24.7 C
ಪುತ್ತೂರು, ಬೆಳ್ತಂಗಡಿ
August 30, 2026
Uncategorizedಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಮುಸ್ತಾಕ್ ಅನುಮಾನಸ್ಪದ ಸಾವು ಪ್ರಕರಣ: ಪ್ರಕರಣಕ್ಕೆ ತಿರುವು ಪಡೆದ ಮತ್ತೊಂದು ಪ್ರಕರಣ

ಬೆಳ್ತಂಗಡಿ : ಕುವೆಟ್ಟು ಗ್ರಾಮದ ಶಕ್ತಿನಗರ ಎಂಬಲ್ಲಿರುವ ಎಸ್.ಎಲ್.ವಿ ಇ ಪವರ್ ಪ್ರೈವೇಟ್ ಲಿಮಿಟೆಡ್ ರಿಸೀವಿಂಗ್ ಸ್ಟೇಷನ್ ನಲ್ಲಿ 01-07-2026 ರಂದು ರಿಸೀವಿಂಗ್ ಸ್ಟೇಷನ್ ಕಂಪೌಂಡ್ ನ ಒಳಗೆ ತೊಂಡೆಕಾಯಿ ಬೆಳೆಯಲು ಚಪ್ಪರಕ್ಕೆ ಹಾಕಿದ್ದ ಜಿಐ ಸ್ಟೀಲ್ ವಯರ್ ಗೆ ಅಪರಿಚಿತ ಗಂಡಸು ಕುತ್ತಿಗೆಗೆ ವಯರ್ ಸಿಕ್ಕಿಕೊಂಡು ಅಥವಾ ಇನ್ನಾವುದೋ ಕಾರಣದಿಂದ ಮೃತಪಟ್ಟ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ 35/2026 ರಂತೆ ಪ್ರಕರಣ ದಾಖಲಾಗಿರುತ್ತದೆ.

ಬಳಿಕ ಪ್ರಕರಣದಲ್ಲಿ ಮೃತಪಟ್ಟ ವ್ಯಕ್ತಿ ಹೆಸರು ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಜನತಾ ಕಲೋನಿ ನಿವಾಸಿ ಶರೀಫ್.ಕೆ ಮಗ ಮುಸ್ತಾಕ್(27) ಎಂಬುದಾಗಿ ತಿಳಿದುಬಂದಿದ್ದು, ಪ್ರಕರಣದಲ್ಲಿ ಮೃತಪಟ್ಟ ಮುಸ್ತಾಕ್ ನ ಮೃತದೇಹ ಪತ್ತೆಯಾದ ಸ್ಥಳದ ಹತ್ತಿರ ರಿಸಿವಿಂಗ್ ಸ್ಟೇಷನ್ ನ ಕಂಪೌಂಡ್ ಒಳಗೆ ಉಪಯೋಗಿಸಿ ಉಳಿದ ಹಳೆಯ ಅಲ್ಯೂಮಿನಿಯಂ ವಯರ್ ತುಂಡುಗಳು ಬಿದ್ದಿರುವುದನ್ನು ಕಂಡು ಈ ಬಗ್ಗೆ ಅನುಮಾನಗೊಂಡ ಮ್ಯಾನೇಜರ್ ರಾಜೇಂದ್ರನ್ ಅವರು ತಮ್ಮ ರಿಸೀವಿಂಗ್ ಸ್ಟೇಷನ್ ನ ಕಂಪೌಂಡ್ ಒಳಗೆ ಇರಿಸಿದ ಅಲ್ಯೂಮಿನಿಯಂ ವಯರ್ ನ ಬಂಡಲ್ ಗಳು, ಮತ್ತು ಇನ್ನಿತರ ಸಲಕರಣೆಗಳನ್ನು ಪರಿಶೀಲನೆ ನಡೆಸಿದಾಗ ಹಳೆಯ ಅಲ್ಯೂಮಿನಿಯಂ ವಯರ್ ಗಳು ಕಳ್ಳತನವಾಗಿರುವುದು ತಿಳಿದು ಈ ವಿಚಾರ ಮೇಲಾಧಿಕಾರಿಗಳಿಗೆ ತಿಳಿಸಿದ ಬಳಿಕ ಮೇಲಾಧಿಕಾರಿಗಳು ಬಂದು ಕೂಲಂಕುಷವಾಗಿ ಪರಿಶೀಲನೆ ನಡೆಸಿದಾಗ ಅಂದಾಜು ಮೌಲ್ಯ 50 ಸಾವಿರ ರೂಪಾಯಿ ಮೌಲ್ಯ ಸುಮಾರು 1100 ಕೆಜಿಯಷ್ಟು ಹಳೆಯ ಅಲ್ಯೂಮಿನಿಯಂ ವಯರ್ ಗಳು ಕಳ್ಳತನವಾಗಿರುವುದಾಗಿ ಎಸ್. ಎಲ್. ವಿ ಇ ಪವರ್ ಪ್ರೈವೇಟ್ ಲಿಮಿಟೆಡ್ ರಿಸೀವಿಂಗ್ ಸ್ಟೇಷನ್ ನಲ್ಲಿ ಮ್ಯಾನೇಜರ್ ಆಗಿರುವ ರಾಜೇಂದ್ರನ್(50) ಎಂಬವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಳ್ಳತನ ಮಾಡಿದ ಮೃತಪಟ್ಟ ಮುಸ್ತಾಕ್ ಮತ್ತು ಇತರರ ವಿರುದ್ಧ ಕಲಂ: 331(4), 305 ಜೊತೆಗೆ 3(5)ಬಿ. ಎನ್ ಎಸ್ ಯಂತೆ ಜು.11 ರಂದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಯುತ್ತಿದೆ.

Related posts

ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದ ನಿರ್ಗಮಿತ ಟ್ರಸ್ಟಿಗಳಿಗೆ ಬೀಳ್ಕೊಡುಗೆ

Suddi Udaya

ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟುಹಬ್ಬದ ಸಂಭ್ರಮ ತಾಲೂಕಿನ ನಂಬರ್ 1 ವಾರಪತ್ರಿಕೆ ಸುದ್ದಿ ಉದಯ ಬಳಗದಿಂದ ಗೌರವಾರ್ಪಣೆ

Suddi Udaya

ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಆಗಮಿಸಿದ ಅತಿಥಿ ತನ್ವೀರ್ ಅಹಮ್ಮದ್ ಉಲ್ಲಾ ಅವರಿಗೆ ರಸ್ತೆಯುದ್ದಕ್ಕೂ ಭವ್ಯ ಸ್ವಾಗತ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಗೆ ಶೇ. 91.83% ಫಲಿತಾಂಶ

Suddi Udaya

ನಿರಂತರ ನೆಟ್‌ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ಗ್ರಾಮಸ್ಥರು, ಏರ್‌ಟೆಲ್ ವಿರುದ್ಧ ತೆಂಕಕಾರಂದೂರು ಗ್ರಾಮಸ್ಥರ ಪ್ರತಿಭಟನೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya
error: Content is protected !!