August 29, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ದಿಡುಪೆ ಜಲಪಾತ ವೀಕ್ಷಣೆಗೆ ಬಂದಿದ್ದವರನ್ನು ತಡೆದು ಜೀವಬೆದರಿಕೆ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ದಿಡುಪೆಯ ಜಲಪಾತ ನೋಡಲು ಮಂಗಳೂರಿನಿಂದ ಬಂದಿದ್ದ ಯುವಕ ಹಾಗೂ ಯುವತಿಗೆ ರಸ್ತೆಯಲ್ಲಿ ತಡೆದು ಜೀವಬೆದರಿಕೆ ಹಾಕಿರುವ ಬಗ್ಗೆ ಯುವತಿ ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ದಿಡುಪೆ ನಿವಾಸಿಗಳಾದ ರಂಜಿತ್, ಸುದರ್ಶನ್, ಸ್ವಸ್ತಿಕ್, ಪ್ರದೀಪ್, ದೀಕ್ಷಿತ್‌ಹಾಗೂ ಇತರರ ವಿರುದ್ದ ಪ್ರಕರಣ‌ ದಾಖಲಿಸಲಾಗಿದೆ.
ಮಂಗಳೂರಿನಿಂದ ಯುವತಿ ತನ್ನ ಸ್ನೇಹಿತ ಫರ್ಹಾನ್ ನೊಂದಿಗೆ ಜಲಪಾತ ನೋಡಲು ಜು.12 ರಂದು ದಿಡುಪೆಗೆ ಬರುತ್ತಾಳೆ ಅರಣ್ಯ ಇಲಾಖೆಯ ಚೆಕ್ ಪೋಸ್ಟ್ ನಲ್ಲಿ ಅನುಮತಿ ಪಡೆದು ಜಲಪಾತಕ್ಕೆ ತೆರಳಿ ಹಿಂತಿರುಗಿ ಬಂದ ವೇಳೆ‌ ಯುವತಿಯನ್ನು ತಡೆದ ಸ್ಥಳೀಯ ಯುವಕರ ತಂಡವೊಂದು ಅವಾಚ್ಯವಾಗಿ ನಿಂದಿಸಿ ನಿನ್ನೊಂದಿಗೆ ಬಂದಿದ್ದ ಯುವಕನನ್ನು ಇಲ್ಲಿಗೆ ಕರೆಸು ನಿಮ್ಮನ್ನು ಸುಮ್ಮನೆ ಬಿಡುವುದಿಲ್ಲ ಎಂದು ಜೀವಬೆದರಿಕೆ ಹಾಕಿದ್ದಾರೆ ಎಂದು ದೂರು ನೀಡಲಾಗಿದೆ. ಯುವತಿಯ ದೂರಿನಂತೆ ಪೊಲೀಸರು ಭಾರತೀಯ ದಂಡ ಸಂಹಿತೆ 126(2), 352, 351(2) ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ‌ ದಾಖಲಿಸಿಕೊಂಡಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ನಾಳೆ(ಆ.3) : ಬೆಳ್ತಂಗಡಿ ಆನ್‌ಸಿಲ್ಕ್‌ನಲ್ಲಿ ಮೇಘ ಬ್ರಾಂಡೆಂಡ್ ವಸ್ತ್ರಮೇಳ: ಶೇ.20 ರಿಂದ ಶೇ70 ರಷ್ಟು ರಿಯಾಯಿತಿ

Suddi Udaya

ನಾಳೆ (ಜು.14) ಉಜಿರೆಯಲ್ಲಿ ಶುಭಾರಂಭಗೊಳ್ಳಲಿದೆ “ಡೈನಮಿಕ್ ಡ್ಯಾನ್ಸ್ ಫ್ಯಾಕ್ಟರಿ&ಕಾಸ್ಟೋಮ್ ಕಾರ್ನರ್”

Suddi Udaya

ಬೆಳ್ತಂಗಡಿ : ಲಾರಿ- ಬೈಕ್ ಅಪಘಾತದಲ್ಲಿ ಇಬ್ಬರು ಸಾವು ಪ್ರಕರಣ: ಬೆಳ್ತಂಗಡಿ ನ್ಯಾಯಾಲಯದಿಂದ ಲಾರಿ ಚಾಲಕನಿಗೆ ದಂಡ ಹಾಗೂ ಜೈಲು ಶಿಕ್ಷೆ ಪ್ರಕಟ

Suddi Udaya

ನಾಳೆ ಬೆಳ್ತಂಗಡಿಗೆ ಜಿಲ್ಲಾಧಿಕಾರಿ ಭೇಟಿ

Suddi Udaya

ಕರ್ನಾಟಕ ಮುಸ್ಲಿಮ್ ಜಮಾಅತ್ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್‌ನ ನೂತನ ಸಮಿತಿ ರಚನೆ

Suddi Udaya

ಕಲ್ಮಂಜ ಗ್ರಾಮಸಭೆ: ಪೈಪುಗಳು ಒಡೆದು 4 ದಿವಸದಿಂದ ಕುಡಿಯುವ ನೀರು ಸರಿಯಾಗಿ ಪೂರೈಕೆಯಾಗುತ್ತಿಲ್ಲ.

Suddi Udaya
error: Content is protected !!