July 14, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಗಾಂಜಾ ಸೇವನೆ: ಇಬ್ಬರ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕ‌ ಬಾವುಟ ಗುಡ್ಡ ಎಂಬಲ್ಲಿ ಗಾಂಜಾ‌ಸೇವನೆ ಮಾಡುತ್ತಿದ್ದ ಇಬ್ಬರ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆಪಾದಿತರಾದ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದಡ್ಕ ಬಾವುಟಗುಡ್ಡೆ ನಿವಾಸಿ ಮಹಮ್ಮದ್ ಕಾನಿಶ್ (21) ಮತ್ತು ಕುವೆಟ್ಟು ಗ್ರಾಮದ ಮದಡ್ಕ ಬಾವುಟಗುಡ್ಡೆ ನಿವಾಸಿ ಮಹಮ್ಮದ್ ಕೈಸ್ (23) ಎಂಬವರೇ ಗಾಂಜಾಸೇವನೆ ಮಾಡಿದ ಆರೋಪಿಗಳಾಗಿದ್ದಾರೆ.

ಬೆಳ್ತಂಗಡಿ ಸಬ್ ಇನ್ಸ್‌ಪೆಕ್ಟರ್ ಆನಂದ ಎಂ ಜು.11 ರಂದು ಇಲಾಖಾ ಜೀಪಿನಲ್ಲಿ ಠಾಣಾ ಸರಹದ್ದಿನ ಗುರುವಾಯನಕೆರೆ, ಮದ್ದಡ್ಕ ಸಬರಬೈಲು ಕಡೆಗಳಲ್ಲಿ ರೌಂಡ್ಸ್ ಕರ್ತವ್ಯದಲ್ಲಿ ಇರುವ ಸಮಯ ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಮದ್ದಡ್ಕ ಬಾವುಟಗುಡ್ಡೆ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಆಪಾದಿತರಾದ ಮಹಮ್ಮದ್ ಕಾನಿಶ್ (21) ಮತ್ತು ಮಹಮ್ಮದ್ ಕೈಸ್ (23) ಎಂಬವರು ಅಮಲಿನಲ್ಲಿ ತೇಲಾಡುತ್ತಿರುವುದನ್ನು ಕಂಡು ಅವರ ಬಳಿ ಹೋಗಿ ಅವರನ್ನು ವಿಚಾರಿಸಿದಾಗ ನಶೆಯ ಅಮಲಿನಲ್ಲಿ ಉತ್ತರಿಸುತ್ತಾ ಸಮರ್ಪಕವಾಗಿ ಉತ್ತರ ನೀಡದೇ ಇದ್ದವರನ್ನು ಮತ್ತೆ ಮತ್ತೆ ವಿಚಾರಿಸಲಾಗಿ ನಿಷೇದಿತ ಮಾದಕ ವಸ್ತುವಾದ ಗಾಂಜಾ ಕೊಕೇನ್, ಆಂಪಿಟಮಿನ್ ನ್ನು ಸೇವನೆ ಮಾಡಿರುವುದನ್ನು ಒಪ್ಪಿಕೊಂಡಿದ್ದು ಇವರ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ: 27(ಎ)ಮತ್ತು 27(ಬಿ) ಎನ್ಡಿಪಿಎಸ್ ಆಕ್ಟ್ ಯಂತೆ ಪ್ರಕರಣ ದಾಖಲಾಗಿದೆ.

Related posts

ತಾಲೂಕು ಭಜನಾ ಪರಿಷತ್ತಿನ ನೇತೃತ್ವದಲ್ಲಿ ತಾಲೂಕು ಕುಣಿತ ಭಜನಾ ತರಬೇತಿದಾರ ಪ್ರಥಮ ಸಭೆ

Suddi Udaya

ಜೆಸಿಐ ಉಜಿರೆ ಸಿಟಿ ವತಿಯಿಂದ ಪರಿಸರ ದಿನಾಚರಣೆ- ಗೋ ಗ್ರೀನ್ ಕಾರ್ಯಕ್ರಮ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಸೆ.22-ಅ.1: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ಇದರ ಮುಂದಾಳತ್ವದಲ್ಲಿ ಹೊಸ ಮನೆಯ ಆಶೀರ್ವಚನ ಮತ್ತು ಹಸ್ತಾಂತರ ಕಾರ್ಯಕ್ರಮ

Suddi Udaya

ಕುತ್ಲೂರು: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ವಾತ್ಸಲ್ಯ ಮನೆ ಹಸ್ತಾಂತರ

Suddi Udaya
error: Content is protected !!