ಬೆಳ್ತಂಗಡಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರ, ನೇತ್ರಾವತಿ ಮಹಿಳಾ ಸಂಜೀವಿನಿ ಒಕ್ಕೂಟ ಮುಂಡಾಜೆ ಆಶ್ರಯದಲ್ಲಿ ಬೋರ್ಡೋ ದ್ರಾವಣ ಮಾಡುವ ವೈಜ್ಞಾನಿಕ ವಿಧಾನ, ಅಡಕೆಗೆ ಬರುವ ರೋಗಗಳು ಹಾಗೂ ಅವುಗಳ ಪರಿಹಾರ ಮತ್ತು ಕೃಷಿ ಇಲಾಖೆಯ ಸವಲತ್ತುಗಳ ಕುರಿತು ಜು.15 ರಂದು ಮುಂಡಾಜೆ ಗ್ರಾ.ಪಂ. ಸಭಾಭವನದಲ್ಲಿ ಮಾಹಿತಿ ಕಾರ್ಯಾಗಾರ ನಡೆಯಲಿದೆ.
ಬೆಳಗ್ಗೆ 10 ಗಂಟೆಯಿಂದ ನಡೆಯುವ ಈ ಕಾರ್ಯಕ್ರಮದಲ್ಲಿ ಕೃಷಿ ಅಧಿಕಾರಿ ಗಣೇಶ್ ಹಾಗೂ ಪ್ರಗತಿಪರ ಕೃಷಿಕ ಪ್ರಭಾಕರ ಮಯ್ಯ ಮಾಹಿತಿ ನೀಡುವರು. ಆಧಾರ್ ಕಾರ್ಡ್ನೊಂದಿಗೆ ಕೃಷಿಕರು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಬೆಳ್ತಂಗಡಿ ಕೃಷಿ ತರಬೇತಿ ಕೇಂದ್ರದ ಪ್ರಕಟಣೆ ತಿಳಿಸಿದೆ.
















