July 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಮುಳಿಯ ಜ್ಯುವೆಲ್ಲರ್ಸ್ ವತಿಯಿಂದ ಪಡ್ಲಾಡಿ ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

ಬೆಳ್ತಂಗಡಿ: ದ.ಕ. ಜಿ ಪಂ ಹಿರಿಯ ಪ್ರಾಥಮಿಕ ಶಾಲೆ ಪಡ್ಲಾಡಿ ಲಾಯಿಲ, ಇಲ್ಲಿನ ಮಕ್ಕಳಿಗೆ ಮುಳಿಯ ಜ್ಯುವೆಲ್ಲರ್ಸ್ ವತಿಯಿಂದ ಉಚಿತ ಶಾಲಾ ಬ್ಯಾಗ್ ವಿತರಣೆಯು ಜು 11 ನಡೆಯಿತು.

ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿರುವ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ,ಪುಸ್ತಕ ಸೇರಿದಂತೆ ಇನ್ನೂ ಅನೇಕ ರೀತಿಯ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ಕಾರ್ಯ ಮುಳಿಯ ಜ್ಯುವೆಲ್ಲರ್ಸ್ ಮಾಡುತ್ತಿರುವುದು ಅಭಿನಂದನೀಯ , ಲಾಭದ ಒಂದು ಪಾಲು ಸಾಮಾಜಿಕ ಸೇವಾ ಚಟುವಟಿಕೆಗಳಿಗೆ ವಿನಿಯೋಗಿಸುವ ಮೂಲಕ ಮಾದರಿ ಕಾರ್ಯಕ್ರಮಗಳನ್ನು ಮಾಡುತ್ತಿರುವ ಮುಳಿಯ ಜ್ಯುವೆಲ್ಲರ್ಸ್ ಪಾರದರ್ಶಕ ವ್ಯವಹಾರ , ಸಿಬ್ಬಂದಿಗಳ ನಗುಮೊಗದ ಸೇವೆಯಿಂದ  ಈಗಾಗಲೇ  ತಾಲೂಕಿನ ಜನತೆಯ ಪ್ರೀತಿಯ ಆಭರಣ ಮಳಿಗೆಯಾಗಿ ಬೆಳೆದಿದೆ.  ಸಂಸ್ಥೆ ಇನ್ನಷ್ಟು ಅಭಿವೃದ್ಧಿ ಹೊಂದಲಿ ಎಂದು ಪತ್ರಕರ್ತ ಮಾಜಿ ಗ್ರಾ.ಪಂ ಸದಸ್ಯ ಪ್ರಸಾದ್ ಶೆಟ್ಟಿ ಎಣಿಂಜೆ ಈ ವೇಳೆ ಮೆಚ್ಚುಗೆ ವ್ಯಕ್ತಪಡಿಸಿದರು.

ಮುಳಿಯ ಜ್ಯುವೆಲ್ಲರ್ಸ್ ಸಿಬ್ಬಂದಿಗಳಾದ ವಿನಯಚಂದ್ರ, ಅಭಿಷೇಕ್ ಉಪಸ್ಥಿತರಿದ್ದರು. ಶಾಲಾ ಶಿಕ್ಷಕ ಮಧು ಎಚ್ ಸಿ. ಸ್ವಾಗತಿಸಿದರು. ಶಿಕ್ಷಕರುಗಳಾದ ಕರುಣಾಕರ ಎನ್. ಶಾಂತಾ ಸಹಕರಿಸಿದರು.

Related posts

ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ ಪಡೆದ ಮಡಂತ್ಯಾರು ಸೆಕ್ರೇಡ್ ಹಾರ್ಟ್ ಆಂ.ಮಾ. ಶಾಲೆಯ ಸ್ಕೌಟ್ ಮಾಸ್ಟರ್ ಚಿದಾನಂದ್

Suddi Udaya

ಉಜಿರೆಯ ಸ್ಮಾರ್ಟ್ ಮೊಬೈಲ್ ಕೇರ್ ನಲ್ಲಿ ಕಳ್ಳತನ: ಕಳ್ಳತನದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Suddi Udaya

ಶಿಶಿಲ ಪರಿಶಿಷ್ಟ ಪಂಗಡ ಕಾಲೋನಿಗೆ ಪೊಲೀಸ್ ಅಧಿಕಾರಿಗಳ ಭೇಟಿ: ಸೈಬರ್ ಅಪರಾಧ, ಪೋಕ್ಸೋ ವಂಚನೆಗಳ ಬಗ್ಗೆ ಜಾಗೃತಿ

Suddi Udaya

ಸೆ.26-27: ಬೆಳ್ತಂಗಡಿಯಲ್ಲಿ ಊದು ಪೂಜೆ ಮತ್ತು ಬೋಳ್ತೆರ್ದ ಪಿಲಿಕುಲೆನ ಅಬ್ಬರದ ನಲಿಕೆ

Suddi Udaya

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೆಳ್ತಂಗಡಿ ಮುರ ನಿವಾಸಿ ಬೈಕ್ ಸವಾರ ಗಂಭೀರ, ಬೈಕ್ ನಲ್ಲಿದ್ದ ಪುಟ್ಟ ಮಗು ಸ್ಥಳದಲ್ಲೇ ಮೃತ್ಯು

Suddi Udaya

ಕೆಪಿಎಸ್ ಪುಂಜಾಲಕಟ್ಟೆ ಪದವಿಪೂರ್ವ ವಿಭಾಗದ ಕಾಲೇಜು ವಾರ್ಷಿಕೋತ್ಸವ

Suddi Udaya
error: Content is protected !!