
ಬೆಳ್ತಂಗಡಿ: ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಇದರ ಕರ್ನಾಟಕ ರಾಜ್ಯ ಘಟಕದ ಉಪಾಧ್ಯಕ್ಷರಾದ ಡಾ. ಎಂ ಅಣ್ಣಯ್ಯ ಕುಲಾಲ್ ಉಳ್ತೂರು ಅವರು ಜು.11 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಇತ್ತೀಚಿಗೆ ಬಿಡುಗಡೆಗೊಂಡ ಕರ್ನಾಟಕ ರಾಜ್ಯ ವೈದ್ಯ ಬರಹಗಾರರ ಬಳಗದ ಆಶ್ರಯದಲ್ಲಿ ಮೂಡಿ ಬಂದ ವೈದ್ಯಕೀಯ ಸಾಹಿತ್ಯ ಕ್ಷೇತ್ರದಲ್ಲಿ ಸಂಚಲನದ ಮೂಡಿಸಿದ ತನ್ನ ಸಂಪಾದಕತ್ವದ “ಸಿರಿಂಜ್ ಹಿಡಿವ ಕೈ ಪೆನ್ನು ಹಿಡಿದಾಗ” ಕೃತಿಯನ್ನ್ನು ಧರ್ಮಾಧಿಕಾರಿ ಪೂಜ್ಯ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಅರ್ಪಿಸಿದರು.
ಈ ಸಂದರ್ಭದಲ್ಲಿ ನಿವೃತ್ತ ಕಂದಾಯ ನಿರೀಕ್ಷಕ ಎಚ್ ಪದ್ಮಕುಮಾರ್, ಮೂಲ್ಯರ ಯಾನೆ ಕುಲಾಲರ ಸಂಘದ ನಿಕಟಪೂರ್ವ ಅಧ್ಯಕ್ಷ ಹರೀಶ ಕಾರಿಂಜ, ಕೇಶವ ಕುಲಾಲ್ ಚಾರ್ಮಾಡಿ, ಉಮೇಶ್ ಕುಲಾಲ್ ಗುರುವಾಯನಕೆರೆ, ಲೋಕೇಶ್ ಕುಲಾಲ್ ಗುರುವಾಯನಕೆರೆ, ತಿಲಕ್ರಾಜ್ ಗುರುವಾಯನಕೆರೆ ಹಾಗೂ ಡಾ| ಅಣ್ಣಯ್ಯ ಕುಲಾಲ್ ಕುಟುಂಬದವರು ಉಪಸ್ಥಿತರಿದ್ದರು.
















