25.2 C
ಪುತ್ತೂರು, ಬೆಳ್ತಂಗಡಿ
August 30, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವಾರ್ಷಿಕ ಸಭೆ: ನೂತನ ಸಮಿತಿ ರಚನೆ

ಬೆಳ್ತಂಗಡಿ : ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಸಬಲೀಕರಣಕ್ಕಾಗಿ ಕಳೆದ ಎಂಟು ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿರುವ ಸಂಜಯ್ ಗ್ಲೋಬಲ್ ಫೌಂಡೇಶನ್‌ನ ಕಾರ್ಯಚಟುವಟಿಕೆಗಳು ಮಾದರಿಯಾಗಿದ್ದು, ಸಮಾಜಮುಖಿ ಸೇವೆಯಲ್ಲಿ ಸಂಸ್ಥೆ ತನ್ನದೇ ಆದ ಛಾಪು ಮೂಡಿಸಿದೆ ಎಂದು ಸಂಪನ್ಮೂಲ ವ್ಯಕ್ತಿ ಮುಸ್ತಾಫ ಜಿ.ಕೆ. ಹೇಳಿದರು.

ಸಂಜಯ್ ಗ್ಲೋಬಲ್ ಫೌಂಡೇಶನ್‌ನ 2026–27ನೇ ಸಾಲಿನ ವಾರ್ಷಿಕ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಯಾವುದೇ ಸಂಘಟನೆಯ ಬೆಳವಣಿಗೆಯಲ್ಲಿ ಉತ್ತಮ ನಾಯಕತ್ವದ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದರು. ನಾಯಕತ್ವ ಎನ್ನುವುದು ಕೇವಲ ಹುದ್ದೆಯಲ್ಲ; ಅದು ಜವಾಬ್ದಾರಿ, ಪ್ರಾಮಾಣಿಕತೆ ಹಾಗೂ ಸೇವಾ ಮನೋಭಾವದ ಪ್ರತೀಕವಾಗಿದೆ. ಸಮಾಜದ ಒಳಿತಿಗಾಗಿ ತಂಡದೊಂದಿಗೆ ಕಾರ್ಯನಿರ್ವಹಿಸುವ ನಾಯಕರು ಸಂಘಟನೆಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಬಲ್ಲರು ಎಂದು ಹೇಳಿದರು.

ಶಿಕ್ಷಣ, ಆರೋಗ್ಯ ಹಾಗೂ ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಸಬಲೀಕರಣಕ್ಕಾಗಿ ಫೌಂಡೇಶನ್ ಸಲ್ಲಿಸುತ್ತಿರುವ ಸೇವೆ ಶ್ಲಾಘನೀಯವಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಜನಪರ ಕಾರ್ಯಕ್ರಮಗಳನ್ನು ರೂಪಿಸಿ ಸಮಾಜದ ಅಭಿವೃದ್ಧಿಗೆ ಹೆಚ್ಚಿನ ಕೊಡುಗೆ ನೀಡುವಂತೆ ಅವರು ಕರೆ ನೀಡಿದರು.

ಬೆಳ್ತಂಗಡಿಯ ಜಮೀಯತುಲ್ ಫಲಾಹ್ ಸಭಾಭವನದಲ್ಲಿ ನಡೆದ ಸಭೆಯ ಅಧ್ಯಕ್ಷತೆಯನ್ನು ಅಕ್ಬರ್ ಬೆಳ್ತಂಗಡಿ ವಹಿಸಿದ್ದರು. ಕಳೆದ ಸಾಲಿನ ವಾರ್ಷಿಕ ವರದಿಯನ್ನು ಪ್ರಧಾನ ಕಾರ್ಯದರ್ಶಿ ಹನೀಫ್ ವರ್ಷಾ ಮಂಡಿಸಿದರು.

