ಲಾಯಿಲ : ಸಾರ್ವಜನಿಕ ಗಣೇಶೋತ್ಸವ ಸಮಿತಿ ಲಾಯಿಲ ಇದರ 37 ನೇ ವರ್ಷದ ಲೆಕ್ಕಾಚಾರ ಮಂಡನೆ ಹಾಗೂ 38 ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆಯು ಲಾಯಿಲ ವಿಘ್ನೇಶ್ವರ ಕಲಾ ಮಂದಿರದಲ್ಲಿ ನೆರವೇರಿತು.
ನೂತನ ಅಧ್ಯಕ್ಷರಾಗಿ ಗಣೇಶ್ ಆರ್, ಕಾರ್ಯದರ್ಶಿಯಾಗಿ ಅರವಿಂದ್ ಲಾಯಿಲ, ಕೋಶಾಧಿಕಾರಿಯಾಗಿ ದಿನೇಶ್ ಶೆಟ್ಟಿ ಜವಾಬ್ದಾರಿ ವಹಿಸಿಕೊಂಡರು. ಜೊತೆಗೆ ಹಲವು ಸಮಿತಿಗಳಿಗೆ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು.
ಪ್ರಧಾನ ಕಾರ್ಯದರ್ಶಿ ರುಕ್ಮಯ ಕನ್ನಾಜೆ ಉಪಸ್ಥಿತರಿದ್ದರು.
















