July 14, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಗಾಂಜಾ ಸೇವನೆ: ಇಬ್ಬರ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕ‌ ಬಾವುಟ ಗುಡ್ಡ ಎಂಬಲ್ಲಿ ಗಾಂಜಾ‌ಸೇವನೆ ಮಾಡುತ್ತಿದ್ದ ಇಬ್ಬರ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆಪಾದಿತರಾದ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದಡ್ಕ ಬಾವುಟಗುಡ್ಡೆ ನಿವಾಸಿ ಮಹಮ್ಮದ್ ಕಾನಿಶ್ (21) ಮತ್ತು ಕುವೆಟ್ಟು ಗ್ರಾಮದ ಮದಡ್ಕ ಬಾವುಟಗುಡ್ಡೆ ನಿವಾಸಿ ಮಹಮ್ಮದ್ ಕೈಸ್ (23) ಎಂಬವರೇ ಗಾಂಜಾಸೇವನೆ ಮಾಡಿದ ಆರೋಪಿಗಳಾಗಿದ್ದಾರೆ.

ಬೆಳ್ತಂಗಡಿ ಸಬ್ ಇನ್ಸ್‌ಪೆಕ್ಟರ್ ಆನಂದ ಎಂ ಜು.11 ರಂದು ಇಲಾಖಾ ಜೀಪಿನಲ್ಲಿ ಠಾಣಾ ಸರಹದ್ದಿನ ಗುರುವಾಯನಕೆರೆ, ಮದ್ದಡ್ಕ ಸಬರಬೈಲು ಕಡೆಗಳಲ್ಲಿ ರೌಂಡ್ಸ್ ಕರ್ತವ್ಯದಲ್ಲಿ ಇರುವ ಸಮಯ ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಮದ್ದಡ್ಕ ಬಾವುಟಗುಡ್ಡೆ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಆಪಾದಿತರಾದ ಮಹಮ್ಮದ್ ಕಾನಿಶ್ (21) ಮತ್ತು ಮಹಮ್ಮದ್ ಕೈಸ್ (23) ಎಂಬವರು ಅಮಲಿನಲ್ಲಿ ತೇಲಾಡುತ್ತಿರುವುದನ್ನು ಕಂಡು ಅವರ ಬಳಿ ಹೋಗಿ ಅವರನ್ನು ವಿಚಾರಿಸಿದಾಗ ನಶೆಯ ಅಮಲಿನಲ್ಲಿ ಉತ್ತರಿಸುತ್ತಾ ಸಮರ್ಪಕವಾಗಿ ಉತ್ತರ ನೀಡದೇ ಇದ್ದವರನ್ನು ಮತ್ತೆ ಮತ್ತೆ ವಿಚಾರಿಸಲಾಗಿ ನಿಷೇದಿತ ಮಾದಕ ವಸ್ತುವಾದ ಗಾಂಜಾ ಕೊಕೇನ್, ಆಂಪಿಟಮಿನ್ ನ್ನು ಸೇವನೆ ಮಾಡಿರುವುದನ್ನು ಒಪ್ಪಿಕೊಂಡಿದ್ದು ಇವರ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ: 27(ಎ)ಮತ್ತು 27(ಬಿ) ಎನ್ಡಿಪಿಎಸ್ ಆಕ್ಟ್ ಯಂತೆ ಪ್ರಕರಣ ದಾಖಲಾಗಿದೆ.

Related posts

ಚಿನ್ನದ ಕರಿಮಣಿ ಸರ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂತಿರುಗಿಸುವಂತೆ ಮನವಿ

Suddi Udaya

ಸುಲ್ಕೇರಿಮೊಗ್ರು: ಸೇನರಪಲ್ಕೆ ನಿವಾಸಿ ಅಶ್ವಿನಿ ಅಸೌಖ್ಯದಿಂದ ನಿಧನ

Suddi Udaya

ಎಲ್.ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಮಾದಕ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ: ರಾತ್ರಿ ಮೂಡಪ್ಪ ಸೇವೆ

Suddi Udaya

ಚಿಬಿದ್ರೆ: ಪೆರಿಯಡ್ಕ ಮಾಲ್ನ ನಿವಾಸಿ ಬಾಲಣ್ಣ ಗೌಡ ಹೃದಯಾಘಾತದಿಂದ ನಿಧನ

Suddi Udaya

ಪತಂಜಲಿ ಯೋಗ ಶಾಖೆಯಲ್ಲಿ ಶ್ರೀ ಹನುಮ ಜಯಂತಿ ಆಚರಣೆ

Suddi Udaya
error: Content is protected !!