ಲಾಯಿಲ : ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಲಾಯಿಲ ಇದರ ಆಶ್ರಯದಲ್ಲಿ ನಡೆಯುವ 22 ವರುಷದ ಮೊಸರು ಕುಡಿಕೆ ಉತ್ಸವದ ನೂತನ ಪದಾಧಿಕಾರಿಗಳ ಆಯ್ಕೆಯು ಜು.12 ರಂದು ಶ್ರೀ ವಿಘ್ನೇಶ್ವರ ಕಲಾ ಮಂದಿರದಲ್ಲಿ ನಡೆಯಿತು.
ಕೋಶಾಧಿಕಾರಿ ಸುಜಿತ್ ಗುರಿಂಗಾನ ಇವರು ಕಳೆದ ಸಾಲಿನ ಲೆಕ್ಕಚಾರ ಮಂಡಿಸಿದರು. ಸಭೆಯ ಅಧ್ಯಕ್ಷತೆಯನ್ನು ಅಧ್ಯಕ್ಷ ಭೋಜರಾಜ್ ಪ್ರಗತಿನಗರ ವಹಿಸಿದರು. ಈ ಸಂದರ್ಭದಲ್ಲಿ ಗೌರವ ಅಧ್ಯಕ್ಷ ಪ್ರಕಾಶ್ ಕಾಶಿಬೆಟ್ಟು ಉಪಸ್ಥಿತರಿದ್ದರು.
22 ನೇ ವರುಷದ ಮೊಸರು ಕುಡಿಕೆ ಉತ್ಸವದ ನೂತನ ಅಧ್ಯಕ್ಷರಾಗಿ ಶ್ರದ್ದೇಶ್ ಗಾಣಿಗ ಲಾಯಿಲ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಸುರೇಶ್ ರಾಘವೇಂದ್ರ ನಗರ, ಕಾರ್ಯದರ್ಶಿಯಾಗಿ ಅಜಯ್ ಶಿವಾಜಿನಗರ, ಕೋಶಾಧಿಕಾರಿಯಾಗಿ ಅನಿಲ್ ಕಕ್ಕೇನ, ಜೊತೆ ಕೋಶಾಧಿಕಾರಿಯಾಗಿ ರಾಕೇಶ್ ಆದರ್ಶನಗರ, ಜೊತೆ ಕಾರ್ಯದರ್ಶಿಯಾಗಿ ಆಯುಷ್ ಲಾಯಿಲ, ಕ್ರೀಡಾ ಕಾರ್ಯದರ್ಶಿಯಾಗಿ ರವಿ ನಾಡೆಂಜ, ಜೊತೆ ಕ್ರೀಡಾ ಕಾರ್ಯದರ್ಶಿಯಾಗಿ ಆಯುಷ್ ಲಾಯಿಲ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಅರವಿಂದ್ ಕುಮಾರ್, ಅನ್ನಸಂತರ್ಪಣೆ ಸಮಿತಿ ಸಂಚಾಲಕರಾಗಿ ಹರಿಕೃಷ್ಣ ಪುತ್ರಬೈಲು, ವಿಜಿತ್ ಗುರಿಂಗಾನ, ಇವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಸಮಿತಿಯ ಕಾರ್ಯದರ್ಶಿ ಅರವಿಂದ್ ಕುಮಾರ್ ಸ್ವಾಗತಿಸಿದರು. ಸಮಿತಿಯ ಪ್ರಧಾನ ಕಾರ್ಯದರ್ಶಿ ಗಣೇಶ್ ಧನ್ಯವಾದವಿತ್ತರು.
















