July 14, 2026
ಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಮಡಂತ್ಯಾರು ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಮಡಂತ್ಯಾರು: ರೋಟರಿ ಕ್ಲಬ್‌ನ 2026–27ನೇ ಸಾಲಿನ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜು.12ರಂದು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಸಭಾಭವನದಲ್ಲಿ ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮದ ಅಂಗವಾಗಿ ಸಂಜೆ 6 ಗಂಟೆಗೆ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಬಳಿಕ ಸಂಜೆ 7 ಗಂಟೆಗೆ ನಡೆದ ಅಧಿಕೃತ ಸಮಾರಂಭವು ಆರುಷಿ, ಅದಿತ್ರಿ, ಶ್ರೀನಿಕಾ ಹಾಗೂ ಸಹಪಾಠಿಗಳ ಪ್ರಾರ್ಥನೆಯೊಂದಿಗೆ ಆರಂಭವಾಯಿತು.

ಕ್ಲಬ್‌ನ ಪೂರ್ವಾಧ್ಯಕ್ಷ ರೋ. ಜಯಂತ್ ಶೆಟ್ಟಿ ಅವರು ಸಭೆಯನ್ನು ಸ್ವಾಗತಿಸಿ ಎಲ್ಲರನ್ನು ಬರಮಾಡಿಕೊಂಡರು. ರೋ. ವಾಸುದೇವ ಗೌಡ ಅವರು ಕಳೆದ ಸಾಲಿನ ವಾರ್ಷಿಕ ವರದಿಯನ್ನು ಮಂಡಿಸಿದರು. ನಿರ್ಗಮಿತ ಅಧ್ಯಕ್ಷ ರೋ. ಮ್ಯಾಕ್ಸಿಮ್ ಅವರು ತಮ್ಮ ಒಂದು ವರ್ಷದ ಸೇವಾ ಅವಧಿಯ ಅನುಭವಗಳನ್ನು ಹಂಚಿಕೊಂಡರು.

ಪದಗ್ರಹಣ ಅಧಿಕಾರಿಯಾಗಿ ಆಗಮಿಸಿದ್ದ ಮಾಜಿ ಜಿಲ್ಲಾ ಗವರ್ನರ್ (P.D.G.) ರೋ. MPHF ವಿಕ್ರಂ ದತ್ತ ಅವರು ನೂತನ ಪದಾಧಿಕಾರಿಗಳಿಗೆ ಅಧಿಕಾರ ಮತ್ತು ಗೌಪ್ಯತಾ ಪ್ರಮಾಣ ವಚನ ಬೋಧಿಸಿ ಪದಗ್ರಹಣ ವಿಧಿಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ರೋಟರಿ ಸಂಸ್ಥೆಯು ವಿಶ್ವದಾದ್ಯಂತ ಮಾನವೀಯ ಸೇವೆಯ ಮೂಲಕ ಸಮಾಜದಲ್ಲಿ ಮೂಡಿಸುತ್ತಿರುವ ಮಹತ್ತರ ಬದಲಾವಣೆಗಳ ಕುರಿತು ಅವರು ವಿವರಿಸಿದರು.

ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ರೋ. ಪ್ರಶಾಂತ್ ಶೆಟ್ಟಿ ಅವರು 2026–27ನೇ ಸಾಲಿನ ಸೇವಾ ಯೋಜನೆಗಳು ಹಾಗೂ ಕ್ಲಬ್‌ನ ಮುಂದಿನ ಕಾರ್ಯಚಟುವಟಿಕೆಗಳ ಕುರಿತು ತಮ್ಮ ದೃಷ್ಟಿಕೋನವನ್ನು ಮಂಡಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ರೋ. ಪ್ರಕಾಶ್ ಕಾರಂತ್, ರೋ. ಡಾ. ಶಶಿಧರ ಡೋಂಗ್ರೆ, ರೋ. ಮೋಹನ್ ಮೂಲ್ಯ, ರೋ. ಡಾ. ಹಂಸರಾಜ ಆಳ್ವ ಹಾಗೂ ವಂ. ಸ್ವಾಮಿ ಸ್ಟಾನಿ ಗೋವಿಯಸ್ ಅವರು ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿ, ಸಮಾಜಮುಖಿ ಸೇವಾ ಕಾರ್ಯಗಳನ್ನು ಇನ್ನಷ್ಟು ವಿಸ್ತರಿಸುವಂತೆ ಕರೆ ನೀಡಿದರು.

ನೂತನ ಕಾರ್ಯದರ್ಶಿ ರೋ. ಫ್ರಾನ್ಸಿಸ್ ವಿ.ವಿ. ಅವರು ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಕಾರ್ಯಕ್ರಮವನ್ನು ರೋ. ತುಳಸಿದಾಸ್ ಪೈ, ರೋ. ಹರ್ಷ ನಾರಾಯಣ ಶೆಟ್ಟಿ ಹಾಗೂ ರೋ. ಅಶೋಕ್ ಗುಂಡಿಯಲ್ಕೆ ಅವರು ನಿರೂಪಿಸಿದರು.

ಈ ಸಂದರ್ಭದಲ್ಲಿ ಕ್ಲಬ್‌ನ ಸದಸ್ಯರು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಗಣ್ಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು, ನೂತನ ಪದಾಧಿಕಾರಿಗಳಿಗೆ ಶುಭಾಶಯ ಕೋರಿದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಿವೃತ್ತರಾದ ಡಾ| ಎಲ್.ಹೆಚ್ ಮಂಜುನಾಥ್ ಅವರಿಗೆ ಸನ್ಮಾನ

Suddi Udaya

ಪಡ್ಡಂದಡ್ಕ ನಿವೃತ್ತ ಮುಖ್ಯೋಪಾಧ್ಯಾಯ ತಿರುಮಲೇಶ್ವರ ಭಟ್ಟರಿಗೆ ‘ಹವ್ಯಕ ಶಿಕ್ಷಕ ರತ್ನ’ ಪ್ರಶಸ್ತಿ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸಮ್ಮರ್ ಸ್ಪಾರ್ಕ್ ಬೇಸಿಗೆ ಶಿಬಿರದ ಸಮಾರೋಪ ಹಾಗೂ ಪ್ರದರ್ಶನ-ಮಾರಾಟ ಮೇಳ

Suddi Udaya

ಜೈನ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಚಕರುಗಳಿಗೆ ಮಾಸಿಕ ಗೌರವ ಧನ ನೀಡಲು ಅನುದಾನ ಬಿಡುಗಡೆ

Suddi Udaya

ಮರೋಡಿ: ವಿದ್ಯುತ್ ಪರಿವರ್ತಕದಿಂದ ಬೆಂಕಿ ಅವಘಡ

Suddi Udaya

ಇಂದಬೆಟ್ಟು ಸ. ಹಿ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!