July 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್‌ಡಿಎಂ ಬಿವೋಕ್‌ ವಿಭಾಗದಲ್ಲಿ ಸಿನಿಮಾ ಹಾಗೂ ಬ್ರ್ಯಾಂಡಿಂಗ್‌ ಕುರಿತು ವಿಶೇಷ ಸಂವಾದ ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಬಿ.ವೋಕ್ ಡಿಜಿಟಲ್ ಮೀಡಿಯಾ ಮತ್ತು ಫಿಲ್ಮ್ ಮೇಕಿಂಗ್ ವಿಭಾಗದ ವತಿಯಿಂದ ಚಿತ್ರರಂಗ, ಸಿನಿಮಾ ನಿರ್ಮಾಣ, ಕಂಟೆಂಟ್ ಸೃಷ್ಟಿ ಹಾಗೂ ಡಿಜಿಟಲ್ ಬ್ರ್ಯಾಂಡಿಂಗ್ ಕುರಿತು ವಿಶೇಷ ಸಂವಾದ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಹೈದರಾಬಾದಿನ ‘ಲೈಟ್ಸ್ ಕ್ಯಾಮೆರಾ ವುಮನ್’ ಸಂಸ್ಥೆಯ ಸಂಸ್ಥಾಪಕಿ ಹಾಗೂ ಚಲನಚಿತ್ರ ನಿರ್ದೇಶಕಿ ನವ್ಯ ನಾಗೇಶ್, ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಹಿಂಜರಿಯಬಾರದು. ಉತ್ತಮ ಪೋರ್ಟ್‌ಫೋಲಿಯೊ ನಿರ್ಮಾಣ, ನಿರಂತರ ಕಲಿಕೆ ಹಾಗೂ ಸ್ಥಳೀಯ ಸಂಸ್ಕೃತಿಯನ್ನು ಆಧರಿಸಿದ ಕಥೆಗಳೇ ಜಾಗತಿಕ ಮಟ್ಟದಲ್ಲೂ ಗುರುತಿಸಿಕೊಳ್ಳಲು ನೆರವಾಗುತ್ತವೆ ಎಂದು ಹೇಳಿದರು. ಪ್ರತಿಯೊಂದು ದೃಶ್ಯವೂ ಸೂಕ್ತ ಯೋಜನೆಯೊಂದಿಗೆ ರೂಪುಗೊಳ್ಳಬೇಕಿದ್ದು, ಸುತ್ತಮುತ್ತಲಿನ ಬದುಕು ಮತ್ತು ಸಮಕಾಲೀನ ಘಟನೆಗಳೇ ಉತ್ತಮ ಕಥೆಗಳ ಮೂಲವಾಗಬಹುದು ಎಂದು ತಿಳಿಸಿದರು.

ಐಐಟಿ ಹಳೆ ವಿದ್ಯಾರ್ಥಿನಿ ಹಾಗೂ ‘ಬ್ರ್ಯಾಂಡ್ ಕ್ಯಾಮಿಯೋ’ ಸಂಸ್ಥಾಪಕಿ ಕಾವ್ಯ ನಾಗೇಶ್ ಮಾತನಾಡಿ, “ಇಂದು ಸಿನಿಮಾದಲ್ಲಿ ಒಳ್ಳೆಯ ಕಥೆ ಹೇಳಿದರೆ ಮಾತ್ರ ಸಾಲದು; ಆ ಕಥೆಯನ್ನು ಪ್ರೇಕ್ಷಕರಿಗೆ ಹೇಗೆ ತಲುಪಿಸುತ್ತೇವೆ ಎಂಬುದೂ ಅಷ್ಟೇ ಮುಖ್ಯ” ಎಂದು ಅಭಿಪ್ರಾಯಪಟ್ಟರು. ಡಿಜಿಟಲ್ ಮಾರ್ಕೆಟಿಂಗ್, ಬ್ರ್ಯಾಂಡಿಂಗ್ ಹಾಗೂ ಸಾಮಾಜಿಕ ಜಾಲತಾಣಗಳ ಪರಿಣಾಮಕಾರಿ ಬಳಕೆಯ ಮೂಲಕವೇ ಕಂಟೆಂಟ್ ಹೆಚ್ಚು ಜನರನ್ನು ತಲುಪಲು ಸಾಧ್ಯ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಂವಾದದಲ್ಲಿ ಸಕ್ರಿಯವಾಗಿ ಭಾಗವಹಿಸಿ ಚಿತ್ರರಂಗದ ಸೃಜನಾತ್ಮಕ ಹಾಗೂ ಮಾರುಕಟ್ಟೆ ಸಂಬಂಧಿತ ಆಯಾಮಗಳ ಕುರಿತು ಮೌಲ್ಯಯುತ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ವಿಭಾಗದ ಮುಖ್ಯಸ್ಥ ಮಾಧವ ಹೊಳ್ಳ, ಸಹಾಯಕ ಪ್ರಾಧ್ಯಾಪಕಿ ತೇಜಸ್ವಿನಿ ಇನ್ನಿತರರು ಉಪಸ್ಥಿತರಿದ್ದರು.

Related posts

ಕೊಯ್ಯೂರು : ಕಲ್ಪಾಮೃತ -ಸ್ವಾನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಶುಭಾರಂಭ

Suddi Udaya

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ವಿದ್ಯಾರ್ಥಿ ಪರಿಷತ್ತು ಮತ್ತು ಶೈಕ್ಷಣಿಕ ಸಂಘಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ರಸ್ತೆ ಸುರಕ್ಷತೆ ಹಾಗೂ ಕಾನೂನು ಅರಿವು ಕಾರ್ಯಕ್ರಮ

Suddi Udaya

ವೇಣೂರು ಪಚ್ಚೇರಿ ಬಳಿ ಚಿರತೆ ಹಾವಳಿ: ನಾಯಿಯನ್ನು ಹೊತ್ತೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Suddi Udaya

ಸುಲ್ಕೇರಿ: ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

Suddi Udaya

ಜೂ. 14: ಗೇರುಕಟ್ಟೆ ಎಂ. ಜನಾರ್ದನ ಪೂಜಾರಿ ಮತ್ತು ಕಮಲಾವತಿ ದಂಪತಿ ವೈವಾಹಿಕ ಜೀವನದ 70ರ ಸಂಭ್ರಮ

Suddi Udaya
error: Content is protected !!