕೊಡೆಮಿಯ ಮತ್ತು ಹಣ್ಣಿನ ಗಿಡಗಳನ್ನು ನೆಡುವ ಮೂಲಕ ಪ್ರೇರಣಾ ಸೌಹಾರ್ದ ಸಹಕಾರಿ ನಿಯಮಿತ ಮತ್ತು ಸ್ವಸಹಾಯ ಸಂಘಗಳ ಅಧ್ಯಕ್ಷ ಲ್ಯಾನ್ಸಿ ಪಿರೇರಾ ಉದ್ಘಾಟಿಸಿದರು.

ಅಧ್ಯಕ್ಷತೆಯನ್ನು ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇಂಬರ್ ಅಧ್ಯಕ್ಷ ಜಾನ್ ಅರ್ವಿನ್ ಡಿಸೋಜ ವಹಿಸಿದ್ದರು. ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ಅಧ್ಯಕ್ಷ ರವಿ ಪೂಜಾರಿ ನಾರಾವಿ ಶುಭ ಹಾರೈಸಿದರು. ವಿಲ್ಸನ್ ಗೋನ್ಸಾಲಿಸ್ ನೂತನ ಗಿಡದ ಕೃಷಿ ಕುರಿತು ವಿವರ ನೀಡಿದರು.

ಮಂಜುಶ್ರೀ ಸೀನಿಯರ್ ಛೇಂಬರ್ ಕಾರ್ಯದರ್ಶಿ ಶರತ್ ಕುಮಾರ್ ಸ್ವಾಗತಿಸಿ, ಸದಸ್ಯ ಉಮೇಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಫೋಟೋಗ್ರಾಫರ್ಸ್ ಅಶೋಸಿಯೇಷನ್ ಮಾಜಿ ಅಧ್ಯಕ್ಷ ಉಮೇಶ್ ಮದ್ದಡ್ಕ ವಂದಿಸಿದರು.
ಕಾರ್ಯಕ್ರಮ ಸಂಯೋಜನೆ ಮಾಡಿದ ವಿಲ್ಸನ್ ಗೋಲ್ಸಾನಿಸ್ ಇವರನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಮೂರು ಸಂಘಟನೆಯ ಪದಾಧಿಕಾರಿಗಳು, ಸದಸ್ಯರು ಹಾಜರಿದ್ದು ಸಹಕರಿಸಿದರು.

Related posts

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಅದ್ಧೂರಿಯ ಚಾಲನೆ: ಸುಶಾಸನ’ ಆಡಳಿತ ಕಾಯಾ೯ಲಯ, ‘ಸುರಭಿ’ ಬ್ರಹ್ಮಕಲಶೋತ್ಸವ ಕಾಯಾ೯ಲಯ, ‘ಸಮೃದ್ಧಿ’ ಹಸಿರುವಾಣಿ ಉಗ್ರಾಣ, ‘ಸುಪ್ರಸಾದ’ ಭೋಜನ ಶಾಲೆ, ‘ಸುರುಚಿ’ ಪಾಕಶಾಲೆ ಉದ್ಘಾಟನೆ

Suddi Udaya

ತಾಲೂಕಿನ 5 ಕಡೆಗಳಲ್ಲಿ ಆಕಸ್ಮಿಕ ಬೆಂಕಿ ಅವಘಡ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸಮ್ಮರ್ ಸ್ಪಾರ್ಕ್ ಬೇಸಿಗೆ ಶಿಬಿರದ ಸಮಾರೋಪ ಹಾಗೂ ಪ್ರದರ್ಶನ-ಮಾರಾಟ ಮೇಳ

Suddi Udaya

ಅರಸಿನಮಕ್ಕಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಜಿಲ್ಲಾ ಮಟ್ಟದ ಭಾವೈಕ್ಯತೆ ಮಕ್ಕಳ ಮೇಳ: ಕುಂಭಶ್ರೀ ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಉಜಿರೆ ಕಾಲೇಜು ವಿದ್ಯಾರ್ಥಿ ವರ್ಷಿತ್ ಹೆಚ್.ಎಂ. ನಾಪತ್ತೆ

Suddi Udaya
error: Content is protected !!