25.2 C
ಪುತ್ತೂರು, ಬೆಳ್ತಂಗಡಿ
August 30, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಮಡಂತ್ಯಾರು ಶ್ರೀ ಕೃಷ್ಣಜನ್ಮಾಷ್ಟಮಿ ಸಮಿತಿಗೆ 37ನೇ ವರ್ಷದ ಮೊಸರು ಕುಡಿಕೆ ಉತ್ಸವದ ಅಧ್ಯಕ್ಷರಾಗಿ ಬಿಜೆಪಿ ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿ, ಸಾಮಾಜಿಕ ಕ್ಷೇತ್ರದ ಮುಂದಾಳು ಪ್ರಶಾಂತ್ ಎಂ. ಪಾರೆಂಕಿ ಗೌರವಾಧ್ಯಕ್ಷರಾಗಿ ಸಮಾಜಸೇವಕ, ಉದ್ಯಮಿ ಹಾಗೂ ಕೊಡುಗೈ ದಾನಿ ಪದ್ಮನಾಭ ಸುವರ್ಣ ಬಳ್ಳಮಂಜ

ಮಡಂತ್ಯಾರು: ಶ್ರೀ ಕೃಷ್ಣಜನ್ಮಾಷ್ಟಮಿ ಸಮಿತಿ, ಮಡಂತ್ಯಾರು ಇದರ 37ನೇ ವರ್ಷದ ಮೊಸರು ಕುಡಿಕೆ ಉತ್ಸವದ ನೂತನ ಪದಾಧಿಕಾರಿಗಳ ಆಯ್ಕೆ ಸಭೆಯು ಜು.12ರಂದು ಮಡಂತ್ಯಾರು ಗಣಪತಿ ಮಂಟಪದಲ್ಲಿ ನಡೆಯಿತು.

ಸಭೆಯಲ್ಲಿ ಸಮಿತಿಯ ಅಧ್ಯಕ್ಷರಾಗಿ ಶ್ರೀ ವಿದ್ಯಾಸರಸ್ವತಿ ಭಜನಾ ಮಂಡಳಿಯ ಗೌರವ ಸಲಹೆಗಾರರು, ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಮುಂದಾಳು,ಬಿಜೆಪಿ ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿ ಮತ್ತು ಕೊಡುಗೈ ದಾನಿಯಾಗಿರುವ ಪ್ರಶಾಂತ್ ಎಂ. ಪಾರೆಂಕಿ ಅವರನ್ನು ಆಯ್ಕೆ ಮಾಡಲಾಯಿತು.

