25.2 C
ಪುತ್ತೂರು, ಬೆಳ್ತಂಗಡಿ
August 30, 2026
ತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ತರಗತಿ ಉದ್ಘಾಟನೆ

ಬೆಳ್ತಂಗಡಿ: ಸಮಾಜ ಕಲ್ಯಾಣ ಇಲಾಖೆಯಿಂದ ನಡೆಸಲ್ಪಡುವ ಹೊಸಂಗಡಿಯ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ವತಿಯಿಂದ ಹಮ್ಮಿಕೊಂಡಿರುವ ಯಕ್ಷಧ್ರುವ ಯಕ್ಷ ಶಿಕ್ಷಣ ತರಬೇತಿ ತರಗತಿಗೆ ಜು. 11ರಂದು ಚಾಲನೆ ನೀಡಲಾಯಿತು.

ಯಕ್ಷ ಶಿಕ್ಷಣ ತರಗತಿ, ಶಾಲಾ ಸಂಸತ್ ಮತ್ತು ವಿವಿಧ ಸಂಘಗಳನ್ನು ಉದ್ಘಾಟಿಸಿ ಮಾತನಾಡಿದ ಯಕ್ಷಧ್ರುವ ಪಟ್ಲ ಫೌಂಡೇಶನ್ ಮೂಡುಬಿದಿರೆ ಘಟಕದ ಗೌರವಾಧ್ಯಕ್ಷ ಕೆ. ಶ್ರೀಪತಿ ಭಟ್ ಮಾತನಾಡಿ ವಿದ್ಯಾರ್ಥಿಗಳು ತ್ರಿಕರಣ ಪೂರ್ವಕವಾಗಿ ತಮ್ಮನ್ನು ತೊಡಗಿಸಿಕೊಂಡಾಗ ಶ್ರೇಷ್ಠ ವ್ಯಕ್ತಿಗಳಾಗಿ ಸಮಾಜದಲ್ಲಿ ಗುರುತಿಸಿಕೊಳ್ಳಲು ಸಾಧ್ಯ ಎಂದರು.

ಯಕ್ಷಧ್ರುವ ಯಕ್ಷ ಶಿಕ್ಷಣ ಯೋಜನೆಯ ಸಂಚಾಲಕ ಮಹಾವೀರ ಪಾಂಡಿಯವರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ ದ. ಕ. ಜಿಲ್ಲೆಯ 12 ವಸತಿ ಶಾಲೆಗಳಲ್ಲಿ ಯಕ್ಷ ಧ್ರುವ ಯಕ್ಷ ಶಿಕ್ಷಣ ತರಗತಿಗಳು ನಡೆಯುತ್ತಿದ್ದು ಡಿಸೆಂಬರ್ ತಿಂಗಳವರೆಗೆ ವಾರಕ್ಕೆ ಎರಡರಂತೆ ಪ್ರತಿ ತಿಂಗಳು 8 ತರಗತಿ ನಡೆಯಲಿದೆ ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಯಕ್ಷಧ್ರುವ ಪಟ್ಲ ಫೌಂಡೇಶನ್ ಮೂಡುಬಿದಿರೆ ಘಟಕದ ಸಂಚಾಲಕ ರವಿಪ್ರಸಾದ್ ಕೆ. ಶೆಟ್ಟಿಯವರು ಮಾತನಾಡಿ ಯಕ್ಷ ಶಿಕ್ಷಣವು ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಪೂರಕವಾಗಿರುತ್ತದಯೇ ಹೊರತು ಯಾವತ್ತೂ ಮಾರಕವಾಗಿರುವುದಿಲ್ಲ ಎಂದರಲ್ಲದೆ ಯಕ್ಷ ಶಿಕ್ಷಣ ಎಂಬುದು ಮುಂದಿನ ಜೀವನದಲ್ಲಿ ಪ್ರಮುಖ ಘಟ್ಟವಾಗಿ ಮಾರ್ಪಡಲಿದೆ ಎಂದರು.

ಶಾಲಾ ಪ್ರಾಂಶುಪಾಲರು ಶ್ರೀಧರ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಮೂಡುಬಿದಿರೆ ಘಟಕದ ಅಧ್ಯಕ್ಷ ಕಂಡಿಗ ರತ್ನಾಕರ ಶೆಟ್ಟಿ, ಶಾಲಾ ಉಪ ಪ್ರಾಂಶುಪಾಲೆ ವಿದ್ಯಾಲತಾ, ಯಕ್ಷ ಶಿಕ್ಷಕ ಪ್ರಜ್ವಲ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಸಹ ಶಿಕ್ಷಕಿ ಕಾವ್ಯ ಮತ್ತು ರಕ್ಷಿತಾ ನಿರೂಪಿಸಿ, ಚಿತ್ರಕಲಾ ಶಿಕ್ಷಕ ಸುಧೀರ್ ಬಾಳೆಪುಣಿ ಸ್ವಾಗತಿಸಿ, ಅನಿತಾ ವಂದಿಸಿದರು.

Related posts

ನೇತ್ರಾವತಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟದ ಆಟಿ ಕೂಟ – ಮೆರಗು ತಂದ ಆಟಿ ಕಳೆಂಜ : ರಂಗೇರಿಸಿದ ಮಹಿಳೆಯರ ಕೋರಿದ ಕಟ್ಟ ಡ್ಯಾನ್ಸ್

Suddi Udaya

ಪಂಚಾಯತ್‌ ನೌಕರರ ಮೂಲ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರುನಲ್ಲಿ ಗ್ರಾಮ ಪಂಚಾಯತ್ ನೌಕರರ ರಾಜ್ಯ ಮಟ್ಟದ ಬೃಹತ್ ಪ್ರತಿಭಟನೆ

Suddi Udaya

ಕುವೆಟ್ಟು: ಮದ್ದಡ್ಕ ನಿವಾಸಿ ಹೆನ್ರಿ ಡಿಸೋಜ ನಿಧನ

Suddi Udaya

ನೀಟ್ ಪರೀಕ್ಷೆಯಲ್ಲಿ ಮೇಲುಗೈ ಸಾಧಿಸಿದ ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು – 99.977 ಪರ್ಸೆಂಟೈಲ್(672ಅಂಕ) ಪಡೆದ ಅಕ್ಷಯ್ ಡಿ.-ತಾಲೂಕಿಗೆ ಪ್ರಥಮ ಸ್ಥಾನ

Suddi Udaya

ಮಚ್ಚಿನ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಹಾಗೂ ಸದಸ್ಯರಿಗೆ ಗೌರವಾರ್ಪಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಭೇಟಿ: ದೇವರಿಗೆ ವಿಶೇಷ ಪೂಜೆ ಸಲ್ಲಿಕೆ

Suddi Udaya
error: Content is protected !!