August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜು.16ರಿಂದ ಧರ್ಮಸ್ಥಳದಲ್ಲಿ 55ನೇ ವರ್ಷದ ಪುರಾಣ ವಾಚನ-ಪ್ರವಚನ

ಧರ್ಮಸ್ಥಳ: ಧರ್ಮಸ್ಥಳದಲ್ಲಿ 55 ನೇ ವರ್ಷದ ಪುರಾಣ-ಪ್ರವಚನ ಕಾರ್ಯಕ್ರಮವು ಜು.16 ರಿಂದ ಸೆಪ್ಟೆಂಬರ್ 17ರ ವರೆಗೆ ನಡೆಯಲಿದೆ. ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ಪ್ರತಿದಿನ ಸಂಜೆ ಗಂಟೆ 6.30ರಿಂದ 8ಗಂಟೆ ವರೆಗೆ ಪುರಾಣ ವಾಚನ-ಪ್ರವಚನ ನಡೆಯಲಿದ್ದು, ಖ್ಯಾತ ವಿದ್ವಾಂಸರು ಹಾಗೂ ಕಲಾವಿದರಿಂದ ಕುಮಾರವಾಲ್ಮೀಕಿ ವಿರಚಿತ “ತೊರವೆ ರಾಮಾಯಣ”ದ ವಾಚನ-ಪ್ರವಚನ ನಡೆಸಿಕೊಡುತ್ತಾರೆ.

ಶನಿವಾರ ಮತ್ತು ಭಾನುವಾರಗಳಲ್ಲಿ ವಿವಿಧ ಕಾವ್ಯಗಳ ಆಯ್ದ ಭಾಗಗಳನ್ನು ವಾಚನ-ಪ್ರವಚನಕ್ಕೆ ಬಳಸಲಾಗುವುದು.
ಜು.16 ರಂದು ಗುರುವಾರ ಮತ್ತು 17 ರಂದು ಶುಕ್ರವಾರ ಗಣಪತಿ ಭಟ್ ಪದ್ಯಾಣ ವಾಚನಕಾರರಾಗಿಯೂ, ಹವ್ಯಾಸಿ ಯಕ್ಷಗಾನ ಕಲಾವಿದ ಉಜಿರೆ ಅಶೋಕ ಭಟ್ ಪ್ರವಚನಕಾರರಾಗಿಯೂ ಭಾಗವಹಿಸುವರು.


ಉದ್ಘಾಟನಾ ಸಮಾರಂಭ: ಜುಲೈ 16 ರಂದು ಸಂಜೆ 5 ಗಂಟೆಗೆ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಪೀಠಾಧಿಪತಿಗಳಾದ ಸದ್ಗುರು ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಪುರಾಣ ವಾಚನ-ಪ್ರವಚನ ಕಾರ್ಯಕ್ರಮ ಉದ್ಘಾಟಿಸುವರು.


ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು ಎಂದು ಪುರಾಣ ವಾಚನ-ಪ್ರವಚನ ಸಮಿತಿಯ ಸಂಚಾಲಕರಾದ ಎ.ವಿ. ಶೆಟ್ಟಿ ತಿಳಿಸಿದ್ದಾರೆ.

Related posts

ತೆಕ್ಕಾರು ಗ್ರಾಮ ಪಂಚಾಯತ್ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವರಿಗೆ ಬೆಂಗಳೂರಿನ ನಾಗೇಂದ್ರ ಶಾಸ್ತ್ರೀರವರಿಂದ 108 ಲೀಟರ್ ಹಾಲಿನಿಂದ ಅಭಿಷೇಕ

Suddi Udaya

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವರಿಗೆ ಶ್ರೀಮತಿ ಸುಕನ್ಯಾ ಮತ್ತು ಡಿ. ಜಯರಾಮ ರಾವ್ ಮತ್ತು ಮಕ್ಕಳು ಸತ್ಯನಪಲ್ಕೆ ಕಲ್ಮಂಜ ಇವರಿಂದ ನೂತನ ಪುಷ್ಪರಥ ಸಮರ್ಪಣೆ ; ಉಜಿರೆ ಶ್ರೀ ಜನಾರ್ಧನ ದೇವಸ್ಥಾನದ ರಥಬೀದಿಯಿಂದ ಶ್ರೀ ಕ್ಷೇತ್ರ ಪಜಿರಡ್ಕಕ್ಕೆ ಭವ್ಯ ಶೋಭಾಯಾತ್ರೆ,

Suddi Udaya

ಅಪ್ಸರಾ ಫ್ಯಾಶನ್ ಸೆಂಟರ್ ನಲ್ಲಿ ಮಾನ್ಸೂನ್ ಸೇಲ್ : ಪ್ರತೀ ಖರೀದಿಯ ಮೇಲೆ ಶೇ.25 ರಷ್ಟು ಡಿಸ್ಕೌಂಟ್

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಧನಸಹಾಯ

Suddi Udaya

ಗರ್ಡಾಡಿ: ಗಾಳಿ ಮಳೆಗೆ ಮಣ್ಣು ಕುಸಿತ, ಮನೆಗೆ ಹಾನಿ

Suddi Udaya
error: Content is protected !!