July 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಪಪೂ ಕಾಲೇಜಿನಲ್ಲಿ 15 ಕ್ಕೂ ಹೆಚ್ಚಿನ ವಿಭಾಗಗಳ ಭಿತ್ತಿ ಪತ್ರಿಕೆ ಅನಾವರಣ

ಉಜಿರೆ : ಭಿತ್ತಿ ಪತ್ರಿಕೆ ಜ್ಞಾನ ಮತ್ತು ಕೌಶಲ್ಯಗಳ ಅನಾವರಣಕ್ಕಿರುವ ವೇದಿಕೆ.ಇದು ವಿದ್ಯಾರ್ಥಿಗಳ ಪ್ರತಿಭಾ ಕೈಗನ್ನಡಿ. ಸ್ಪರ್ಧಾತ್ಮಕ ಯುಗದ ಸಾಗರದಲ್ಲಿ ಈಜಿ ನಾವು ಯಶಸ್ಸನ್ನು ತಲುಪಲು ಇಂದಿನಿಂದಲೇ ಪ್ರಯತ್ನ ಶೀಲರಾಗಬೇಕು. ಇಂತಹ ಸಣ್ಣ ಸಣ್ಣ ಶೈಕ್ಷಣಿಕ ಕಾರ್ಯಾ ಚಟುವಟಿಕೆಗಳಲ್ಲಿ ಶ್ರದ್ಧೆ ಮತ್ತು ಕೂತುಹಲದಿಂದ ಸಕ್ರೀಯವಾಗಿ ತೊಡಗಿಸಿಕೊಂಡಾಗ ನಾವು ಬಹು ಎತ್ತರಕ್ಕೆ ಬೆಳೆಯಲು ಸಾಧ್ಯವಾಗುತ್ತದೆ. ಉನ್ನತ ಶ್ರೇಣಿಯ ಕನಸು ಕಾಣುವ ಜೊತೆಗೆ ಅದನ್ನು ಗಳಿಸಿಕೊಳ್ಳುವ ಅರ್ಹತೆಯನ್ನು ನಾವು ಬೆಳಿಸಿಕೊಳ್ಳಬೇಕು ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ನಿವೃತ್ತ ಮುಖ್ಯಸ್ಥ ಡಾ. ಭಾಸ್ಕರ್ ಹೆಗ್ಡೆ ಅಭಿಪ್ರಾಯಪಟ್ಟರು.

