26.2 C
ಪುತ್ತೂರು, ಬೆಳ್ತಂಗಡಿ
August 29, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಣೆಜಾಲು ಶ್ರೀ ಸ್ಟಾರ್‌ ಯುವಕ ಮಂಡಲದ ಅಧ್ಯಕ್ಷರಾಗಿ ಗಣೇಶ್ ಆಚಾರ್ಯ, ಕಾರ್ಯದರ್ಶಿಯಾಗಿ ರಾಜೇಶ್

ಬೆಳ್ತಂಗಡಿ: ಪಣೆಜಾಲು ಶ್ರೀ ಸ್ಟಾರ್‌ ಯುವಕ ಮಂಡಲ ಇದರ 2026 -27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ಜು.12 ರಂದು ಸಂಘದ ಕಟ್ಟಡದಲ್ಲಿ ಸರ್ವ ಸದಸ್ಯರ ಉಪಸ್ಥಿತಿಯಲ್ಲಿ ನಡೆಯಿತು.

ನೂತನ ಅಧ್ಯಕ್ಷರಾಗಿ ಗಣೇಶ್ ಆಚಾರ್ಯ ಗುಂಪಲಾಜೆ , ಉಪಾಧ್ಯಕ್ಷರುಗಳಾಗಿ ವಿಲ್ಸನ್ ನೆಲ್ಸನ್ ಮೋನಿಸ್ ಗುಂಪಲಾಜೆ ಹಾಗೂ ಪ್ರೇಮನಾಥ್ ಶೆಟ್ಟಿ ಗುಂಪಲಾಜೆ, ಕಾರ್ಯದರ್ಶಿಯಾಗಿ ರಾಜೇಶ್ ಅದೇಲು, ಜೊತೆ ಕಾರ್ಯದರ್ಶಿಯಾಗಿ ವಿಘ್ನೇಶ್ ಗಾಣಿಗ ಸಿರಿಮಜಲು, ಕ್ರೀಡಾ ಕಾರ್ಯದರ್ಶಿಯಾಗಿ ಸಂದೀಪ್ ಆದೇಲು ಹಾಗೂ ಸುಪ್ರೀತ್ ಆದೇಲು, ಕೋಶಾಧಿಕಾರಿಯಾಗಿ ಪ್ರಶಾಂತ್ ಆಚಾರ್ಯ ಸಿರಿಮಜಲು, ಸಾಂಸ್ಕೃತಿಕ ನಿರ್ದೇಶಕರಾಗಿ ಜಗನ್ನಾಥ್ ಕುಲಾಲ್ ಸಿರಿಮಜಲು ಹಾಗೂ ಸಮನ್ವಿತ್ ಪಣೆಜಾಲು ಇವರುಗಳು ಆಯ್ಕೆಯಾಗಿರುತ್ತಾರೆ.

ಕಾರ್ಯಕ್ರಮದಲ್ಲಿ ಸಲಹೆಗಾರರಾದ ಯತೀಶ್ ಸಿರಿಮಜಲುರವರು ಮುಂದಿನ ಕಾರ್ಯಯೋಜನೆಗಳ ಬಗ್ಗೆ ಹಾಗೂ ಜಗನ್ನಾಥ ರವರು ಮೂರು ವರ್ಷಗಳ ಅಧ್ಯಕ್ಷ ಎಂಬ ಜವಾಬ್ದಾರಿ ಸ್ಥಾನದಿಂದ ನಿರ್ಗಮಿಸಿದ ನಾಗೇಶ್ ಆದೇಲುರವರ ಸೇವೆಯನ್ನು ಕೊಂಡಾಡಿದರು. ಮುಂದೆಯೂ ಈ ಮಾದರಿಯನ್ನು ಅನುಸರಿಸಲು ಸೂಚನೆ ನೀಡಿದರು. ನಿರ್ಗಮಿತ ಅಧ್ಯಕ್ಷ ನಾಗೇಶ್ ಈ ವರೆಗೆ ತಮಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದ ಸಮರ್ಪಿಸಿ, ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.

ಶಾಂತರಾಜ್ ಜೈನ್, ಶಂಕರ ಗಾಣಿಗ ಸೇರಿದಂತೆ ಹಿರಿಯರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು ನೂತನ ಕಾರ್ಯದರ್ಶಿ ರಾಜೇಶ್ ಆದೇಲು ಧನ್ಯವಾದವಿತ್ತರು.

Related posts

ಪೆಟ್ರೋಲ್ ದರ ಏರಿಸುವ ಮೂಲಕ ರಾಜ್ಯಸರಕಾರದ ಬಣ್ಣ ಬಯಲಾಗಿದೆ : ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್

Suddi Udaya

ಮಡಂತ್ಯಾರು: ಸಹಕಾರಿ ಸಂಘಕ್ಕೆ ನಕಲಿ ಚಿನ್ನದ ಸರ ಅಡವು ಯತ್ನ; ಪ್ರಕರಣ ದಾಖಲು

Suddi Udaya

ಬಜಿರೆ: ಬೆಳ್ತಂಗಡಿ ತಾ| ಮಟ್ಟದ ಕ್ರೀಡಾಕೂಟದ ಉದ್ಘಾಟನೆ: ಹುಣ್ಸೆಕಟ್ಟೆ ಕ್ರೀಡಾ ಸಂಕೀರ್ಣಕ್ಕೆ ಸರಕಾರ ಅನುಮೋದನೆ ನೀಡಲಿ: ಶಾಸಕ ಹರೀಶ್ ಪೂಂಜ

Suddi Udaya

ಜಿಲ್ಲಾಮಟ್ಟದ ವಿದ್ಯಾರತ್ನ ಪ್ರಶಸ್ತಿ ಪುರಸ್ಕೃತೆ ಉಮಾ ಡಿ ಗೌಡರಿಗೆ ಬೆಳ್ತಂಗಡಿ ತಾಲೂಕು ಮುಖ್ಯ ಶಿಕ್ಷಕರ ಸಂಘದಿಂದ ಸನ್ಮಾನ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರೀದಮಿಕ್ ಯೋಗಾಸನದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ: ಮೃತ ದೇಹಗಳನ್ನು ಹೂತು ಹಾಕಿದ ದೂರು ಪ್ರಕರಣ ಕೇಸ್ ಫೈಲ್ ಪಡೆಯಲು ಧರ್ಮಸ್ಥಳ ಠಾಣೆಗೆ ಬಂದ ಎಸ್.ಐ.ಟಿ. ತನಿಖಾಧಿಕಾರಿ ಜಿತೇಂದ್ರ ದಯಾಮ

Suddi Udaya
error: Content is protected !!