August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ.ಅಣ್ಣಯ್ಯ ಕುಲಾಲ್‌ರಿಂದ ‘ಸಿರಿಂಜ್ ಹಿಡಿದ ಕೈ ಪೆನ್ನು ಹಿಡಿದಾಗ’ ಕೃತಿ ಡಾ. ಹೆಗ್ಗಡೆಯವರಿಗೆ ಅರ್ಪಣೆ

ಬೆಳ್ತಂಗಡಿ: ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಇದರ ಕರ್ನಾಟಕ ರಾಜ್ಯ ಘಟಕದ ಉಪಾಧ್ಯಕ್ಷರಾದ ಡಾ. ಎಂ ಅಣ್ಣಯ್ಯ ಕುಲಾಲ್ ಉಳ್ತೂರು ಅವರು ಜು.11 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಇತ್ತೀಚಿಗೆ ಬಿಡುಗಡೆಗೊಂಡ ಕರ್ನಾಟಕ ರಾಜ್ಯ ವೈದ್ಯ ಬರಹಗಾರರ ಬಳಗದ ಆಶ್ರಯದಲ್ಲಿ ಮೂಡಿ ಬಂದ ವೈದ್ಯಕೀಯ ಸಾಹಿತ್ಯ ಕ್ಷೇತ್ರದಲ್ಲಿ ಸಂಚಲನದ ಮೂಡಿಸಿದ ತನ್ನ ಸಂಪಾದಕತ್ವದ “ಸಿರಿಂಜ್ ಹಿಡಿವ ಕೈ ಪೆನ್ನು ಹಿಡಿದಾಗ” ಕೃತಿಯನ್ನ್ನು ಧರ್ಮಾಧಿಕಾರಿ ಪೂಜ್ಯ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಅರ್ಪಿಸಿದರು.

ಈ ಸಂದರ್ಭದಲ್ಲಿ ನಿವೃತ್ತ ಕಂದಾಯ ನಿರೀಕ್ಷಕ ಎಚ್ ಪದ್ಮಕುಮಾರ್, ಮೂಲ್ಯರ ಯಾನೆ ಕುಲಾಲರ ಸಂಘದ ನಿಕಟಪೂರ್ವ ಅಧ್ಯಕ್ಷ ಹರೀಶ ಕಾರಿಂಜ, ಕೇಶವ ಕುಲಾಲ್ ಚಾರ್ಮಾಡಿ, ಉಮೇಶ್ ಕುಲಾಲ್ ಗುರುವಾಯನಕೆರೆ, ಲೋಕೇಶ್ ಕುಲಾಲ್ ಗುರುವಾಯನಕೆರೆ, ತಿಲಕ್‌ರಾಜ್ ಗುರುವಾಯನಕೆರೆ ಹಾಗೂ ಡಾ| ಅಣ್ಣಯ್ಯ ಕುಲಾಲ್ ಕುಟುಂಬದವರು ಉಪಸ್ಥಿತರಿದ್ದರು.

Related posts

ಕಳೆಂಜ ಗ್ರಾ,ಪಂ. ವ್ಯಾಪ್ತಿಯ ಬಿಜೆಪಿ ಶಕ್ತಿ ಕೇಂದ್ರದ ಸಭೆ

Suddi Udaya

ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಕೆಸರಡ್ ಒಂಜಿ ದಿನ” ಕಾರ್ಯಕ್ರಮ

Suddi Udaya

ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

Suddi Udaya

ಎಸ್.ಡಿ.ಯಂ. ಐ.ಟಿ.ಐ.ಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ. ಪ.ಪೂ. ಕಾಲೇಜು: ಎನ್ಎಸ್ಎಸ್ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಅಳದಂಗಡಿ: ಪಾದಚಾರಿಗೆ ಕಾರು ಡಿಕ್ಕಿ:

Suddi Udaya
error: Content is protected !!