July 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾರಾವಿ: ಸಂತ ಅಂತೋನಿ ಪದವಿ ಪೂರ್ವ ಕಾಲೇಜಿನಲ್ಲಿ ವನಮಹೋತ್ಸವ

ನಾರಾವಿ: ಸಂತ ಅಂತೋನಿ ಪದವಿ ಪೂರ್ವ ಕಾಲೇಜು, ನಾರವಿಯಲ್ಲಿ ಜು.13ರಂದು ವನಮಹೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಸಾಲ್ದಾನ ವಹಿಸಿದ್ದರು. ಇಂಗ್ಲಿಷ್ ಉಪನ್ಯಾಸಕರಾದ ವಂ.ಸ್ವಾ. ರೂಪೇಶ್ ತಾವ್ರೋ ಅವರು ಪರಿಸರ ಸಂರಕ್ಷಣೆಯ ಮಹತ್ವವನ್ನು ವಿವರಿಸುತ್ತಾ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಪ್ರತಿಯೊಬ್ಬ ವಿದ್ಯಾರ್ಥಿಯೂ ಕನಿಷ್ಠ ಒಂದು ಗಿಡವನ್ನು ನೆಟ್ಟು, ಅದನ್ನು ಪೋಷಿಸಿ ಬೆಳೆಸುವ ಸಂಕಲ್ಪ ಮಾಡಬೇಕೆಂದು ಕರೆ ನೀಡಿದರು.

ಮುಖ್ಯ ಅತಿಥಿಗಳಾಗಿ ನಾರಾವಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರಾದ ಗೋಪಾಲಕೃಷ್ಣ ತುಳುಪುಳೆ ಹಾಗೂ ಸಂತ ಪಾವ್ಲ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕರಾದ ರಿಚಾರ್ಡ್ ಮೊರಾಸ್ ಉಪಸ್ಥಿತರಿದ್ದು, ಪರಿಸರ ಸಂರಕ್ಷಣೆ ಮತ್ತು ವೃಕ್ಷಾರೋಪಣೆಯ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದ ಅಂಗವಾಗಿ ಕಾಲೇಜು ಆವರಣದಲ್ಲಿ ವಿವಿಧ ಜಾತಿಯ ಸಸಿಗಳನ್ನು ನೆಟ್ಟು, ಅವುಗಳನ್ನು ಸಂರಕ್ಷಿಸುವ ಸಂಕಲ್ಪ ಮಾಡಲಾಯಿತು.

ಕಾರ್ಯಕ್ರಮದ ಸಂಯೋಜಕಿ ರಾಜೇಶ್ವರಿ ಸ್ವಾಗತಿಸಿದರು. ಉಪನ್ಯಾಸಕಿ ಸುಚೇತಾ ವಂದಿಸಿದರು. ದ್ವಿತೀಯ ವಿಜ್ಞಾನ ವಿಭಾಗದ ಸಾನ್ವಿ ಭಟ್ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ. ಸಾಹಿತ್ಯ ಸಮ್ಮೇಳನ : ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ 92ನೇ ಅಧಿವೇಶನ ಉದ್ಘಾಟಿಸಿದ ಶತಾವಧಾನಿ ಡಾ.ರಾ.ಗಣೇಶ್

Suddi Udaya

ಮುಂಡಾಜೆ ಕೆ.ಎನ್. ಭಟ್ ಶಿರಾಡಿಪಾಲ್ ಅವರ ಶತಮಾನೋತ್ಸವದ ಪ್ರಯುಕ್ತ ಶತನಮನ ಶತಸನ್ಮಾನ ಸರಣಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ರೋಟರಿ ಆಯನ್ಸ್ ಕ್ಲಬ್ ವತಿಯಿಂದ ಸರ್ಕಾರಿ ಪ್ರೌಢಶಾಲೆ ನೇಲ್ಯಡ್ಕಕ್ಕೆ ವಿಜ್ಞಾನ ಉಪಕರಣಗಳ ಕೊಡುಗೆ

Suddi Udaya

ಕೊಕ್ಕಡ: ಸಂವಿಧಾನ ಜಾಗೃತಿ ಜಾಥಾ

Suddi Udaya

ಮೇ 14ರಿಂದ 24ರವರೆಗೆ ಕುಲಶೇಖರ ವೀರನಾರಾಯಣ ದೇವರಿಗೆ ಬ್ರಹ್ಮಕಲಶದ ವೈಭವ : ರೂ. 10 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣ: ಪತ್ರಿಕಾಗೋಷ್ಠಿಯಲ್ಲಿ ಮಯೂರ್ ಉಳ್ಳಾಲ್ ಮಾಹಿತಿ

Suddi Udaya

ಡಾ. ಯು.ಸಿ. ಪೌಲೋಸ್‌ರವರ ಸೇವೆಗೆ “ಭಾರತದ ಜವಾಬ್ದಾರಿಯುತ ಮತ್ತು ಸಕ್ರಿಯ ನಾಗರಿಕ ಪ್ರಶಸ್ತಿ

Suddi Udaya
error: Content is protected !!