ಇವರು ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನ ರತ್ನತ್ರಯ ಸಭಾಭವನದಲ್ಲಿ ಆಯೋಜಿಸಿದ್ದ ವಿವಿಧ ವಿಭಾಗಗಳ ಭಿತ್ತಿ ಪತ್ರಿಕೆ ಅನಾವರಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯ ಮತ್ತು ದೌರ್ಬಲ್ಯಗಳನ್ನು ಪ್ರಾಥಮಿಕವಾಗಿ ಮನಗಾಣಬೇಕು. ಪ್ರತಿಯೊಬ್ಬನ ಒಳಗು ಒಬ್ಬ ಅತ್ಯುತ್ತಮ ಪ್ರತಿಭಾವಂತ ಕಲಾವಿದ ಅವಿತಿರುತ್ತಾನೆ. ಅವನನ್ನು ಸಾಮಜದ ಮುನ್ನೆಲೆಗೆ ತರುವ ನಿರಂತರ ಪ್ರಯತ್ನ ನಮ್ಮಿಂದಾಗಬೇಕು. ವಿದ್ಯಾರ್ಥಿಗಳ ಕಲಿಕಾ ವಿಷಯಗಳಲ್ಲಿ ಕನಿಷ್ಠ ಗರಿಷ್ಠ ಎಂಬ ಕೀಳರಿಮೆಯ ಮನೋಭಾವ ಮೂಡಬಾರದು. ಪ್ರತಿಯೊಂದು ವಿಷಯದ ಅಭ್ಯಾಸದಲ್ಲೂ ವಿಫುಲವಾದ ಅವಕಾಶಗಳಿವೆ. ಅವಕಾಶಗಳ ಬಳಕೆದಾರರು ನಾವಾದಾಗ ಮಾತ್ರ ಯಶಸ್ಸಿನ ಬುತ್ತಿ ನಮ್ಮದಾಗುತ್ತದೆ. ಸ್ವಂತಿಕೆಯ ಸೃಜನ ಶೀಲತೆ ಮತ್ತು ಸಮಗ್ರ ತೊಡಗಿಕೊಳ್ಳುವಿಕೆ ನಮ್ಮ ಸಾಧನೆಯ ಪಥವನ್ನು ಬೆಳಗಿಸುತ್ತದೆ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರಮೋದ್ ಕುಮಾರ್ ಬಿ ಮಾತನಾಡಿ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗಾಗಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಹೆಚ್ಚಿನ ಪ್ರಾಶಸ್ತ್ಯವನ್ನು ನೀಡಲಾಗುತ್ತಿದೆ. ಪ್ರತೀ ಶೈಕ್ಷಣಿಕ ವರ್ಷದ ಆರಂಭದಲ್ಲಿ ವಿದ್ಯಾರ್ಥಿಗಳ ಸೃಜನಶೀಲತೆಗೆ ಪೂರಕವಾಗುವ ನಾನಾ ಕಾರ್ಯಚಟುವಟಿಕೆಗಳನ್ನು ಕಾಲೇಜು ಮಾಡಿಕೊಂಡು ಬರುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಸುಮಾರು 15ಕ್ಕೂ ಹೆಚ್ಚಿನ ವಿವಿಧ ವಿಭಾಗದಿಂದ ವಿದ್ಯಾರ್ಥಿಗಳು ಕ್ರಿಯಾತ್ಮಕವಾಗಿ ರಚಿಸಿದ ಬಿತ್ತಿ ಪತ್ರಿಕೆಗಳನ್ನು ಅನಾವರಣ ಮಾಡಲಾಯಿತು. ವೇದಿಕೆಯಲ್ಲಿ ಉಪ ಪ್ರಾಂಶುಪಾಲ ಡಾ. ರಾಜೇಶ್ ಬಿ ಹಾಗೂ ಕಾರ್ಯಕಾರಿ ಸಮಿತಿ ಮುಖ್ಯಸ್ಥೆ ವೈದೇಹಿ ಎಸ್‌. ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಸುಭಾಷ್ ರಾವ್ ಬೋಳೂರು, ಮನೋಹರ್‌ ಶೆಟ್ಟಿ, ಅಶ್ವಿನಿ ಎಚ್ ಆರ್, ಅಂಬಿಕಾ ಕೆ ಹಾಗೂ ಪ್ರಾಧ್ಯಾಪಕ ವೃಂದ ಸೇರಿದಂತೆ ವಿವಿಧ ವಿಭಾಗಗಳ ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಚಾರಿತ್ರ ಜೈನ್ ನಿರೂಪಿಸಿ, ವಿದ್ಯಾರ್ಥಿನಿ ಭಾಗ್ಯಲಕ್ಷ್ಮಿ ಸ್ವಾಗತಿಸಿದರು. ಕುಮಾರಿ ಸ್ಮೃತಿ ವಂದಿಸಿದರು.

Related posts

ಉಜಿರೆ ರತ್ನಮಾನಸ ಜೀವನ ಶಿಕ್ಷಣ ವಿದ್ಯಾರ್ಥಿ ನಿಲಯದಲ್ಲಿ ರೆಸಿಡೆನ್ಸಿಯಲ್ ಕಾಲೇಜಿನ ಸಹಭಾಗಿತ್ವದೊಂದಿಗೆ ಗಾಂಧೀಜಿ ಜಯಂತಿ ಆಚರಣೆ

Suddi Udaya

ಶಿಶಿಲ: ಕಾರೆಗುಡ್ಡೆ ದಿ. ಪ್ರವೀಣ್ ರವರ ಮನೆಯವರಿಗೆ ದೀಪಾವಳಿ ಪ್ರಯುಕ್ತ ಬಟ್ಟೆ ಹಾಗೂ ಧನ ಸಹಾಯ

Suddi Udaya

ಉಜಿರೆ ಉದ್ಯಮಿ, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರ ಪತ್ತೆಯಾಗಿ ಪೊಲೀಸರ ಮನವಿ

Suddi Udaya

ಮಡಂತ್ಯಾರು ವಲಯದ ಬಂಟರ ಸಂಘದ ಕ್ರೀಡೋತ್ಸವ 2025

Suddi Udaya

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದಿಂದ ಶ್ರೀ ಮಹಾಭಾರತ ಸರಣಿ ತಾಳಮದ್ದಳೆ, ಸನ್ಮಾನ

Suddi Udaya
error: Content is protected !!