July 14, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ದಿಡುಪೆ ಜಲಪಾತ ವೀಕ್ಷಣೆಗೆ ಬಂದಿದ್ದವರನ್ನು ತಡೆದು ಜೀವಬೆದರಿಕೆ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ದಿಡುಪೆಯ ಜಲಪಾತ ನೋಡಲು ಮಂಗಳೂರಿನಿಂದ ಬಂದಿದ್ದ ಯುವಕ ಹಾಗೂ ಯುವತಿಗೆ ರಸ್ತೆಯಲ್ಲಿ ತಡೆದು ಜೀವಬೆದರಿಕೆ ಹಾಕಿರುವ ಬಗ್ಗೆ ಯುವತಿ ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ದಿಡುಪೆ ನಿವಾಸಿಗಳಾದ ರಂಜಿತ್, ಸುದರ್ಶನ್, ಸ್ವಸ್ತಿಕ್, ಪ್ರದೀಪ್, ದೀಕ್ಷಿತ್‌ಹಾಗೂ ಇತರರ ವಿರುದ್ದ ಪ್ರಕರಣ‌ ದಾಖಲಿಸಲಾಗಿದೆ.
ಮಂಗಳೂರಿನಿಂದ ಯುವತಿ ತನ್ನ ಸ್ನೇಹಿತ ಫರ್ಹಾನ್ ನೊಂದಿಗೆ ಜಲಪಾತ ನೋಡಲು ಜು.12 ರಂದು ದಿಡುಪೆಗೆ ಬರುತ್ತಾಳೆ ಅರಣ್ಯ ಇಲಾಖೆಯ ಚೆಕ್ ಪೋಸ್ಟ್ ನಲ್ಲಿ ಅನುಮತಿ ಪಡೆದು ಜಲಪಾತಕ್ಕೆ ತೆರಳಿ ಹಿಂತಿರುಗಿ ಬಂದ ವೇಳೆ‌ ಯುವತಿಯನ್ನು ತಡೆದ ಸ್ಥಳೀಯ ಯುವಕರ ತಂಡವೊಂದು ನೀನು ಮುಸ್ಲಿಮನೊಟ್ಟಿಗೆ ಯಾಕೆ ಬಂದಿದ್ದೀಯ ನಿನಗೆ ಹಿಂದೂಗಳು ಆಗುವುದಿಲ್ಲವಾ ಎಂದು ಅವಾಚ್ಯವಾಗಿ ನಿಂದಿಸಿ ನಿನ್ನೊಂದಿಗೆ ಬಂದಿದ್ದ ಯುವಕನನ್ನು ಇಲ್ಲಿಗೆ ಕರೆಸು ನಿಮ್ಮನ್ನು ಸುಮ್ಮನೆ ಬಿಡುವುದಿಲ್ಲ ಎಂದು ಜೀವಬೆದರಿಕೆ ಹಾಕಿದ್ದಾರೆ ಎಂದು ದೂರು ನೀಡಲಾಗಿದೆ. ಯುವತಿಯ ದೂರಿನಂತೆ ಪೊಲೀಸರು ಭಾರತೀಯ ದಂಡ ಸಂಹಿತೆ 126(2), 352, 351(2) ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ‌ ದಾಖಲಿಸಿಕೊಂಡಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಶಿಶಿಲ ದೇವಾಲಯದ ಸಮಿತಿ ರಚನೆ ಕುರಿತು ಬಿ.ಜಯರಾಮ ನೆಲ್ಲಿತ್ತಾಯ ರಿಂದ ಪ್ರಧಾನಮಂತ್ರಿ ಸಾರ್ವಜನಿಕ ಹಿತಾಸಕ್ತಿ ವಿಭಾಗಕ್ಕೆ ದೂರು ಸಲ್ಲಿಕೆ

Suddi Udaya

ಬೆಳ್ತಂಗಡಿ ತಾಲೂಕಿನ ಪರಿಶಿಷ್ಟ ಜಾತಿ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆ: ಹರೀಶ್ ಪೂಂಜ

Suddi Udaya

ವೇಣೂರು: ರವಿಚಂದ್ರ ಭಂಡಾರಿ ನಿಧನ

Suddi Udaya

ಉಜಿರೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೆ.50 ರಷ್ಟು ಡಿಸ್ಕೌಂಟ್

Suddi Udaya

ಲಾಯಿಲದ ಹೊಸಕುಮೇರು ನಿವಾಸಿ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಶಾಲೆಯಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!