25.2 C
ಪುತ್ತೂರು, ಬೆಳ್ತಂಗಡಿ
August 30, 2026
Uncategorized

ಉಡುಪಿಯ ಪೇಜಾವರ ಮಠಾಧೀಶರು ಪವಿತ್ರ ಕ್ಷೇತ್ರವಾದ ಶ್ರೀ ಮಧ್ವ ಮಂಟಪಕ್ಕೆ ಭೇಟಿ

ಕಲಿಯುಗದಲ್ಲಿ ಪರಿಶುದ್ದವಾದ ಮನಸ್ಸಿನಿಂದ ಭಗವಂತನ ಸ್ಮರಣೆ ಅತ್ಯಗತ್ಯ: ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

ಪುಂಜಾಲಕಟ್ಟೆ : ಉಡುಪಿಯ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಜು.13 ಸೋಮವಾರ ಕಾವಳಪಡೂರು ಗ್ರಾಮದ ಮಧ್ವದಲ್ಲಿರುವ ಶ್ರೀ ಮಧ್ವಾಚಾರ್ಯರು ವಿಶ್ರಾಂತಿ ಪಡೆದ ಪವಿತ್ರ ಕ್ಷೇತ್ರವಾದ ಶ್ರೀ ಮಧ್ವ ಮಂಟಪಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಓಂಕಾರ ಫ್ರೆಂಡ್ಸ್ ಹಾಗೂ ಓಂಕಾರ ಮಹಿಳಾ ಘಟಕ ಮಧ್ವ ಹಾಗೂ ಯಕ್ಷಕೂಟ ಮಧ್ವ ವತಿಯಿಂದ ಭಕ್ತಿಪೂರ್ವಕವಾಗಿ ಗೌರವ ಸಲ್ಲಿಸಲಾಯಿತು.

ಈ ಸಂದರ್ಭ ಆಶೀರ್ವಚನ ನೀಡಿದ ಶ್ರೀಗಳು ದೇವರು ಸಮಾಜದಲ್ಲಿರುವ ಎಲ್ಲರ ಹೃದಯದಲ್ಲು ನೆಲೆಸಿದ್ದಾನೆ‌. ಕಲಿಯುಗದಲ್ಲಿ ಪರಿಶುದ್ದವಾದ ಮನಸ್ಸಿನಿಂದ ಭಗವಂತನ ಸ್ಮರಣೆ ಅತ್ಯಗತ್ಯವಾಗಿದೆ ಎಂದರು.
ಇದೇ ವೇಳೆ ಶ್ರೀ ಮಧ್ವ ಮಂಟಪದಲ್ಲಿ ಬಾಲಗೋಕುಲ, ಕುಣಿತ ಭಜನೆ ಸೇರಿದಂತೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಿಯಮಿತವಾಗಿ ನಡೆಸಲು ಸ್ಥಳಾವಕಾಶ ಕಲ್ಪಿಸಬೇಕೆಂದು ಶ್ರೀಗಳಿಗೆ ಮನವಿ ಸಲ್ಲಿಸಲಾಯಿತು.
ಶ್ರೀ ಮಧ್ವ ಮಂಟಪದ ವ್ಯವಸ್ಥಾಪಕರಾದ ರಾಘವೇಂದ್ರ ಭಟ್ ಮಠ ಮದ್ದಡ್ಕ, ಯಕ್ಷಕೂಟ ಮಧ್ವ ಇದರ ಸಂಚಾಲಕ ಭಾಸ್ಕರ ಶೆಟ್ಟಿ ಮಧ್ವ, ಓಂಕಾರ ಫ್ರೆಂಡ್ಸ್ ಹಾಗೂ ಓಂಕಾರ ಮಹಿಳಾ ಘಟಕದ ಪದಾಧಿಕಾರಿಗಳು, ಸದಸ್ಯರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

Related posts

ಸ್ಪೆಕ್ಟ್ರಮ್ ಧರ್ಮಸ್ಥಳ ನೇತೃತ್ವದಲ್ಲಿ ದ.ಕ. ಜಿಲ್ಲೆ ಹಾಗೂ ಬೆಳ್ತಂಗಡಿ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಸಹಯೋಗದಲ್ಲಿ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಇಂದಬೆಟ್ಟು-ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ಯುವ ಸಂಘಟನೆಯಿಂದ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಶ್ರಮದಾನ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ಮಾಜಿ ಸದಸ್ಯ ರೊನಾಲ್ಡ್ ಪಿಂಟೋ ನಿಧನ

Suddi Udaya

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ
ಎಕ್ಸ್‌ಪೀರಿಯ-2ಕೆ22 ರಾಜ್ಯ ಮಟ್ಟದ ವಿಜ್ಞಾನ ಮೇಳ ಉದ್ಘಾಟನೆ

Suddi Udaya

ನಾಲ್ಕೂರು ಅಂಗನವಾಡಿಯಲ್ಲಿ ಹುಟ್ಟುಹಬ್ಬ ಆಚರಿಸಿದ ಆಯಾನ್ಶ್ ಸುಧಾಮ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!