July 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ವತಿಯಿಂದ ಪುಸ್ತಕ ಮತ್ತು ಪೆನ್ನು ವಿತರಣೆ:

ಬಳಂಜ : ಜಿಲ್ಲೆಯ ಹೆಸರಾಂತ ಭಜನಾ ಮಂಡಳಿಗಳಲ್ಲಿ ಒಂದಾದ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯ ನೇತೃತ್ವದಲ್ಲಿ ಮಂಡಳಿಯ ಸದಸ್ಯರಿಗೆ ಉಚಿತ ಪುಸ್ತಕ ಹಾಗೂ ಪೆನ್ನು ವಿತರಣಾ ಕಾರ್ಯಕ್ರಮವು ಜು.12 ರಂದು ಬಳಂಜ ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ವಹಿಸಿದರು. ಕಾರ್ಯಕ್ರಮವನ್ನು ಉದ್ಯಮಿಗಳಾದ ಯೋಗೀಶ್ ಪೂಜಾರಿ ಕಾಪಿನಡ್ಕರವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಮಾಜಿ ಅಧ್ಯಕ್ಷ ಪ್ರವೀಣ್ ಕುಮಾರ್ ಎಚ್ ಎಸ್,
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವಲಯಾದ್ಯಕ್ಷ ಸದಾನಂದ ಸಾಲಿಯಾನ್, ಮಂಡಳಿಯ ಮಾಜಿ ಅಧ್ಯಕ್ಷೆ ಜ್ಯೋತಿ ಉಪಸ್ಥಿತರಿದ್ದರು.

ಮಂಡಳಿಯ ಪ್ರಧಾನ ಸಂಚಾಲಕ ಹರೀಶ್ ವೈ ಚಂದ್ರಮ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ವರ್ಷದ ಪುಸ್ತಕ ವಿತರಣೆಗೆ ಯುವ ಉದ್ಯಮಿಗಳಾದ ಅಶ್ರಫ್ ಬಳಂಜ ಪೂರ್ಣ ಸಹಕಾರವನ್ನು ನೀಡಿದ್ದು ಅಶ್ರಫ್ ರವರ ಸಲಹೆಯಂತೆ ಅವರ ಆತ್ಮೀಯ ಸ್ನೇಹಿತರು ಹಾಗೂ ಮಂಡಳಿಯ ಸಹ ಸಂಚಾಲಕರಾದ ಪ್ರಣಾಮ್ ಶೆಟ್ಟಿಯವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.


ಮನ್ವಿತ ಸ್ವಾಗತಿಸಿದರು. ಪ್ರತಿಕ್ಷಾ ಪ್ರಾರ್ಥನೆ ಹಾಡಿದರು. ಮಂಡಳಿಯ ತರಬೇತುದಾರೆ ಕು.ಮಾನ್ಯ ಕಾರ್ಯಕ್ರಮ ನಿರೂಪಿಸಿ, ಮಂಡಳಿಯ ಅಧ್ಯಕ್ಷೆ ಕುಮಾರಿ ಪ್ರಸಿದ್ದಿ ಶೆಟ್ಟಿ ಧನ್ಯವಾದ ಸಲ್ಲಿಸಿದರು. ಸಂಜೆ ಮಂಡಳಿಯ ವತಿಯಿಂದ ಬೊಲ್ಲಜ್ಜ ದೈವಕ್ಕೆ ಅಗೆಲು ಸೇವೆ ನಡೆಯಿತು.

Related posts

ಕನ್ಯಾಡಿ ಗುರುದೇವ ಮಠದಲ್ಲಿ ಶಾಸಕ ಹರೀಶ್ ಪೂಂಜರಿಂದ ಸ್ವಾಮೀಜಿಯವರ ಪಾದ ಪೂಜೆ

Suddi Udaya

ಗುರುವಾಯನಕೆರೆ ಪೇಟೆಯಲ್ಲಿ ಬೀದಿ ನಾಯಿಗಳ ಹಾವಳಿ: ಶಾಲಾ ಮಕ್ಕಳು, ದ್ವಿಚಕ್ರ ವಾಹನ ಸವಾರರಿಗೆ ತಂದೊಡ್ಡಿದ ಸಂಕಷ್ಟ

Suddi Udaya

ಪಡಂಗಡಿ ಗ್ರಾ.ಪಂ. ಅಧ್ಯಕ್ಷರಾಗಿ ಪ್ರಶಾಂತ್ ಸುವರ್ಣ, ಉಪಾಧ್ಯಕ್ಷರಾಗಿ ಪಿ.ಎನ್ ವಸಂತಿ ಅವಿರೋಧ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಬಂಗ್ಲೆಗುಡ್ಡೆಯಲ್ಲಿ ಸಿಕ್ಕ ಏಳು ಅಸ್ಥಿಪಂಜರ ಎಫ್ಎಸ್ಎಲ್ ಗೆ ರವಾನೆ

Suddi Udaya

ಎ.24- ಮೇ 2 : ಬೆಳ್ತಂಗಡಿ ದೀಪಾ ಗೋಲ್ಡ್ ನಲ್ಲಿ ಅಕ್ಷಯ ತೃತೀಯದ ಸಂಭ್ರಮ, ಕೊಡುಗೆಗಳು

Suddi Udaya
error: Content is protected !!