July 14, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಲ್ಲಿ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಸಮಾಲೋಚನಾ ಸಭೆ

ಮಿತ್ತಬಾಗಿಲು: ಕೊಲ್ಲಿ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಸಮಾಲೋಚನಾ ಸಭೆಯು ಜು.13ರಂದು ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಿತಿಯ ಅಧ್ಯಕ್ಷೆ ವನಿತಾ ವಹಿಸಿದರು. ಈ ವೇಳೆ ಗಣೇಶೋತ್ಸವ ಸಮಿತಿ ಅಧ್ಯಕ್ಷ ಕೇಶವ ಫಡಕೆ ಸಲಹೆ ಸೂಚನೆಯನ್ನು ನೀಡಿ ಆ.28ರಂದು 25ನೇ ವರ್ಷದ ಪ್ರಯುಕ್ತ ಸಾರ್ವಜನಿಕ ವರಮಹಾಲಕ್ಷ್ಮೀ ಪೂಜೆ ಹಾಗೂ ದುರ್ಗಾಪೂಜೆಯನ್ನು ಸಂಭ್ರಮದಿಂದ ಆಚರಿಸುವಂತೆ ಸಭೆಯಲ್ಲಿ ನಿರ್ಣಯಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯ ಕೃಷ್ಣಪ್ಪ ಪೂಜಾರಿ, ಮಿತ್ತಬಾಗಿಲು ಗ್ರಾ. ಪಂ. ಉಪಾಧ್ಯಕ್ಷೆ ವಿಜಯಲಕ್ಷ್ಮೀ, ಸಮಿತಿಯ ಕಾರ್ಯದರ್ಶಿ ಮೀನಾಕ್ಷಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಜ್ಯೋತಿ ಸ್ವಾಗತಿಸಿ, ಜಾನಕಿ ಧನ್ಯವಾದವಿತ್ತರು.

Related posts

ಕೊಡಿಂಬಾಡಿ ಶಿವ ಕಾಂಪ್ಲೆಕ್ಸ್‌ನಲ್ಲಿ ಲಲಿತ ಮೆಡಿಕಲ್ಸ್ ಸ್ಟೋರ್‍ಸ್ ಶುಭಾರಂಭ

Suddi Udaya

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ನಡ ಸರಕಾರಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಸಂಸ್ಥೆಯ ವತಿಯಿಂದ ಕೊಯ್ಯೂರು ಸ.ಹಿ.ಪ್ರಾ. ಶಾಲೆಗೆ ಗಡಿಯಾರ ಕೊಡುಗೆ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದಿಂದ ಕ್ಷೇಮ ನಿಧಿ ಯೋಜನೆಯ 10 ನೇ ಸಹಾಯಧನ ಹಸ್ತಾಂತರ

Suddi Udaya

ಏರುತ್ತಿರುವ ತಾಪಮಾನ: ಅಂಗನವಾಡಿ ಕೇಂದ್ರಗಳ ಸಮಯ ಪರಿಷ್ಕರಣೆ- ಬೆಳಗ್ಗೆ 8ರಿಂದ ಮಧ್ಯಾಹ್ನ 12 ರವರೆಗೆ ಕಾರ್ಯ ನಿರ್ವಹಣೆಗೆ ಆದೇಶ

Suddi Udaya

ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಚೈತನ್ಯ ರೈ ಬೆಳ್ತಂಗಡಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya
error: Content is protected !!