ನೂತನ ಸಮಿತಿ ರಚನೆ:

2026–27ನೇ ಸಾಲಿನ ನೂತನ ಸಮಿತಿಯನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ರಿಯಾಝ್ ಐ.ಬಿ., ಪ್ರಧಾನ ಕಾರ್ಯದರ್ಶಿಯಾಗಿ ಶಬೀರ್ ಸಂಜಯನಗರ, ಉಪಾಧ್ಯಕ್ಷರಾಗಿ ಶೈರೊಝ್ ಉದಯನಗರ, ಜೊತೆ ಕಾರ್ಯದರ್ಶಿಯಾಗಿ ಅಶ್ರಫ್ ಕಟ್ಟೆ, ಕೋಶಾಧಿಕಾರಿಯಾಗಿ ರಿಝ್ವಾನ್ ಬಿ.ಕೆ. ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಅಬ್ಬಾಸ್ ಸಂಜಯನಗರ, ಖಾದರ್ ಕುದ್ರಡ್ಕ, ಶರೀಫ್ ವೆಲ್ಕಮ್ ಮತ್ತು ಹಕೀಮ್ ಸುದೆಮುಗೇರು ಆಯ್ಕೆಯಾದರು.

ಗಲ್ಫ್ ಸಮಿತಿ ಸದಸ್ಯರಾಗಿ ಇರ್ಫಾನ್ ಹಂಝ (ಸೌದಿ ಅರೇಬಿಯಾ), ಅನಸ್ (ಕತಾರ್) ಹಾಗೂ ಇರ್ಫಾನ್ (ಅಬುಧಾಬಿ) ಅವರನ್ನು ಆಯ್ಕೆ ಮಾಡಲಾಯಿತು.

ಸಲಹೆಗಾರರಾಗಿ ಅಕ್ಬರ್ ಬೆಳ್ತಂಗಡಿ, ಹನೀಫ್ ವರ್ಷಾ ಹಾಗೂ ಇಸ್ಮಾಯಿಲ್ ಐ.ಬಿ. ಅವರನ್ನು ನೇಮಕ ಮಾಡಲಾಯಿತು.

ಸಭೆಯಲ್ಲಿ ಸಂಜಯ್ ಗ್ಲೋಬಲ್ ಫೌಂಡೇಶನ್‌ನ ಸದಸ್ಯರು ಉಪಸ್ಥಿತರಿದ್ದರು. ರಶೀದ್ ಬೆಳ್ತಂಗಡಿ ಸ್ವಾಗತಿಸಿದರು. ಶೈರೊಝ್ ಉದಯನಗರ ವಂದಿಸಿದರು.

Related posts

ಬೆಳಾಲು ಮಿನಂದೇಲು ಬಳಿ ಹೊತ್ತಿ ಉರಿದ ಸ್ಕೂಟಿ : ಚಿಕಿತ್ಸೆ ಫಲಕಾರಿಯಾಗದೆ ದಿಯಾನ್ ಸಾವು

Suddi Udaya

ನಾಟ (NATA) 2026 ಫಲಿತಾಂಶ: ಎಕ್ಸೆಲ್‌ ಪಿಯು ಕಾಲೇಜಿಗೆ ಭರ್ಜರಿ ಯಶಸ್ಸು, ರಾಜ್ಯ ಮಟ್ಟದಲ್ಲಿ ಮಿಂಚಿದ ವಿದ್ಯಾರ್ಥಿಗಳು

Suddi Udaya

ಬಂದಾರು: ಮೈರೋಳ್ತಡ್ಕ-ವಿವೇಕಾನಂದ ನಗರ-ಕುರಾಯ ದೇವಸ್ಥಾನ ಸಂಪರ್ಕ ರಸ್ತೆ ಮರು ಡಾಮರೀಕರಣ-ಶಾಸಕರಿಗೆ ಗ್ರಾಮಸ್ಥರ ಕೃತಜ್ಞತೆ

Suddi Udaya

ರಾಷ್ಟ್ರ ಮಟ್ಟದ ಅತ್ಯುತ್ತಮ ಪ್ರವಾಸೋದ್ಯಮ ಹಳ್ಳಿ ಸ್ಪರ್ಧೆ : ಕುತ್ಲೂರು ಗ್ರಾಮ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಲಾಯಿಲ ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನದ ವಾರ್ಷಿಕ ಮಾರಿ ಪೂಜೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳಾಲು ಕೀನ್ಯಾಜೆ ನದಿಯಿಂದ ಅಕ್ರಮ ಮರಳು ಸಾಗಾಟ ಪತ್ತೆ

Suddi Udaya
error: Content is protected !!