25.2 C
ಪುತ್ತೂರು, ಬೆಳ್ತಂಗಡಿ
August 29, 2026
Uncategorized

ಉಡುಪಿಯ ಪೇಜಾವರ ಮಠಾಧೀಶರು ಪವಿತ್ರ ಕ್ಷೇತ್ರವಾದ ಶ್ರೀ ಮಧ್ವ ಮಂಟಪಕ್ಕೆ ಭೇಟಿ

ಕಲಿಯುಗದಲ್ಲಿ ಪರಿಶುದ್ದವಾದ ಮನಸ್ಸಿನಿಂದ ಭಗವಂತನ ಸ್ಮರಣೆ ಅತ್ಯಗತ್ಯ: ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

ಪುಂಜಾಲಕಟ್ಟೆ : ಉಡುಪಿಯ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಜು.13 ಸೋಮವಾರ ಕಾವಳಪಡೂರು ಗ್ರಾಮದ ಮಧ್ವದಲ್ಲಿರುವ ಶ್ರೀ ಮಧ್ವಾಚಾರ್ಯರು ವಿಶ್ರಾಂತಿ ಪಡೆದ ಪವಿತ್ರ ಕ್ಷೇತ್ರವಾದ ಶ್ರೀ ಮಧ್ವ ಮಂಟಪಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಓಂಕಾರ ಫ್ರೆಂಡ್ಸ್ ಹಾಗೂ ಓಂಕಾರ ಮಹಿಳಾ ಘಟಕ ಮಧ್ವ ಹಾಗೂ ಯಕ್ಷಕೂಟ ಮಧ್ವ ವತಿಯಿಂದ ಭಕ್ತಿಪೂರ್ವಕವಾಗಿ ಗೌರವ ಸಲ್ಲಿಸಲಾಯಿತು.

ಈ ಸಂದರ್ಭ ಆಶೀರ್ವಚನ ನೀಡಿದ ಶ್ರೀಗಳು ದೇವರು ಸಮಾಜದಲ್ಲಿರುವ ಎಲ್ಲರ ಹೃದಯದಲ್ಲು ನೆಲೆಸಿದ್ದಾನೆ‌. ಕಲಿಯುಗದಲ್ಲಿ ಪರಿಶುದ್ದವಾದ ಮನಸ್ಸಿನಿಂದ ಭಗವಂತನ ಸ್ಮರಣೆ ಅತ್ಯಗತ್ಯವಾಗಿದೆ ಎಂದರು.
ಇದೇ ವೇಳೆ ಶ್ರೀ ಮಧ್ವ ಮಂಟಪದಲ್ಲಿ ಬಾಲಗೋಕುಲ, ಕುಣಿತ ಭಜನೆ ಸೇರಿದಂತೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಿಯಮಿತವಾಗಿ ನಡೆಸಲು ಸ್ಥಳಾವಕಾಶ ಕಲ್ಪಿಸಬೇಕೆಂದು ಶ್ರೀಗಳಿಗೆ ಮನವಿ ಸಲ್ಲಿಸಲಾಯಿತು.
ಶ್ರೀ ಮಧ್ವ ಮಂಟಪದ ವ್ಯವಸ್ಥಾಪಕರಾದ ರಾಘವೇಂದ್ರ ಭಟ್ ಮಠ ಮದ್ದಡ್ಕ, ಯಕ್ಷಕೂಟ ಮಧ್ವ ಇದರ ಸಂಚಾಲಕ ಭಾಸ್ಕರ ಶೆಟ್ಟಿ ಮಧ್ವ, ಓಂಕಾರ ಫ್ರೆಂಡ್ಸ್ ಹಾಗೂ ಓಂಕಾರ ಮಹಿಳಾ ಘಟಕದ ಪದಾಧಿಕಾರಿಗಳು, ಸದಸ್ಯರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

Related posts

ಚಾಲಕನ ನಿಯಂತ್ರಣ ತಪ್ಪಿ ಟಿ.ಟಿ ವಾಹನ ರಸ್ತೆಗೆ ಪಲ್ಟಿ: ಉಜಿರೆಯ ಮಾಲಾಧಾರಿಗಳಿಗೆ ಗಾಯ

Suddi Udaya

ಸುಬ್ರಹ್ಮಣ್ಯದಲ್ಲಿದ್ದ ನಿರ್ಗತಿಕ ಬೆಂಗಳೂರಿನ ಜನ ಸ್ನೇಹಿ ಕೇಂದ್ರಕ್ಕೆ

Suddi Udaya

ಬೆಳ್ತಂಗಡಿ : ವರ್ಗಾವಣೆಗೊಂಡ ಪೊಲೀಸ್ ಸಿಬ್ಬಂದಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ, ಶ್ರೀ ನಾಗಂಬಿಕಾ ದೇವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿ, ವತಿಯಿಂದ 10ನೇ ವರ್ಷದ ಶ್ರೀ ಗಣೇಶೋತ್ಸವ

Suddi Udaya

ಬಳಂಜ‌ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಯುವ ಸಾಧಕಿ ಮಾನ್ಯರವರಿಗೆ ಸನ್ಮಾನ

Suddi Udaya

ಶಾಸಕ ಹರೀಶ್ ಪೂಂಜ ಪ್ರಕರಣ: ವಿಚಾರಣೆಗೆ ವಿನಾಯಿತಿ ನೀಡಿದ ನ್ಯಾಯಾಲಯ

Suddi Udaya
error: Content is protected !!