26.2 C
ಪುತ್ತೂರು, ಬೆಳ್ತಂಗಡಿ
August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಿದುಷಿ ವಿದ್ಯಾಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್‌, ಅರ್ವ ವತಿಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಬೆಳ್ತಂಗಡಿ:ವಿದುಷಿ ವಿದ್ಯಾಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್‌, ಅರ್ವ/ಬೆಳ್ತಂಗಡಿ ವತಿಯಿಂದ 2026ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಉತ್ತೀರ್ಣರಾಗಿ ಇಂಜಿನಿಯರಿಂಗ್ (B.E/B.Tech) ಅಥವಾ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ಪಡೆದಿರುವ ಬೆಳ್ತಂಗಡಿ ತಾಲೂಕಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಬೆಳ್ತಂಗಡಿ ತಾಲೂಕಿನ ನಿವಾಸಿಗಳಾಗಿರಬೇಕು. ದ್ವಿತೀಯ ಪಿಯುಸಿಯಲ್ಲಿ ಕನಿಷ್ಠ ಶೇ.70 ಅಂಕಗಳನ್ನು ಪಡೆದಿರಬೇಕು. ಮಾನ್ಯತೆ ಪಡೆದ ಇಂಜಿನಿಯರಿಂಗ್ ಅಥವಾ ಡಿಪ್ಲೊಮಾ ಕಾಲೇಜಿಗೆ ಪ್ರವೇಶ ಪಡೆದಿರಬೇಕು. ಕುಟುಂಬದ ವಾರ್ಷಿಕ ಆದಾಯ ರೂ.3 ಲಕ್ಷಕ್ಕಿಂತ ಕಡಿಮೆಯಿರಬೇಕು. ಅರ್ಜಿ ಸಲ್ಲಿಸಲು ಜುಲೈ 30, 2026 ಕೊನೆಯ ದಿನವಾಗಿದೆ. ವಿದ್ಯಾರ್ಥಿವೇತನದ ಮೊತ್ತವನ್ನು ಟ್ರಸ್ಟ್‌ನ ವಿವೇಚನೆಯಂತೆ ನಿಗದಿಪಡಿಸಲಾಗುವುದು. ಅರ್ಜಿ ಸಲ್ಲಿಸಲು https://forms.gle/eCUPzovjfAV5MChx8


ಸೀಮಿತ ಸಂಖ್ಯೆಯ ವಿದ್ಯಾರ್ಥಿಗಳಿಗೆ ಮಾತ್ರ ವಿದ್ಯಾರ್ಥಿವೇತನ ನೀಡಲಾಗುವುದರಿಂದ ಅರ್ಹ ವಿದ್ಯಾರ್ಥಿಗಳು ಶೀಘ್ರವಾಗಿ ಅರ್ಜಿ ಸಲ್ಲಿಸುವಂತೆ ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ಈ ನಂಬರಿಗೆ 9480505007 ಸಂಪರ್ಕಿಸುವಂತೆ ತಿಳಿಸಲಾಗಿದೆ. [email protected] ಇ-ಮೇಲ್ ಮೂಲಕ ಸಂಪರ್ಕಿಸಬಹುದಾಗಿದ್ದು, ಗೂಗಲ್ ಫಾರ್ಮ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು‌ ಸಂಘಟಕರು ತಿಳಿಸಿದ್ದಾರೆ.

Related posts

ಪಿಕ್‌ಆಪ್ ವಾಹನ ತಡೆಗಟ್ಟಿ: ಜೀವಬೆದರಿಕೆ ಒಡ್ಡಿದ ಆರೋಪ: ಮೆಸ್ಕಾಂ ಉದ್ಯೋಗಿ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ಕೇಸು

Suddi Udaya

ಕುದ್ಯಾಡಿ: ಶ್ರೀಮತಿ ವಿಮಲ ಹಾಗೂ ಗೋಪಾಲ ಪೂಜಾರಿ ದಂಪತಿಗಳ ವೈವಾಹಿಕ ಜೀವನದ ಸುವರ್ಣ ಸಂಭ್ರಮ ಆಚರಣೆ

Suddi Udaya

ಬಳಂಜ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ, ವಿವಿಧ ಸಂಘ ಸಂಸ್ಥೆಗಳು ಭಾಗಿ

Suddi Udaya

ಪುತ್ತೂರಿನಲ್ಲಿ ನಡೆದ ಕಾಮರ್ಸ್ ಆಂಡ್ ಡಿಸೈನ್ ಫೆಸ್ಟ್: ಬೆಳ್ತಂಗಡಿ ಶ್ರೀ ಗುರುದೇವ ಪದವಿ ಕಾಲೇಜಿಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಸ್ಥಗಿತಗೊಂಡ ಬಸ್ ನಿಲ್ದಾಣದ ಕಾಮಗಾರಿ; ಶಾಸಕ ಹರೀಶ್ ಪೂಂಜರಿಂದ‌ ಅಧಿಕಾರಿಗಳೊಂದಿಗೆ ಸಭೆ

Suddi Udaya

ವೇಣೂರು: ನೇಮಕ್ಕು ನಿಧನ

Suddi Udaya
error: Content is protected !!