ಪ್ರಶಾಂತ್ ಎಂ. ಪಾರೆಂಕಿ ಅವರು ಈ ಹಿಂದೆ ಸಮಿತಿಯ 25ನೇ ವರ್ಷದ ಬೆಳ್ಳಿಹಬ್ಬದ ಅಧ್ಯಕ್ಷರಾಗಿ ಯಶಸ್ವಿಯಾಗಿ ಉತ್ಸವವನ್ನು ನಡೆಸಿಕೊಟ್ಟಿದ್ದರು. ಅಲ್ಲದೆ 2024ರಿಂದ ಸತತ ಎರಡು ವರ್ಷಗಳ ಕಾಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಉತ್ಸವವನ್ನು ಯಶಸ್ವಿಯಾಗಿ ಸಂಘಟಿಸಿದ್ದಾರೆ. ಇದೀಗ ಮೂರನೇ ಬಾರಿಗೆ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಗೌರವಾಧ್ಯಕ್ಷರಾಗಿ ಸಮಾಜಸೇವಕ, ಉದ್ಯಮಿ ಹಾಗೂ ಕೊಡುಗೈ ದಾನಿ ಪದ್ಮನಾಭ ಸುವರ್ಣ ಬಳ್ಳಮಂಜ ಅವರನ್ನು ಆಯ್ಕೆ ಮಾಡಲಾಯಿತು.ಉಪಾಧ್ಯಕ್ಷರಾಗಿ ಅಜಯ್ ಶೆಟ್ಟಿ ಭಂಡಾರಿಗುಡ್ಡೆ, ಉಮೇಶ್ ಕೋಟೆ ಹಾಗೂ ರಕ್ಷಿತ್ ಪೂಜಾರಿ ಕೋಡ್ಲಕ್ಕೆ, ಪ್ರಧಾನ ಕಾರ್ಯದರ್ಶಿಯಾಗಿ ಶರತ್ ಗೌಡ ಹಟ್ಟತ್ತೊಡಿ, ಜಂಟಿ ಕಾರ್ಯದರ್ಶಿಗಳಾಗಿ ಗೋಪಾಲಕೃಷ್ಣ ಶೆಟ್ಟಿ ನೆತ್ತರ ಹಾಗೂ ರಕ್ಷಿತ್ ಕುಲಾಲ್ ಮಡಂತ್ಯಾರು, ಕೋಶಾಧಿಕಾರಿಯಾಗಿ ನಿಖಿಲ್ ಕುಮಾರ್, ಕ್ರೀಡಾ ಕಾರ್ಯದರ್ಶಿಗಳಾಗಿ ಸಂಜೀತ್ ಶೆಟ್ಟಿ ಮುಗೇರೊಡಿ ಹಾಗೂ ಸುಭಾಷ್ ಹಾರಬೆ ಆಯ್ಕೆಯಾದರು.

ಗೌರವ ಸಲಹೆಗಾರರಾಗಿ ಕೆ. ಪ್ರಭಾಕರ ಬಂಗೇರ, ಸಂಜೀವ ಶೆಟ್ಟಿ ಮುಗೇರೊಡಿ, ರತ್ನಾಕರ ಶೆಟ್ಟಿ ಮೂಡಯೂರು, ತುಳಸಿ ಜಿ. ಹಾರಬೆ ಹಾಗೂ ನಾರಾಯಣ ಪೂಜಾರಿ ಬಳ್ಳಮಂಜ ಅವರನ್ನು ನೇಮಕಗೊಳಿಸಲಾಯಿತು.ನೂತನ ಪದಾಧಿಕಾರಿಗಳು 37ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಹಾಗೂ ಮೊಸರು ಕುಡಿಕೆ ಉತ್ಸವವನ್ನು ಭಕ್ತಿಪೂರ್ವಕ ಹಾಗೂ ವಿಜೃಂಭಣೆಯಿಂದ ಆಚರಿಸುವ ಸಂಕಲ್ಪ ವ್ಯಕ್ತಪಡಿಸಿದರು.

Related posts

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

140 ವರ್ಷಗಳ ಇತಿಹಾಸವಿರುವ ಗೇರುಕಟ್ಟೆ ಕೊರಂಜ ಪ್ರಾಥಮಿಕ ಶಾಲಾ ನೂತನ ಕೊಠಡಿ ಉದ್ಘಾಟನೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಸಭೆ

Suddi Udaya

ಅಪಘಾತದಲ್ಲಿ ಗಂಭೀರ ಗಾಯಗೊಂಡ ಮೇಲಂತಬೆಟ್ಟು ಸಂಪತ್ ಆಚಾರ್ಯ ರವರ ಚಿಕಿತ್ಸೆಗೆ ನೆರವಾಗಿ

Suddi Udaya

‘ಹೆಚ್ಚುವರಿ ನೀರಿನ ಶುಲ್ಕದಿಂದಾಗಿ ಜನಸಾಮಾನ್ಯರಿಗೆ ಹೊರೆ’ : ನಾವೂರು ಎಸ್ ಡಿ ಪಿ ಐ ನೇತೃತ್ವದಲ್ಲಿ ಮನವಿ

Suddi Udaya

ಇಳಂತಿಲ: ದರೋಡೆ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆ ಪ್ರಕಟ

Suddi Udaya
error: Content is protected !!