25.2 C
ಪುತ್ತೂರು, ಬೆಳ್ತಂಗಡಿ
August 30, 2026
ತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ತರಗತಿ ಉದ್ಘಾಟನೆ

ಬೆಳ್ತಂಗಡಿ: ಸಮಾಜ ಕಲ್ಯಾಣ ಇಲಾಖೆಯಿಂದ ನಡೆಸಲ್ಪಡುವ ಹೊಸಂಗಡಿಯ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ವತಿಯಿಂದ ಹಮ್ಮಿಕೊಂಡಿರುವ ಯಕ್ಷಧ್ರುವ ಯಕ್ಷ ಶಿಕ್ಷಣ ತರಬೇತಿ ತರಗತಿಗೆ ಜು. 11ರಂದು ಚಾಲನೆ ನೀಡಲಾಯಿತು.

ಯಕ್ಷ ಶಿಕ್ಷಣ ತರಗತಿ, ಶಾಲಾ ಸಂಸತ್ ಮತ್ತು ವಿವಿಧ ಸಂಘಗಳನ್ನು ಉದ್ಘಾಟಿಸಿ ಮಾತನಾಡಿದ ಯಕ್ಷಧ್ರುವ ಪಟ್ಲ ಫೌಂಡೇಶನ್ ಮೂಡುಬಿದಿರೆ ಘಟಕದ ಗೌರವಾಧ್ಯಕ್ಷ ಕೆ. ಶ್ರೀಪತಿ ಭಟ್ ಮಾತನಾಡಿ ವಿದ್ಯಾರ್ಥಿಗಳು ತ್ರಿಕರಣ ಪೂರ್ವಕವಾಗಿ ತಮ್ಮನ್ನು ತೊಡಗಿಸಿಕೊಂಡಾಗ ಶ್ರೇಷ್ಠ ವ್ಯಕ್ತಿಗಳಾಗಿ ಸಮಾಜದಲ್ಲಿ ಗುರುತಿಸಿಕೊಳ್ಳಲು ಸಾಧ್ಯ ಎಂದರು.

ಯಕ್ಷಧ್ರುವ ಯಕ್ಷ ಶಿಕ್ಷಣ ಯೋಜನೆಯ ಸಂಚಾಲಕ ಮಹಾವೀರ ಪಾಂಡಿಯವರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ ದ. ಕ. ಜಿಲ್ಲೆಯ 12 ವಸತಿ ಶಾಲೆಗಳಲ್ಲಿ ಯಕ್ಷ ಧ್ರುವ ಯಕ್ಷ ಶಿಕ್ಷಣ ತರಗತಿಗಳು ನಡೆಯುತ್ತಿದ್ದು ಡಿಸೆಂಬರ್ ತಿಂಗಳವರೆಗೆ ವಾರಕ್ಕೆ ಎರಡರಂತೆ ಪ್ರತಿ ತಿಂಗಳು 8 ತರಗತಿ ನಡೆಯಲಿದೆ ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಯಕ್ಷಧ್ರುವ ಪಟ್ಲ ಫೌಂಡೇಶನ್ ಮೂಡುಬಿದಿರೆ ಘಟಕದ ಸಂಚಾಲಕ ರವಿಪ್ರಸಾದ್ ಕೆ. ಶೆಟ್ಟಿಯವರು ಮಾತನಾಡಿ ಯಕ್ಷ ಶಿಕ್ಷಣವು ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಪೂರಕವಾಗಿರುತ್ತದಯೇ ಹೊರತು ಯಾವತ್ತೂ ಮಾರಕವಾಗಿರುವುದಿಲ್ಲ ಎಂದರಲ್ಲದೆ ಯಕ್ಷ ಶಿಕ್ಷಣ ಎಂಬುದು ಮುಂದಿನ ಜೀವನದಲ್ಲಿ ಪ್ರಮುಖ ಘಟ್ಟವಾಗಿ ಮಾರ್ಪಡಲಿದೆ ಎಂದರು.

ಶಾಲಾ ಪ್ರಾಂಶುಪಾಲರು ಶ್ರೀಧರ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಮೂಡುಬಿದಿರೆ ಘಟಕದ ಅಧ್ಯಕ್ಷ ಕಂಡಿಗ ರತ್ನಾಕರ ಶೆಟ್ಟಿ, ಶಾಲಾ ಉಪ ಪ್ರಾಂಶುಪಾಲೆ ವಿದ್ಯಾಲತಾ, ಯಕ್ಷ ಶಿಕ್ಷಕ ಪ್ರಜ್ವಲ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಸಹ ಶಿಕ್ಷಕಿ ಕಾವ್ಯ ಮತ್ತು ರಕ್ಷಿತಾ ನಿರೂಪಿಸಿ, ಚಿತ್ರಕಲಾ ಶಿಕ್ಷಕ ಸುಧೀರ್ ಬಾಳೆಪುಣಿ ಸ್ವಾಗತಿಸಿ, ಅನಿತಾ ವಂದಿಸಿದರು.

Related posts

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಣಕು ಸಂಸತ್ತು ಅಧಿವೇಶನ.

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ನೀರು ನೈರ್ಮಲ್ಯ ಸ್ವಚ್ಛ ಗ್ರಾಮ ಚಿತ್ರ ಪ್ರದರ್ಶನ ಮತ್ತು ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಅತ್ಯುತ್ತಮ ಜೂನಿಯರ್ ರೆಡ್ ಕ್ರಾಸ್ ಕೌನ್ಸಿಲರ್ ಆಗಿ ಪ್ರಮೀಳಾ ರಿಗೆ ಜಿಲ್ಲಾ ಪ್ರಶಸ್ತಿ

Suddi Udaya

ಬೆಳಾಲು ನಿವೃತ್ತ ಶಿಕ್ಷಕನ ಬರ್ಬರ ಕೊಲೆ ಪ್ರಕರಣ: ಸ್ಥಳಕ್ಕೆ ಎಸ್ಪಿ ಸೇರಿದಂತೆ ವಿವಿಧ ತಂಡದಿಂದ ತನಿಖೆ

Suddi Udaya

ಇಂದಬೆಟ್ಟು : ಬಂಗಾಡಿ ನಿವಾಸಿ ಪ್ರದೀಪ್ ದೇವಾಡಿಗ ನಿಧನ

Suddi Udaya

ಅ.11: ಮೆಟ್ರಿಕ್ ಪೂರ್ವ ಬಾಲಕ- ಬಾಲಕಿಯರ ವಿದ್ಯಾರ್ಥಿ ನಿಲಯ ಉದ್ಘಾಟನೆ

Suddi Udaya
error: Content is protected !!