26.2 C
ಪುತ್ತೂರು, ಬೆಳ್ತಂಗಡಿ
August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುಂಡೂರಿ ದ.ಕ.ಜಿ.ಪಂ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಶೈಕ್ಷಣಿಕ ಕಿಟ್ ವಿತರಣೆ

ವೇಣೂರು: ದಾನಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಕಾರದಿಂದ ದ.ಕ. ಜಿ.ಪಂ.ಕಿ.ಪ್ರಾ. ಶಾಲೆ ಗುಂಡೂರಿ ಇಲ್ಲಿಯ ವಿದ್ಯಾರ್ಥಿಗಳಿಗೆ ಉಚಿತ ಶೈಕ್ಷಣಿಕ ಕಿಟ್ ವಿತರಣಾ ಕಾರ್ಯಕ್ರಮ ಜು.11ರಂದು ಶಾಲೆಯಲ್ಲಿ ನಡೆಯಿತು.

ಶಾಲೆಯ ಹಳೆ ವಿದ್ಯಾರ್ಥಿ, ವೇಣೂರು ಲಯನ್ಸ್ ಕ್ಲಬ್ ನಿಕಟಪೂರ್ವಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ ಮಾತನಾಡಿ, ಮುಂದಿನ ದಿನಗಳಲ್ಲಿ ನಮ್ಮ ಶಾಲೆಗೆ 1ನೇ ತರಗತಿಗೆ ದಾಖಲಾಗುವ ಪ್ರತಿಯೊಬ್ಬ ವಿದ್ಯಾರ್ಥಿಗೆ ವೈಯಕ್ತಿಕವಾಗಿ ರೂ.5,000 ನೀಡುವ ಭರವಸೆಯನ್ನು ವ್ಯಕ್ತಪಡಿಸಿದರು.

ಯಂಗ್ ಬಾಯ್ಸ್ ಕ್ರಿಕೆಟ್ ಟೀಮ್ ಗುಂಡೂರಿ ಇವರಿಂದ ಟಿ ಶರ್ಟ್, ಐಡಿ-ಬೆಲ್ಟ್, ಕೆ.ಎಫ್.ಸಿ. ಕ್ರಿಕೆಟರ್ಸ್ ಕೊಂಚಾಡಿ ಇವರಿಂದ ತಟ್ಟೆ, ಲೋಟ, ಹಾಗೂ ಹರೀಶ್ ಕುಮಾರ್ ಪೊಕ್ಕಿ ಇವರಿಂದ ಟಿ ಶರ್ಟ್ ಮತ್ತು ಪ್ಯಾಂಟ್ ನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ವೇಣೂರು ಲಯನ್ಸ್ ಕ್ಲಬ್ ಅಧ್ಯಕ್ಷ ಲುಕಾಸ್ ಕೊರಯಾ, ಕಾರ್ಯದರ್ಶಿ ಜಯರಾಮ್ ಹೆಗ್ಡೆ, ಆರಂಬೋಡಿ ಗ್ರಾ.ಪಂ. ಉಪಾಧ್ಯಕ್ಷೆ ತೇಜಸ್ವಿನಿ, ಶ್ರೀ. ಕ್ಷೆ.ಧ. ಗ್ರಾ. ಯೋಜನೆ ಗುಂಡೂರಿ ಒಕ್ಕೂಟದ ಅಧ್ಯಕ್ಷ ಸದಾನಂದ ಪೂಜಾರಿ, ಪ್ರಕಾಶ್ ಪೂಜಾರಿ ಯಂಗ್ ಬಾಯ್ಸ್ ಕ್ರಿಕೇಟ್ ಟೀಮ್ ಗುಂಡೂರಿ, ಕೆ.ಎಫ್.ಸಿ. ಕ್ರಿಕೆಟರ್ಸ್ ಯತೀಶ್ ಕೊಂಚಾಡಿ, ಎಸ್.ಡಿ.ಎಂ.ಸಿ. ಅಧ್ಯಕ್ಷ ಪ್ರವೀಣ್ ಆಚಾರ್ಯ, ಶಿಕ್ಷಕವೃಂದ ಮತ್ತು ಶಾಲಾಭಿವೃದ್ಧಿ ಸಮಿತಿಯವರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಶೈಲಜಾ ಸ್ವಾಗತಿಸಿ ವಂದಿಸಿದರು. ಶಿಕ್ಷಕಿ ದಿಶಾಂತ ನಿರೂಪಿಸಿದರು.

Related posts

ಕಾರಿನಲ್ಲಿ ನಿಷೇಧಿತ MDMA ಮಾದಕವಸ್ತು ಸಾಗಾಟ: ವೇಣೂರು ಪೊಲೀಸರಿಂದ ಇಬ್ಬರು ಆರೋಪಿಗಳ ಬಂಧನ

Suddi Udaya

ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಶ್ರೀಕಾಂತ್ ಎಸ್ ಆಯ್ಕೆ

Suddi Udaya

ತಣ್ಣೀರುಪಂತ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಗುರುಪೂಜೆ, ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಇಂದಬೆಟ್ಟು ಗ್ರಾ.ಪಂ.ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಾಗಾರ ಹಾಗೂ ಸ್ವಚ್ಛತಾ ಹಿ ಸೇವಾ ಆಂದೋಲನ

Suddi Udaya

ನಾರಾವಿ ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯದ ಉದ್ಘಾಟನೆ

Suddi Udaya

ಪೈ ಅಕಾಡೆಮಿಯ ನೂತನ ಶಾಖೆ ಕಕ್ಕಿಂಜೆಯಲ್ಲಿ ಶುಭಾರಂಭ

Suddi Udaya
error: Content is protected !!