ಬೆಳ್ತಂಗಡಿ: 2012 ರಲ್ಲಿ ನಡೆದಿದ್ದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಬಗ್ಗೆ ಮರು ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಜು. 21 ಕ್ಕೆ ಮುಂದೂಡಿದೆ.
ಸೌಜನ್ಯ ಪ್ರಕರಣದ ಮರುತನಿಖೆ ನಡೆಸುವಂತೆ ಸೌಜನ್ಯ ತಾಯಿ ಕುಸುಮಾವತಿ ಸುಪ್ರೀಂ ಕೋರ್ಟ್ ನಲ್ಲಿ ಎಸ್.ಎಲ್.ಪಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆಗೆ ತೆಗೆದುಕೊಂಡ ನ್ಯಾಯಾಲಯ ಈಬಗ್ಗೆ ರಾಜ್ಯ ಸರಕಾರಕ್ಕೆ ಸಿಬಿಐಗೆ ನೋಟೀಸ್ ಜಾರಿ ಮಾಡಿತ್ತು ಪ್ರಕರಣದ ವಿಚಾರಣೆಗೆ ಜು 14 ರಂದು ದಿನ ನಿಗದಿ ಮಾಡಲಾಗಿತ್ತು ಇದೀಗ ವಿಚಾರಣೆಯನ್ನು ನ್ಯಾಯಾಲಯ ಜು 21 ಕ್ಕೆ ಮುಂದೂಡಿದೆ.
















