July 14, 2026
Uncategorized

ಉಡುಪಿಯ ಪೇಜಾವರ ಮಠಾಧೀಶರು ಪವಿತ್ರ ಕ್ಷೇತ್ರವಾದ ಶ್ರೀ ಮಧ್ವ ಮಂಟಪಕ್ಕೆ ಭೇಟಿ

ಕಲಿಯುಗದಲ್ಲಿ ಪರಿಶುದ್ದವಾದ ಮನಸ್ಸಿನಿಂದ ಭಗವಂತನ ಸ್ಮರಣೆ ಅತ್ಯಗತ್ಯ: ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

ಪುಂಜಾಲಕಟ್ಟೆ : ಉಡುಪಿಯ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಜು.13 ಸೋಮವಾರ ಕಾವಳಪಡೂರು ಗ್ರಾಮದ ಮಧ್ವದಲ್ಲಿರುವ ಶ್ರೀ ಮಧ್ವಾಚಾರ್ಯರು ವಿಶ್ರಾಂತಿ ಪಡೆದ ಪವಿತ್ರ ಕ್ಷೇತ್ರವಾದ ಶ್ರೀ ಮಧ್ವ ಮಂಟಪಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಓಂಕಾರ ಫ್ರೆಂಡ್ಸ್ ಹಾಗೂ ಓಂಕಾರ ಮಹಿಳಾ ಘಟಕ ಮಧ್ವ ಹಾಗೂ ಯಕ್ಷಕೂಟ ಮಧ್ವ ವತಿಯಿಂದ ಭಕ್ತಿಪೂರ್ವಕವಾಗಿ ಗೌರವ ಸಲ್ಲಿಸಲಾಯಿತು.

ಈ ಸಂದರ್ಭ ಆಶೀರ್ವಚನ ನೀಡಿದ ಶ್ರೀಗಳು ದೇವರು ಸಮಾಜದಲ್ಲಿರುವ ಎಲ್ಲರ ಹೃದಯದಲ್ಲು ನೆಲೆಸಿದ್ದಾನೆ‌. ಕಲಿಯುಗದಲ್ಲಿ ಪರಿಶುದ್ದವಾದ ಮನಸ್ಸಿನಿಂದ ಭಗವಂತನ ಸ್ಮರಣೆ ಅತ್ಯಗತ್ಯವಾಗಿದೆ ಎಂದರು.
ಇದೇ ವೇಳೆ ಶ್ರೀ ಮಧ್ವ ಮಂಟಪದಲ್ಲಿ ಬಾಲಗೋಕುಲ, ಕುಣಿತ ಭಜನೆ ಸೇರಿದಂತೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಿಯಮಿತವಾಗಿ ನಡೆಸಲು ಸ್ಥಳಾವಕಾಶ ಕಲ್ಪಿಸಬೇಕೆಂದು ಶ್ರೀಗಳಿಗೆ ಮನವಿ ಸಲ್ಲಿಸಲಾಯಿತು.
ಶ್ರೀ ಮಧ್ವ ಮಂಟಪದ ವ್ಯವಸ್ಥಾಪಕರಾದ ರಾಘವೇಂದ್ರ ಭಟ್ ಮಠ ಮದ್ದಡ್ಕ, ಯಕ್ಷಕೂಟ ಮಧ್ವ ಇದರ ಸಂಚಾಲಕ ಭಾಸ್ಕರ ಶೆಟ್ಟಿ ಮಧ್ವ, ಓಂಕಾರ ಫ್ರೆಂಡ್ಸ್ ಹಾಗೂ ಓಂಕಾರ ಮಹಿಳಾ ಘಟಕದ ಪದಾಧಿಕಾರಿಗಳು, ಸದಸ್ಯರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

Related posts

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಗದ್ದೆಯಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಳದಂಗಡಿ ಶಾಖೆಯಲ್ಲಿ ಉಚಿತ ನೇತ್ರ ತಪಾಸಣೆ, ದಂತ ಚಿಕಿತ್ಸೆ, ಕ್ಯಾನ್ಸರ್ ತಪಾಸಣೆ ಮತ್ತು ಸಾಮಾನ್ಯ ವೈದ್ಯಕೀಯ ತಪಾಸಣಾ ಹಾಗೂ ಆಧಾರ್ ಕಾರ್ಡ್ ನೋಂದಣಿ , ತಿದ್ದುಪಡಿ ಶಿಬಿರ

Suddi Udaya

ನಡ ಗ್ರಾ.ಪಂ. ನ ಅಧ್ಯಕ್ಷರಾಗಿ ಮಂಜುಳಾ, ಉಪಾಧ್ಯಕ್ಷರಾಗಿ ದಿವಾಕರ ಪೂಜಾರಿ ಆಯ್ಕೆ

Suddi Udaya

ಉಜಿರೆ: ಉಮೇಶ್ ಮುಂಡತ್ತೋಡಿ ರವರ ಮನೆಗೆ ಬಿಜೆಪಿ ಎಸ್.ಸಿ ಮೋರ್ಚಾದ ಪದಾಧಿಕಾರಿಗಳ ಭೇಟಿ

Suddi Udaya

ಜು.9: ಸೋಮಂತಡ್ಕ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ 22 ನೇ ಶಾಖೆ ಉದ್ಘಾಟನೆ

Suddi Udaya
error: Content is protected !!